Homeಕರ್ನಾಟಕರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ...

ರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಗಾರ್ಲೆಂಡ್ ಮಾಡಿ ಸ್ವಾಗತ ಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ.

ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್‌ ಠಾಣೆಯ ರೌಡಿಪಟ್ಟಿಯಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹೆಸರಿದೆ ಎಂದು ಪೊಲೀಸರು ತಿಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫೈಟರ್ ರವಿ ಪರಸ್ಪರರು ಕೈಜೋಡಿಸಿ ನಮಸ್ಕಾರ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಎಂಥವರಿಗೂ ಇದು ಪ್ರಧಾನಿ ಹುದ್ದೆಯ ಘನತೆ ಕುಗ್ಗಿಸುವ ದೃಶ್ಯ ಎನ್ನುವುದು ಮನವರಿಕೆಯಾಗುತ್ತದೆ.

ಇದೀಗ ಕಾಂಗ್ರೆಸ್, ಫೈಟರ್ ರವಿ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಮೋದಿ ಅವರು ಮಂಡ್ಯಕ್ಕೆ ಬಂದಾಗ ಫೈಟರ್ ರವಿ ಹಾಗೂ ಮೋದಿ ಪರಸ್ಪರ ಕೈಜೋಡಿಸಿ ನಮಸ್ಕರಿಸುವ ಫೋಟೋ ಹಂಚಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

ಭಾನುವಾರ ದಶಪಥ ಉದ್ಘಾಟನೆಗೆ ಪಿಇಎಸ್‌ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ವೇಳೆ ಮಲ್ಲಿಕಾರ್ಜುನ (ಫೈಟರ್ ರವಿ) ಕೂಡ ಇದ್ದರು. ಪ್ರಧಾನಿ ಮೋದಿ ಹಾಗೂ ಫೈಟರ್ ರವಿ ಪರಸ್ಪರ ನಮಸ್ಕಾರ ಮಾಡಿದರು. ಮಲ್ಲಿಕಾರ್ಜುನ ಮೇಲೆ ರೌಡಿಶೀಟರ್ ಆರೋಪ ಇದೆ ಎಂದು ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ”ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ..  ಇಲ್ಲ. ಫೈಟರ್ ರವಿ ಎಂಬ ರೌಡಿಶೀಟರ್ ಎದುರು ಕೈಮುಗಿದು ನಿಂತ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು” ಎಂದು ಟ್ವಿಟ್ ಮಾಡಿದೆ.

ಈ ಹಿಂದೆ ಕಾಂಗ್ರೆಸ್, ”ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿತ್ತು.

”ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು. ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ಈಗ ರೌಡಿ ಶೀಟರ್ ಆಗಿದ್ದ ಫೈಟರ್ ರವಿ ಬಿಜೆಪಿ ನಾಯಕರೊಟ್ಟಿಗೆ ನಿಂತು ಪ್ರಧಾನಿ ಮೋದಿಗೆ ಸ್ವಾಗತ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿಯೂ ರೈಡಿ ಶೀಟರ್‌ಗೆ ಕೈಮುಗಿದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಅವರು ಪ್ರಧಾನಿ ಹುದ್ದೆಗೆ ಕಳಂಕ ತಂದಂತಾಗಿದೆ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...