Homeನಿಜವೋ ಸುಳ್ಳೋಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ ಮೋದಿ ಹೇಳಿಕೆಗೆ ಸೃಜನಾತ್ಮಕ ಪ್ರತಿಕ್ರಿಯೆಗಳು

- Advertisement -
- Advertisement -

ನಿಮಗೆ ಗೊತ್ತಿರಬೇಕಾದ ಎಲ್ಲಾ ಮಾಹಿತಿಗಳು

ನ್ಯೂಸ್ ನೇಷನ್ ಎಂಬ ಟಿವಿ ಚಾನೆಲ್‍ಗೆ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ನೀಡಿದ ಸಂದರ್ಶನವನ್ನು ಇನ್ನಾವುದಾದರೂ ಸಂದರ್ಶನದ ಜೊತೆ ಹೋಲಿಸಬೇಕೆಂದರೆ, ಅದನ್ನು 2018ರ ಜನವರಿ 22ರಂದು ಜೀ ಟಿವಿಗೆ ನೀಡಿದ ಸಂದರ್ಶನಕ್ಕೆ ಮಾತ್ರ ಹೋಲಿಸಬಹುದು. ಏಕೆಂದರೆ, ಅದರಲ್ಲಿ ಅವರ ಪ್ರಸಿದ್ಧ ‘ಪಕೋಡಾ ಹೇಳಿಕೆ’ ಹೊರಬಂದಿತ್ತು. ಇದೀಗ ನ್ಯೂಸ್ ನೇಷನ್‍ನಲ್ಲಿ ಅವರು ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ಯ ಕುರಿತು ಮಾತನಾಡಿದ್ದಾರೆ. ಈ ಸುದ್ದಿ ಪ್ರಸಾರವಾದ ನಂತರ ಇಲ್ಲಿಯವರೆಗೂ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಎಣೆಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳ ಹಲವು ಜನರ ಸೃಜನಶೀಲತೆಯ ಅಭಿವ್ಯಕ್ತಿಯಾಗಿಯೂ ಅದನ್ನು ನೋಡಬಹುದಾಗಿದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ಕೊಡಲಾಗಿದೆ.

ಮೊದಲಿಗೆ, ಮೋದಿಯವರು ಹೇಳಿದ್ದೇನು ನೋಡೋಣ.

ಇದೇ ಸಂದರ್ಭದಲ್ಲಿ ಮೋದಿಯವರ ಬಯೋಗ್ಯಾಸ್‍ಗೆ ಸಂಬಂಧಿಸಿದ ಇನ್ನೊಂದು ಹೇಳಿಕೆಯನ್ನೂ ಹಲವರು ನೆನಪಿಸಿಕೊಂಡಿದ್ದಾರೆ.

ಉದಾಹರಣೆಗೆ ವಿಜಯ ಕರ್ನಾಟಕದ ಅಂಕಣಕಾರರಾಗಿದ್ದ ಚಿಂತಕ ಕೆ.ಪಿ.ಸುರೇಶ್‍ರವರು ಹಳೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

https://m.facebook.com/story.php?story_fbid=1474653089338603&id=100003817783883

ಇದಕ್ಕೆ ಸಂಬಂಧಿಸಿದ ಹಳೆಯ ಕಾರ್ಟೂನ್ ಸಹಾ ಇಲ್ಲಿದೆ ನೋಡಿ

ಉದ್ಯಮಿ ರಾಜಾರಾಂ ತಲ್ಲೂರು ಅವರು ಮೋದಿಯವರ ಎಂಟೈಲ್ ಪೊಲಿಟಿಕಲ್ ಸೈನ್ಸ್ ಡಿಗ್ರಿಯನ್ನು ತಾವು ಪಡೆದುಕೊಂಡಿರದೇ ಇರುವುದಕ್ಕೆ ‘ಬೇಸರ ವ್ಯಕ್ತಪಡಿಸಿ’ ಈ ಪೋಸ್ಟ್ ಹಾಕಿದ್ದಾರೆ.

ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್‍ನ ಮುಖಂಡ ಓಮರ್ ಅಬ್ದುಲ್ಲಾರು ಟ್ವೀಟಿಸಿದ್ದು ಹೀಗೆ.

ವಾಯುಪಡೆಯಲ್ಲಿದ್ದ ಅಧಿಕಾರಿ (ಈಗ ಮೋದಿಯವರ ಟೀಕಾಕಾರ) ರಾಜೀವ್ ತ್ಯಾಗಿಯವರಿಗೆ ತುಂಬಾ ಸಿಟ್ಟು ಬಂದಿದ್ದರೂ, ವೈಜ್ಞಾನಿಕವಾಗಿ ಮೋಡಗಳಿಗೂ ವಾಯುದಾಳಿಗೂ ಇರುವ ಸಂಬಂಧದ ಬಗ್ಗೆ ವಿವರಿಸಿದ್ದಾರೆ. ಅವರ ಪ್ರಕಾರ ಬೇರೆ ಬೇರೆ ಬಗೆಯ ಮೋಡಗಳಿರುತ್ತವೆ ಮತ್ತು ಆ ಮೋಡಗಳಿದ್ದಾಗ ಒಂದೋ ಅವು ಏನೂ ಸಮಸ್ಯೆ ಮಾಡುವುದಿಲ್ಲ, ಇಲ್ಲವೇ ಶತ್ರುಪಡೆಯ ರಾಡಾರ್‍ನ ಅಗತ್ಯವೇ ಇಲ್ಲದೇ ಅವೇ ಧ್ವಂಸಗೊಳ್ಳುತ್ತವೆ. ಇವೆಲ್ಲಾ ವಾಯುಪಡೆಗಳಿಗೆ ಗೊತ್ತಿರುವ ಸಂಗತಿ. ಆದರೆ, ಇದಕ್ಕೆ ವಿರುದ್ಧವಾದ ಸಂಗತಿಯನ್ನು ಒಬ್ಬ ಅನಕ್ಷರಸ್ಥನಿಂದ ಕೇಳಬೇಕಾದ ದುರ್ಗತಿ ವಾಯುಪಡೆಗೆ ಬಂದಿತಲ್ಲಾ ಎಂದು ಕಿಡಿಕಾರಿದ್ದಾರೆ.

https://m.facebook.com/story.php?story_fbid=10161734759650176&id=817450175

ವೈದ್ಯರಾದ ಡಾ.ಅಶೋಕ್ ಕೆ.ಆರ್ ಅವರು ಮೊದಲು ಇದು ಯಾರೋ ಸುಳ್ಳೇ ಸೃಷ್ಟಿ ಮಾಡಿರುವುದು ಎಂದುಕೊಂಡರಂತೆ. ನಂತರ ನಿಜ ಎಂದು ಗೊತ್ತಾಯಿತು ಎಂದಿದ್ದಾರೆ. ಅವರಿಗೆ ಪ್ರತಿಕ್ರಿಯಿಸಿರುವ ಡಾ.ಸುಶಿ ಕಾಡನಕುಪ್ಪೆ ಸಹಾ ಅದೇ ಅಭಿಪ್ರಾಯವನ್ನು ಕಮೆಂಟಿಸಿದ್ದಾರೆ.

ಹಾಗೆಯೇ ಇನ್ನೊಬ್ಬ ನೆಟ್ಟಿಗರು ಹೀಗೆ ಹೇಳುತ್ತಾರೆ.

‘ಇದರಲ್ಲಿ ತಮಾಶೆ ಏನೂ ಇಲ್ಲ. ನಮ್ಮ ಮೋದಿಜಿಗೆ ಮತ್ತೆ ಅಧಿಕಾರ ಸಿಕ್ಕರೆ ಸೂರ್ಯನಿಗೂ ಮನುಷ್ಯರನ್ನು ಕಳಿಸುತ್ತಾರೆ. ಮೊದಲ ಬಾರಿ ಸೂರ್ಯಯಾನಕ್ಕೆ ತನ್ನ ಶಿಷ್ಯಂದಿರಾದ ಸಂಬಿತ್ ಪಾತ್ರ ಮತ್ತು ತೇಜಸ್ವಿ ಸೂರ್ಯಗಳನ್ನು ಕಳಿಸಬಹುದು. ಪಬ್ಲಿಸಿಟಿ ಜಾಸ್ತಿ ಸಿಗೋದರಿಂದ ತಾನೇ ಹೋದರೂ ಹೋಗಬಹುದು.’

ಎಲ್ಲಕ್ಕಿಂತ ಸತೀಶ್ ಆಚಾರ್ಯ ಅವರ ಕಾರ್ಟೂನು ಮೋದಿಯವರನ್ನು ವ್ಯಂಗ್ಯ ಮಾಡುವುದರಲ್ಲಿ ಸಾಕಷ್ಟು ಮುಂದೆ ಹೋಗಿದೆ. ಇಸ್ರೋದ ವಿಜ್ಞಾನಿಗಳಿಗೆ ಸೂರ್ಯಯಾನಕ್ಕೆ ತಯಾರಿ ಮಾಡಲು ಸೂಚಿಸುವ ಮೋದಿ, ನಾವು ಸೂರ್ಯನಲ್ಲಿಗೆ ರಾತ್ರಿ ಹೋದರಾಯಿತು ಎನ್ನುತ್ತಿದ್ದಾರೆ.

ಇನ್ನು ಚಂದ್ರಯಾನವನ್ನೂ ನೆಟ್ಟಿಗರು ಬಿಟ್ಟಿಲ್ಲ. ಚಂದ್ರನ ಮೇಲೆ ಲ್ಯಾಂಡ್ ಆಗಲು ಕಡಿಮೆ ಜಾಗವಿದೆ ಎಂದು ಹೇಳುವ ವಿಜ್ಞಾನಿಗಳಿಗೆ, ‘ಹುಣ್ಣಿಮೆಯ ದಿನ ಹೋದರೆ ಚಂದ್ರ ದೊಡ್ಡದಾಗಿರುತ್ತಾನೆ’ ಎಂಬ ಸಲಹೆ ನೀಡುತ್ತಾರಂತೆ.

ಇದಲ್ಲದೇ ಮತ್ತೊಂದು ಪೋಸ್ಟ್ ಹೀಗೆ ಹೇಳುತ್ತದೆ.

‘ಮೋದಿಯವರು ವಿಮಾನಗಳಿಗೆ ರಿವರ್ಸ್ ಗೇರ್‍ನಲ್ಲಿ ಹೋಗಲು ಸೂಚಿಸಿದ್ದರಂತೆ. ಅದರಿಂದ ಪಾಕಿಸ್ತಾನಕ್ಕೆ ವಿಮಾನಗಳು ಬರುತ್ತಿವೆಯಾ, ಹೋಗುತ್ತಿವೆಯಾ ಎಂದು ಗೊತ್ತಾಗಲಿಲ್ಲ’

ಇನ್ನು ಮೋಡವೆಂದರೆ, ರಾಡಾರ್ ಎಂದರೆ ಮೋದಿಯವರು ಏನು ತಿಳಿದುಕೊಂಡಿರಬಹುದು ಎಂಬ ಕುರಿತೂ ಹಲವು ಕಾರ್ಟೂನ್‍ಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...