Homeಕರ್ನಾಟಕರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ...

ರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಗಾರ್ಲೆಂಡ್ ಮಾಡಿ ಸ್ವಾಗತ ಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ.

ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್‌ ಠಾಣೆಯ ರೌಡಿಪಟ್ಟಿಯಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹೆಸರಿದೆ ಎಂದು ಪೊಲೀಸರು ತಿಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫೈಟರ್ ರವಿ ಪರಸ್ಪರರು ಕೈಜೋಡಿಸಿ ನಮಸ್ಕಾರ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಎಂಥವರಿಗೂ ಇದು ಪ್ರಧಾನಿ ಹುದ್ದೆಯ ಘನತೆ ಕುಗ್ಗಿಸುವ ದೃಶ್ಯ ಎನ್ನುವುದು ಮನವರಿಕೆಯಾಗುತ್ತದೆ.

ಇದೀಗ ಕಾಂಗ್ರೆಸ್, ಫೈಟರ್ ರವಿ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಮೋದಿ ಅವರು ಮಂಡ್ಯಕ್ಕೆ ಬಂದಾಗ ಫೈಟರ್ ರವಿ ಹಾಗೂ ಮೋದಿ ಪರಸ್ಪರ ಕೈಜೋಡಿಸಿ ನಮಸ್ಕರಿಸುವ ಫೋಟೋ ಹಂಚಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

ಭಾನುವಾರ ದಶಪಥ ಉದ್ಘಾಟನೆಗೆ ಪಿಇಎಸ್‌ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ವೇಳೆ ಮಲ್ಲಿಕಾರ್ಜುನ (ಫೈಟರ್ ರವಿ) ಕೂಡ ಇದ್ದರು. ಪ್ರಧಾನಿ ಮೋದಿ ಹಾಗೂ ಫೈಟರ್ ರವಿ ಪರಸ್ಪರ ನಮಸ್ಕಾರ ಮಾಡಿದರು. ಮಲ್ಲಿಕಾರ್ಜುನ ಮೇಲೆ ರೌಡಿಶೀಟರ್ ಆರೋಪ ಇದೆ ಎಂದು ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ”ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ..  ಇಲ್ಲ. ಫೈಟರ್ ರವಿ ಎಂಬ ರೌಡಿಶೀಟರ್ ಎದುರು ಕೈಮುಗಿದು ನಿಂತ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು” ಎಂದು ಟ್ವಿಟ್ ಮಾಡಿದೆ.

ಈ ಹಿಂದೆ ಕಾಂಗ್ರೆಸ್, ”ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿತ್ತು.

”ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು. ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ಈಗ ರೌಡಿ ಶೀಟರ್ ಆಗಿದ್ದ ಫೈಟರ್ ರವಿ ಬಿಜೆಪಿ ನಾಯಕರೊಟ್ಟಿಗೆ ನಿಂತು ಪ್ರಧಾನಿ ಮೋದಿಗೆ ಸ್ವಾಗತ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿಯೂ ರೈಡಿ ಶೀಟರ್‌ಗೆ ಕೈಮುಗಿದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಅವರು ಪ್ರಧಾನಿ ಹುದ್ದೆಗೆ ಕಳಂಕ ತಂದಂತಾಗಿದೆ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...