Homeಕರ್ನಾಟಕರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ...

ರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಗಾರ್ಲೆಂಡ್ ಮಾಡಿ ಸ್ವಾಗತ ಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ.

ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್‌ ಠಾಣೆಯ ರೌಡಿಪಟ್ಟಿಯಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹೆಸರಿದೆ ಎಂದು ಪೊಲೀಸರು ತಿಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫೈಟರ್ ರವಿ ಪರಸ್ಪರರು ಕೈಜೋಡಿಸಿ ನಮಸ್ಕಾರ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಎಂಥವರಿಗೂ ಇದು ಪ್ರಧಾನಿ ಹುದ್ದೆಯ ಘನತೆ ಕುಗ್ಗಿಸುವ ದೃಶ್ಯ ಎನ್ನುವುದು ಮನವರಿಕೆಯಾಗುತ್ತದೆ.

ಇದೀಗ ಕಾಂಗ್ರೆಸ್, ಫೈಟರ್ ರವಿ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಮೋದಿ ಅವರು ಮಂಡ್ಯಕ್ಕೆ ಬಂದಾಗ ಫೈಟರ್ ರವಿ ಹಾಗೂ ಮೋದಿ ಪರಸ್ಪರ ಕೈಜೋಡಿಸಿ ನಮಸ್ಕರಿಸುವ ಫೋಟೋ ಹಂಚಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

ಭಾನುವಾರ ದಶಪಥ ಉದ್ಘಾಟನೆಗೆ ಪಿಇಎಸ್‌ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ವೇಳೆ ಮಲ್ಲಿಕಾರ್ಜುನ (ಫೈಟರ್ ರವಿ) ಕೂಡ ಇದ್ದರು. ಪ್ರಧಾನಿ ಮೋದಿ ಹಾಗೂ ಫೈಟರ್ ರವಿ ಪರಸ್ಪರ ನಮಸ್ಕಾರ ಮಾಡಿದರು. ಮಲ್ಲಿಕಾರ್ಜುನ ಮೇಲೆ ರೌಡಿಶೀಟರ್ ಆರೋಪ ಇದೆ ಎಂದು ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ”ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ..  ಇಲ್ಲ. ಫೈಟರ್ ರವಿ ಎಂಬ ರೌಡಿಶೀಟರ್ ಎದುರು ಕೈಮುಗಿದು ನಿಂತ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು” ಎಂದು ಟ್ವಿಟ್ ಮಾಡಿದೆ.

ಈ ಹಿಂದೆ ಕಾಂಗ್ರೆಸ್, ”ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿತ್ತು.

”ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು. ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ಈಗ ರೌಡಿ ಶೀಟರ್ ಆಗಿದ್ದ ಫೈಟರ್ ರವಿ ಬಿಜೆಪಿ ನಾಯಕರೊಟ್ಟಿಗೆ ನಿಂತು ಪ್ರಧಾನಿ ಮೋದಿಗೆ ಸ್ವಾಗತ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿಯೂ ರೈಡಿ ಶೀಟರ್‌ಗೆ ಕೈಮುಗಿದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಅವರು ಪ್ರಧಾನಿ ಹುದ್ದೆಗೆ ಕಳಂಕ ತಂದಂತಾಗಿದೆ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...