Homeಮುಖಪುಟ'ಮೋದಿ ಸರ್‌ನೇಮ್‌' ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಸರ್‌ನೇಮ್‌’ ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

‘ಮೋದಿ ಸರ್‌ನೇಮ್’ ಹೇಳಿಕೆಯ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಯಾವುದೇ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ದೋಷಾರೋಪಣೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಕಾಯ್ದಿರಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಧಿಸಲಾಗಿದ್ದ 2 ವರ್ಷ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದ್ದು, ಇದರಿಂದ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರಿಗೆ ಮತ್ತೆ ರಿಲೀಫ್‌ ಸಿಕ್ಕಿಲ್ಲ. ಬೇಸಿಗೆ ರಜೆಯ ನಂತರ ಅಂದರೆ, ಜೂನ್ 4 ರ ಬಳಿಕ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ತೀರ್ಪು ಪ್ರಕಟಿಸಲಿದ್ದಾರೆ. ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ಮೇಲೆ ಆದೇಶ ನೀಡಲಿದೆ.

ರಾಹುಲ್ ಗಾಂಧಿ ಅವರ ಮೇಲೆ ‘ಮೋದಿ ಸರ್‌ನೇಮ್’ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು, ರಾಹುಲ್ ತಪ್ಪಿತಸ್ಥ ಎಂದು ಹೇಳಿ, ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿತ್ತು. ಇದರಿಂದ ಅವರು ಸಂಸತ್ ಸದಸ್ಯತ್ವದಿಂದ ಅನರ್ಹರಾದರು.

ಆ ಬಳಿಕ ರಾಹುಲ್ ಅವರು ನ್ಯಾಯಾಲಯದ ಆರೋಪಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ನಡೆಸಿತು. ರಾಹುಲ್ ಪರ ವಕೀಲರು, ಈ ಅಪರಾಧವು ಸ್ವಭಾವತಃ ಗಂಭೀರವಾಗಿಲ್ಲ ಮತ್ತು ನೈತಿಕ ಕ್ಷೋಭೆಯನ್ನು ಒಳಗೊಂಡಿಲ್ಲ ಮತ್ತು ರಾಹುಲ್ ಗಾಂಧಿಯವರ ಅನರ್ಹತೆಯಿಂದ ಅವರ ಮತ್ತು ಅವರ ಕ್ಷೇತ್ರದ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸಲ್ಲಿಸಿದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಇದನ್ನೂ ಓದಿ: ರಾಹುಲ್ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ

ಪ್ರಕರಣದ ಹಿನ್ನೆಲೆ:

2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು, ”ಎಲ್ಲಾ ಕಳ್ಳರಿಗೂ ಮೋದಿ ಎಂಬ ಹೆಸರು ಏಕೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ಮೇಲೆ ಸೂರತ್ ಪಶ್ಚಿಮ ಶಾಸಕ ಪೂರ್ಣೇಶ್ ಮೋದಿ ಅವರು ಕ್ರಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧೀಸಿದಂತೆ ಮಾರ್ಚ್ 23 ರಂದು ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್‌ಗೆ ಎರಡು ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿತ್ತು.

1951ರ ಪ್ರಜಾಪ್ರತಿನಿಧಿ ಕಾಯ್ದೆಯ 8ನೇ ಪರಿಚ್ಛೇದದೊಂದಿಗೆ, ಭಾರತದ ಸಂವಿಧಾನದ 102(1)(ಇ) ವಿಧಿಯ ನಿಬಂಧನೆಗಳ ಪ್ರಕಾರ, ಮಾರ್ಚ್ 23, 2023 ರಿಂದ (ಶಿಕ್ಷೆಯಾದ ದಿನಾಂಕದಿಂದ) ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲಿನ ದೋಷಾರೋಪನೆಗೆ ತಡೆ ಕೋರಿ ಸಲ್ಲಿಸಿದ ಮನವಿಯನ್ನು ಏಪ್ರಿಲ್ 20 ರಂದು ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಬಿನ್ ಮೊಗೇರಾ ಅವರು ತಿರಸ್ಕರಿಸಿದ್ದರು.

ಗಾಂಧಿಯವರು ಗುಜರಾತ್ ಹೈಕೋರ್ಟ್‌ನ ಮುಂದೆ ಸಲ್ಲಿಸಿದ ಮನವಿಯಲ್ಲಿ, ಅಸಮಪಾರ್ಶ್ವದ ಶಿಕ್ಷೆಯ ಆಧಾರದ ಮೇಲೆ ಮತ್ತು ಅಂತಹ ಶಿಕ್ಷೆಯು ಲೋಕಸಭೆಯ ಸದಸ್ಯತ್ವವನ್ನು ಅನರ್ಹಗೊಳಿಸುವ ಮೂಲಕ ತನಗೆ ಬದಲಾಯಿಸಲಾಗದ ಹಾನಿಯನ್ನುಂಟುಮಾಡಿದೆ ಎಂದು ತನ್ನ ಅಪರಾಧವನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ನ್ಯಾಯಾಲಯವು ಗಾಂಧಿಗೆ ಜಾಮೀನು ಮಂಜೂರು ಮಾಡಿದರೂ, ಶಿಕ್ಷೆಗೆ ತಡೆಯಾಜ್ಞೆ ನೀಡುವ ಅವರ ಮನವಿಯನ್ನು ಅದು ತಿರಸ್ಕರಿಸಿತು.

ಕಳೆದ ಬುಧವಾರ, ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ ಅವರು ಈ ಪ್ರಕರಣವನ್ನು ತುರ್ತು ವಿಚಾರಣೆಗಾಗಿ ತಮ್ಮ ಮುಂದೆ ಹಾಜರುಪಡಿಸಿದ ನಂತರ ವಿಚಾರಣೆಯಿಂದ ಹಿಂದೆ ಸರಿದಿದ್ದರು. ನಂತರ ಪ್ರಕರಣವನ್ನು ನ್ಯಾಯಮೂರ್ತಿ ಪ್ರಚ್ಛಕ್ ಅವರಿಗೆ ವಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...