Homeಮುಖಪುಟ'ಮೋದಿ ಸರ್‌ನೇಮ್‌' ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಸರ್‌ನೇಮ್‌’ ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

‘ಮೋದಿ ಸರ್‌ನೇಮ್’ ಹೇಳಿಕೆಯ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಯಾವುದೇ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ದೋಷಾರೋಪಣೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಕಾಯ್ದಿರಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಧಿಸಲಾಗಿದ್ದ 2 ವರ್ಷ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದ್ದು, ಇದರಿಂದ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರಿಗೆ ಮತ್ತೆ ರಿಲೀಫ್‌ ಸಿಕ್ಕಿಲ್ಲ. ಬೇಸಿಗೆ ರಜೆಯ ನಂತರ ಅಂದರೆ, ಜೂನ್ 4 ರ ಬಳಿಕ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ತೀರ್ಪು ಪ್ರಕಟಿಸಲಿದ್ದಾರೆ. ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ಮೇಲೆ ಆದೇಶ ನೀಡಲಿದೆ.

ರಾಹುಲ್ ಗಾಂಧಿ ಅವರ ಮೇಲೆ ‘ಮೋದಿ ಸರ್‌ನೇಮ್’ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು, ರಾಹುಲ್ ತಪ್ಪಿತಸ್ಥ ಎಂದು ಹೇಳಿ, ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿತ್ತು. ಇದರಿಂದ ಅವರು ಸಂಸತ್ ಸದಸ್ಯತ್ವದಿಂದ ಅನರ್ಹರಾದರು.

ಆ ಬಳಿಕ ರಾಹುಲ್ ಅವರು ನ್ಯಾಯಾಲಯದ ಆರೋಪಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ನಡೆಸಿತು. ರಾಹುಲ್ ಪರ ವಕೀಲರು, ಈ ಅಪರಾಧವು ಸ್ವಭಾವತಃ ಗಂಭೀರವಾಗಿಲ್ಲ ಮತ್ತು ನೈತಿಕ ಕ್ಷೋಭೆಯನ್ನು ಒಳಗೊಂಡಿಲ್ಲ ಮತ್ತು ರಾಹುಲ್ ಗಾಂಧಿಯವರ ಅನರ್ಹತೆಯಿಂದ ಅವರ ಮತ್ತು ಅವರ ಕ್ಷೇತ್ರದ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸಲ್ಲಿಸಿದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಇದನ್ನೂ ಓದಿ: ರಾಹುಲ್ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ

ಪ್ರಕರಣದ ಹಿನ್ನೆಲೆ:

2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು, ”ಎಲ್ಲಾ ಕಳ್ಳರಿಗೂ ಮೋದಿ ಎಂಬ ಹೆಸರು ಏಕೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ಮೇಲೆ ಸೂರತ್ ಪಶ್ಚಿಮ ಶಾಸಕ ಪೂರ್ಣೇಶ್ ಮೋದಿ ಅವರು ಕ್ರಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧೀಸಿದಂತೆ ಮಾರ್ಚ್ 23 ರಂದು ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್‌ಗೆ ಎರಡು ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿತ್ತು.

1951ರ ಪ್ರಜಾಪ್ರತಿನಿಧಿ ಕಾಯ್ದೆಯ 8ನೇ ಪರಿಚ್ಛೇದದೊಂದಿಗೆ, ಭಾರತದ ಸಂವಿಧಾನದ 102(1)(ಇ) ವಿಧಿಯ ನಿಬಂಧನೆಗಳ ಪ್ರಕಾರ, ಮಾರ್ಚ್ 23, 2023 ರಿಂದ (ಶಿಕ್ಷೆಯಾದ ದಿನಾಂಕದಿಂದ) ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲಿನ ದೋಷಾರೋಪನೆಗೆ ತಡೆ ಕೋರಿ ಸಲ್ಲಿಸಿದ ಮನವಿಯನ್ನು ಏಪ್ರಿಲ್ 20 ರಂದು ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಬಿನ್ ಮೊಗೇರಾ ಅವರು ತಿರಸ್ಕರಿಸಿದ್ದರು.

ಗಾಂಧಿಯವರು ಗುಜರಾತ್ ಹೈಕೋರ್ಟ್‌ನ ಮುಂದೆ ಸಲ್ಲಿಸಿದ ಮನವಿಯಲ್ಲಿ, ಅಸಮಪಾರ್ಶ್ವದ ಶಿಕ್ಷೆಯ ಆಧಾರದ ಮೇಲೆ ಮತ್ತು ಅಂತಹ ಶಿಕ್ಷೆಯು ಲೋಕಸಭೆಯ ಸದಸ್ಯತ್ವವನ್ನು ಅನರ್ಹಗೊಳಿಸುವ ಮೂಲಕ ತನಗೆ ಬದಲಾಯಿಸಲಾಗದ ಹಾನಿಯನ್ನುಂಟುಮಾಡಿದೆ ಎಂದು ತನ್ನ ಅಪರಾಧವನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ನ್ಯಾಯಾಲಯವು ಗಾಂಧಿಗೆ ಜಾಮೀನು ಮಂಜೂರು ಮಾಡಿದರೂ, ಶಿಕ್ಷೆಗೆ ತಡೆಯಾಜ್ಞೆ ನೀಡುವ ಅವರ ಮನವಿಯನ್ನು ಅದು ತಿರಸ್ಕರಿಸಿತು.

ಕಳೆದ ಬುಧವಾರ, ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ ಅವರು ಈ ಪ್ರಕರಣವನ್ನು ತುರ್ತು ವಿಚಾರಣೆಗಾಗಿ ತಮ್ಮ ಮುಂದೆ ಹಾಜರುಪಡಿಸಿದ ನಂತರ ವಿಚಾರಣೆಯಿಂದ ಹಿಂದೆ ಸರಿದಿದ್ದರು. ನಂತರ ಪ್ರಕರಣವನ್ನು ನ್ಯಾಯಮೂರ್ತಿ ಪ್ರಚ್ಛಕ್ ಅವರಿಗೆ ವಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...