Homeಅಂಕಣಗಳುಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ

ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ

- Advertisement -
- Advertisement -

ಕೊರೋನ ಮಹಾಮಾರಿ ಹಿಡಿಯಾಗಿ ಪ್ರಪಂಚವನ್ನೇ ಕಾಡಲುಹತ್ತಿದ್ದರಿಂದ ಯಾವ ದೇಶದವರೂ ಭಾರತಕ್ಕೆ ಬಂಡವಾಳ ತೆಗೆದುಕೊಂಡು ಬಂದು ಉದ್ಯಮಗಳನ್ನು ಆರಂಭಿಸುವ ಸಾಧ್ಯತೆಗಳಿಲ್ಲ ಎಂಬುದನ್ನು ಮನಗಂಡು ಈಗ ಹೊಸ ರಾಗ ಹಾಡಲು ಮೋದಿಯವರು ತೊಡಗಿದ್ದಾರೆ. ಅವರ ಇಂದಿನ ಸ್ಲೋಗನ್‍ಗಳೆಂದರೆ ಆತ್ಮ ನಿರ್ಭರತೆ, ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನಗಳನ್ನು ಬೆಳಸಿಕೊಳ್ಳುವುದು. ಇದು ಸರಿಯಾದ ತೀರ್ಮಾನವೇ ಸರಿ. ಆದರೆ ಈ ತತ್ವಗಳಿಗೆ ಮೋದಿ ಸರ್ಕಾರ ಮುಂದೆ ಎಂದೆಂದೂ ಬದ್ಧವಾಗಿ ಇರುತ್ತದೆಯೇ ಎಂಬುದು ಮೂಲ ಭೂತ ಪ್ರಶ್ನೆ.

ಕೊರೋನ ವ್ಯಾದಿ ವಿಶ್ವದೆಲ್ಲಡೆ ಇಲ್ಲವಾಗಿ ಆರ್ಥಿಕ ಚೇತರಿಕೆಯೂ ಆದಮೇಲೂ ಆತ್ಮನಿರ್ಭರತೆ ಇವರ ಸ್ಲೋಗನ್ ಆಗಿರುತ್ತದೆಯೇ ಎಂಬುದು ನಮ್ಮ ಮುಂದಿರುವ ಪ್ರಶ್ನೆ. ಇದನ್ನು ಕಾಲವೇ ನಿರ್ಧರಿಸುತ್ತದೆ.

ಆತ್ಮನಿರ್ಭರತೆ ಇನ್ನು ಮುಂದೆ ಭಾರತ ಸರ್ಕಾರದ ನೀತಿ ಎಂದು ಮೋದಿಯವರು ಘೋಷಿಸಿದರೆ ಮಾತ್ರ ಇದು ಬರಿ ಸ್ಲೋಗನ್ ಅಲ್ಲ, ನಮ್ಮ ರಾಷ್ಟ್ರ ನೀತಿ ಎಂದು ನಾವು ನಂಬಬಹುದು. ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ, ಇವು ಬರಿಯ ಸ್ಲೋಗನ್‍ಗಳಾಗಬಾರದು.

ಸ್ವದೇಶಿ ಒಂದು ವ್ರತವಾಗಬೇಕು. ಸರ್ಕಾರ ಈ ವ್ರತವನ್ನು ಕಾರ್ಯಗೊಳಿಸಬೇಕು. ಜಪಾನಿನಲ್ಲಿ ಬೃಹತ್ ಯಂತ್ರಗಳಿಂದ ವಿವಿಧ ವಸ್ತುಗಳನ್ನು ತಯಾರಿಸುತ್ತಾರೆ. ಆದರೆ ಅವೆಲ್ಲವೂ ರಫ್ತಿಗಾಗಿ. ಅವರ ನಿತ್ಯದ ಅಗತ್ಯತೆಯ ವಸ್ತುಗಳೆನ್ನೆಲ್ಲ ಅವರು ಗೃಹೋದ್ಯೋಗದ ಮೂಲಕ ಪಡೆಯುತ್ತಾರೆ. ಗೃಹೋದ್ಯೋಗದಿಂದ ತಯಾರಾದ ಪದಾರ್ಥಗಳನ್ನು ಇವು ನಮ್ಮ ಹೆಮ್ಮೆಯ ಪದಾರ್ಥಗಳೆಂದು ಭಾವಿಸಿ ಬಳಸುತ್ತಾರೆ. ಇದೇ ಆತ್ಮನಿರ್ಭರತೆ. ಇದಕ್ಕೆ ಮೋದಿಯವರ ಸಹಮತ ಇದೆಯೇ? ನಮ್ಮದು ಪ್ರಜಾ ಸಂಖ್ಯೆ ಅಧಿಕವಾಗಿರುವ ದೇಶ. ಇಲ್ಲಿ ಜನರ ಕೈಗೆ ಕೆಲಸ ಕೊಡಬೇಕು. ಅದಕ್ಕೆ ಅನುಗಣವಾದ ಅಪ್ರೋಪ್ರಿಯೇಟ್ ಟೆಕ್ನಾಲಾಜಿಯನ್ನೇ ನಾವು ಅಳವಡಿಸಿಕೊಳ್ಳಬೇಕು. ಬೃಹತ್ ಯಂತ್ರಗಳು, ದೈತ್ಯ ಯಂತ್ರಗಳು, ಸ್ವಯಂ ಚಾಲಿತ ಯಂತ್ರಗಳು ನಮ್ಮ ಜನರು ಉದ್ಯೋಗವನ್ನು ಕಸಿದುಕೊಳ್ಳುತ್ತವೆ. ಬಡಜನರ ಹೊಟ್ಟೆಯ ಮೇಲೆ ಹೊಡೆಯುತ್ತವೆ.

ಆದ್ದರಿಂದ ನಮ್ಮ ಜನರ ಉದ್ಯೋಗಗಳನ್ನು ಕಸಿಯದ ಯಂತ್ರೋದ್ಯಮಕ್ಕೆ ನಮ್ಮ ಆದ್ಯತೆ ಎಂದು ಸರ್ಕಾರ ಘೋಷಿಸುತ್ತದೆಯೆ?

ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂಬ ಸ್ಲೋಗನ್‍ಗಳನ್ನು ಮೋದಿಯವರು ಉಚ್ಛರಿಸಿದರು. ಮೇಡ್ ಇನ್ ಇಂಡಿಯಾ ಸ್ಲೋಗನ್ ಅನ್ನು ಇಂದಿರಾ ಗಾಂಧಿ ಹಿಂದೆಯೆ ಘೋಷಣೆ ಮಾಡಿದ್ದರು. ಈ ಎರಡು ಘೋಷಣೆಗಳು ದೋಷಪೂರಿತವಾದದ್ದು. ಭಾರತದಲ್ಲಿ ತಯಾರಾದ ಮಾತ್ರಕ್ಕೆ ಆ ಪದಾರ್ಥಗಳು ಸ್ವದೇಶಿ ಅಲ್ಲ. ಬಂಡವಾಳಗಾರರು ಹೆಚ್ಚಿನ ಲಾಭಗಳಿಕೆಗಾಗಿಯೇ ಉದ್ಯಮ ನಡೆಸುವುದು. ಬಂಡವಾಳಶಾಹಿಗಳು ಭಾರತಿಯರಿರಬಹುದು, ಬಹುರಾಷ್ಟ್ರೀಯರಿರಬಹುದು. ಅವರಿಬ್ಬರಿದೂ ಉದ್ದೇಶ ಒಂದೆ. ಅದೆಂದರೆ ತಮ್ಮ ಶಕ್ತಿ ಮೀರಿ ಲಾಭ ಗಳಿಸುವುದು. ಇದರಲ್ಲಿ ಒಂದು ನಾಡ ಕತ್ತಿ, ಮತ್ತೊಂದು ಸೀಮೆಯ ಕತ್ತಿ. ಒಟ್ಟಿನಲ್ಲಿ ಅವರೆಡು ಕ್ಷೌರದ ಕತ್ತಿಗಳೆ. ಅವೆರಡು ಬಯಸುವುದು ಹೆಚ್ಚಿಗೆ ಲಾಭ, ಅಗ್ಗದ ಶ್ರಮಶಕ್ತಿ, ಸಂಪನ್ಮೂಲಗಳ ಲೂಟಿ.

ಆದ್ದರಿಂದ ಈ ಲೂಟಿಕೋರರು ಭಾರತದ ಉದ್ಯಮಪತಿಗಳೆ ಆಗಿದ್ದರೂ, ಬೇರೆ ರಾಷ್ಟ್ರಗಳ ಶ್ರೀಮಂತರೇ ಆಗಿದ್ದರೂ ಅವರನ್ನು ದೂರ ಇಡಬೇಕು. ಬದಲಿಗೆ ಸರ್ಕಾರ, ಸ್ಥಳೀಯ ಸಂಸ್ಥೆಗಳು ಮತ್ತು ಸಹಕಾರಿ ಸಂಸ್ಥೆಗಳ ಮೂಲಕ ಸಣ್ಣ ಕೈಗಾರಿಕೆಗಳಲ್ಲಿನ ಉತ್ಪಾದನೆ ಮಾತ್ರವೇ ಸ್ವದೇಶಿ ಅನಿಸಿಕೊಳ್ಳುತ್ತದೆ.

ನಮ್ಮಲ್ಲಿ ತಯಾರಾಗದ ಪದಾರ್ಥಗಳನ್ನು ತಯಾರು ಮಾಡಲು ಪರದೇಶದ ಕಂಪನಿಗಳನ್ನು ಭಾರತಕ್ಕೆ ಕರೆತರಬಹುದು. ಆದರೆ ಒಂದು ಕರಾರಿನ ಮೇಲೆ ಮಾತ್ರ. ಅದೆಂದರೆ ಹಾಗೇ ಬರುವವರು ಹತ್ತು ವರ್ಷಗಳ ಕಾಲ ಮಾತ್ರ ಭಾರತದಲ್ಲಿ ತಮ್ಮ ಉದ್ಯಮವನ್ನು ನಡೆಸಬಹುದು ಮತ್ತು ನಮ್ಮ ಜನರಿಗೆ ಆ ಪದಾರ್ಥಗಳ ತಯಾರಿಕೆಯ ತಂತ್ರಜ್ಞಾನವನ್ನು ಕಲಿಸಿಕೊಟ್ಟು ಹೋಗಬೇಕು.

ವಲಸಿಗ ಕಾರ್ಮಿಕರು ಈಗ ಬಹುಸಂಖ್ಯೆಯಲ್ಲಿ ನಗರಗಳನ್ನು, ಪಟ್ಟಣದಗಳನ್ನು ಬಿಟ್ಟು ಗ್ರಾಮಗಳಿಗೆ ಹೋಗಿದ್ದಾರೆ. ಅವರು ತಮ್ಮ ಗ್ರಾಮಗಳಲ್ಲಿ ಜೀವನ ನಡೆಸುವುದಾದರೂ ಹೇಗೆ? ಭೂಮಿತಿ ಶಾಸನವನ್ನು ಪುನಃ ಪರಿಶೀಲಿಸಿ ಸೀಲಿಂಗ್ ಲಿಮಿಟ್ ಅನ್ನು ಇಳಿಸಿ ಯಾರು ವ್ಯವಸಾಯದಲ್ಲಿ ತೊಡಗಿಕೊಳ್ಳಲು ಆಶಿಸುವರೋ ಅವರಿಗೆ ತಲಾ ನಾಲ್ಕುವರೆ ಎಕರೆ ಕುಷ್ಕಿ ಜಮೀನನ್ನು ಮಂಜೂರು ಮಾಡಬೇಕು. ಹೀಗೆ ಸರ್ಕಾರ ಕೊಟ್ಟ ಭೂಮಿಯನ್ನು ಮಾರಾಟ-ಭೋಗ್ಯ ಯಾವುದನ್ನು ಮಾಡುವ ಆಗಿಲ್ಲ ಎಂದು ಕಾನೂನು ಮಾಡಬೇಕು. ಉಳಿದ ವಲಸಿಗರಿಗೆ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿ ಕೆಲಸ ಕೊಡಬೇಕು. ನಾಲ್ಕು ಹಳ್ಳಿಗಳಿಗೆ ಸೇರಿದಂತೆ ಒಂದು ಸಣ್ಣ ಕೈಗಾರಿಕೆ ಸ್ಥಾಪಿತವಾಗುವದಾದರೆ ಅವರಿಗೆಲ್ಲ ಕೆಲಸ ಕೊಡಬಹುದು.

ಗ್ರಾಮಗಳಲ್ಲಿ ಇರುವ ಬಡಗಿ, ಕಮ್ಮಾರ, ನೇಕಾರ, ಚಮ್ಮಾರ, ಇವರಿಗೆಲ್ಲ ಶಿಕ್ಷಣ ಕೊಟ್ಟು ತಮ್ಮ ವೃತ್ತಿ ಕೌಶಲವನ್ನು ಬೆಳೆಸಿಕೊಳ್ಳಲು ಮಾರ್ಗದರ್ಶನ ಮಾಡಬೇಕು. ನಲ್ಲಿ, ಮೋಟಾರ್ ಸೈಕಲ್, ರೇಡಿಯೋ, ಟಿ.ವಿ. ಕೊಳವೇ ಬಾವಿ, ಗಡಿಯಾರ, ಮುಂತಾದವುಗಳ ರಿಪೇರಿ ಕೆಲಸ ಕಲಿಸಿ ಅವರಿಗೆ ಒಬ್ಬೊಬ್ಬರಿಗೂ ಒಂದು ಕಿಟ್ ಕೊಟ್ಟರೇ ಅವರು ಜೀವನ ನಿರ್ವಹಣೆಗೆ ಈ ಕಸುಬುಗಳನ್ನು ಅವಲಂಬಿಸಿಯಾರು. ತರಕಾರಿ, ಹಣ್ಣು ಇವುಗಳ ಸಂಸ್ಕರಣ ಘಟಕಗಳನ್ನು ಸ್ಥಾಪಿಸಿ ಜನರಿಗೆ ಕೆಲಸ ಕೊಡಬಹುದು. ಈ ಮೂಲಕ ಗ್ರಾಮೀಣ ಜನರ ಬಡತನವನ್ನು ದೂರಮಾಡಬಹುದು. ಇದನ್ನೆಲ್ಲ ಮೋದಿ ಸರ್ಕಾರ ಮಾಡೀತೇ ಎಂದು ಕುತೂಹಲದಿಂದ ಕಾದುಕೂತು ನೋಡಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...