Homeಅಂಕಣಗಳುಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ

ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ

- Advertisement -
- Advertisement -

ಕೊರೋನ ಮಹಾಮಾರಿ ಹಿಡಿಯಾಗಿ ಪ್ರಪಂಚವನ್ನೇ ಕಾಡಲುಹತ್ತಿದ್ದರಿಂದ ಯಾವ ದೇಶದವರೂ ಭಾರತಕ್ಕೆ ಬಂಡವಾಳ ತೆಗೆದುಕೊಂಡು ಬಂದು ಉದ್ಯಮಗಳನ್ನು ಆರಂಭಿಸುವ ಸಾಧ್ಯತೆಗಳಿಲ್ಲ ಎಂಬುದನ್ನು ಮನಗಂಡು ಈಗ ಹೊಸ ರಾಗ ಹಾಡಲು ಮೋದಿಯವರು ತೊಡಗಿದ್ದಾರೆ. ಅವರ ಇಂದಿನ ಸ್ಲೋಗನ್‍ಗಳೆಂದರೆ ಆತ್ಮ ನಿರ್ಭರತೆ, ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನಗಳನ್ನು ಬೆಳಸಿಕೊಳ್ಳುವುದು. ಇದು ಸರಿಯಾದ ತೀರ್ಮಾನವೇ ಸರಿ. ಆದರೆ ಈ ತತ್ವಗಳಿಗೆ ಮೋದಿ ಸರ್ಕಾರ ಮುಂದೆ ಎಂದೆಂದೂ ಬದ್ಧವಾಗಿ ಇರುತ್ತದೆಯೇ ಎಂಬುದು ಮೂಲ ಭೂತ ಪ್ರಶ್ನೆ.

ಕೊರೋನ ವ್ಯಾದಿ ವಿಶ್ವದೆಲ್ಲಡೆ ಇಲ್ಲವಾಗಿ ಆರ್ಥಿಕ ಚೇತರಿಕೆಯೂ ಆದಮೇಲೂ ಆತ್ಮನಿರ್ಭರತೆ ಇವರ ಸ್ಲೋಗನ್ ಆಗಿರುತ್ತದೆಯೇ ಎಂಬುದು ನಮ್ಮ ಮುಂದಿರುವ ಪ್ರಶ್ನೆ. ಇದನ್ನು ಕಾಲವೇ ನಿರ್ಧರಿಸುತ್ತದೆ.

ಆತ್ಮನಿರ್ಭರತೆ ಇನ್ನು ಮುಂದೆ ಭಾರತ ಸರ್ಕಾರದ ನೀತಿ ಎಂದು ಮೋದಿಯವರು ಘೋಷಿಸಿದರೆ ಮಾತ್ರ ಇದು ಬರಿ ಸ್ಲೋಗನ್ ಅಲ್ಲ, ನಮ್ಮ ರಾಷ್ಟ್ರ ನೀತಿ ಎಂದು ನಾವು ನಂಬಬಹುದು. ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ, ಇವು ಬರಿಯ ಸ್ಲೋಗನ್‍ಗಳಾಗಬಾರದು.

ಸ್ವದೇಶಿ ಒಂದು ವ್ರತವಾಗಬೇಕು. ಸರ್ಕಾರ ಈ ವ್ರತವನ್ನು ಕಾರ್ಯಗೊಳಿಸಬೇಕು. ಜಪಾನಿನಲ್ಲಿ ಬೃಹತ್ ಯಂತ್ರಗಳಿಂದ ವಿವಿಧ ವಸ್ತುಗಳನ್ನು ತಯಾರಿಸುತ್ತಾರೆ. ಆದರೆ ಅವೆಲ್ಲವೂ ರಫ್ತಿಗಾಗಿ. ಅವರ ನಿತ್ಯದ ಅಗತ್ಯತೆಯ ವಸ್ತುಗಳೆನ್ನೆಲ್ಲ ಅವರು ಗೃಹೋದ್ಯೋಗದ ಮೂಲಕ ಪಡೆಯುತ್ತಾರೆ. ಗೃಹೋದ್ಯೋಗದಿಂದ ತಯಾರಾದ ಪದಾರ್ಥಗಳನ್ನು ಇವು ನಮ್ಮ ಹೆಮ್ಮೆಯ ಪದಾರ್ಥಗಳೆಂದು ಭಾವಿಸಿ ಬಳಸುತ್ತಾರೆ. ಇದೇ ಆತ್ಮನಿರ್ಭರತೆ. ಇದಕ್ಕೆ ಮೋದಿಯವರ ಸಹಮತ ಇದೆಯೇ? ನಮ್ಮದು ಪ್ರಜಾ ಸಂಖ್ಯೆ ಅಧಿಕವಾಗಿರುವ ದೇಶ. ಇಲ್ಲಿ ಜನರ ಕೈಗೆ ಕೆಲಸ ಕೊಡಬೇಕು. ಅದಕ್ಕೆ ಅನುಗಣವಾದ ಅಪ್ರೋಪ್ರಿಯೇಟ್ ಟೆಕ್ನಾಲಾಜಿಯನ್ನೇ ನಾವು ಅಳವಡಿಸಿಕೊಳ್ಳಬೇಕು. ಬೃಹತ್ ಯಂತ್ರಗಳು, ದೈತ್ಯ ಯಂತ್ರಗಳು, ಸ್ವಯಂ ಚಾಲಿತ ಯಂತ್ರಗಳು ನಮ್ಮ ಜನರು ಉದ್ಯೋಗವನ್ನು ಕಸಿದುಕೊಳ್ಳುತ್ತವೆ. ಬಡಜನರ ಹೊಟ್ಟೆಯ ಮೇಲೆ ಹೊಡೆಯುತ್ತವೆ.

ಆದ್ದರಿಂದ ನಮ್ಮ ಜನರ ಉದ್ಯೋಗಗಳನ್ನು ಕಸಿಯದ ಯಂತ್ರೋದ್ಯಮಕ್ಕೆ ನಮ್ಮ ಆದ್ಯತೆ ಎಂದು ಸರ್ಕಾರ ಘೋಷಿಸುತ್ತದೆಯೆ?

ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂಬ ಸ್ಲೋಗನ್‍ಗಳನ್ನು ಮೋದಿಯವರು ಉಚ್ಛರಿಸಿದರು. ಮೇಡ್ ಇನ್ ಇಂಡಿಯಾ ಸ್ಲೋಗನ್ ಅನ್ನು ಇಂದಿರಾ ಗಾಂಧಿ ಹಿಂದೆಯೆ ಘೋಷಣೆ ಮಾಡಿದ್ದರು. ಈ ಎರಡು ಘೋಷಣೆಗಳು ದೋಷಪೂರಿತವಾದದ್ದು. ಭಾರತದಲ್ಲಿ ತಯಾರಾದ ಮಾತ್ರಕ್ಕೆ ಆ ಪದಾರ್ಥಗಳು ಸ್ವದೇಶಿ ಅಲ್ಲ. ಬಂಡವಾಳಗಾರರು ಹೆಚ್ಚಿನ ಲಾಭಗಳಿಕೆಗಾಗಿಯೇ ಉದ್ಯಮ ನಡೆಸುವುದು. ಬಂಡವಾಳಶಾಹಿಗಳು ಭಾರತಿಯರಿರಬಹುದು, ಬಹುರಾಷ್ಟ್ರೀಯರಿರಬಹುದು. ಅವರಿಬ್ಬರಿದೂ ಉದ್ದೇಶ ಒಂದೆ. ಅದೆಂದರೆ ತಮ್ಮ ಶಕ್ತಿ ಮೀರಿ ಲಾಭ ಗಳಿಸುವುದು. ಇದರಲ್ಲಿ ಒಂದು ನಾಡ ಕತ್ತಿ, ಮತ್ತೊಂದು ಸೀಮೆಯ ಕತ್ತಿ. ಒಟ್ಟಿನಲ್ಲಿ ಅವರೆಡು ಕ್ಷೌರದ ಕತ್ತಿಗಳೆ. ಅವೆರಡು ಬಯಸುವುದು ಹೆಚ್ಚಿಗೆ ಲಾಭ, ಅಗ್ಗದ ಶ್ರಮಶಕ್ತಿ, ಸಂಪನ್ಮೂಲಗಳ ಲೂಟಿ.

ಆದ್ದರಿಂದ ಈ ಲೂಟಿಕೋರರು ಭಾರತದ ಉದ್ಯಮಪತಿಗಳೆ ಆಗಿದ್ದರೂ, ಬೇರೆ ರಾಷ್ಟ್ರಗಳ ಶ್ರೀಮಂತರೇ ಆಗಿದ್ದರೂ ಅವರನ್ನು ದೂರ ಇಡಬೇಕು. ಬದಲಿಗೆ ಸರ್ಕಾರ, ಸ್ಥಳೀಯ ಸಂಸ್ಥೆಗಳು ಮತ್ತು ಸಹಕಾರಿ ಸಂಸ್ಥೆಗಳ ಮೂಲಕ ಸಣ್ಣ ಕೈಗಾರಿಕೆಗಳಲ್ಲಿನ ಉತ್ಪಾದನೆ ಮಾತ್ರವೇ ಸ್ವದೇಶಿ ಅನಿಸಿಕೊಳ್ಳುತ್ತದೆ.

ನಮ್ಮಲ್ಲಿ ತಯಾರಾಗದ ಪದಾರ್ಥಗಳನ್ನು ತಯಾರು ಮಾಡಲು ಪರದೇಶದ ಕಂಪನಿಗಳನ್ನು ಭಾರತಕ್ಕೆ ಕರೆತರಬಹುದು. ಆದರೆ ಒಂದು ಕರಾರಿನ ಮೇಲೆ ಮಾತ್ರ. ಅದೆಂದರೆ ಹಾಗೇ ಬರುವವರು ಹತ್ತು ವರ್ಷಗಳ ಕಾಲ ಮಾತ್ರ ಭಾರತದಲ್ಲಿ ತಮ್ಮ ಉದ್ಯಮವನ್ನು ನಡೆಸಬಹುದು ಮತ್ತು ನಮ್ಮ ಜನರಿಗೆ ಆ ಪದಾರ್ಥಗಳ ತಯಾರಿಕೆಯ ತಂತ್ರಜ್ಞಾನವನ್ನು ಕಲಿಸಿಕೊಟ್ಟು ಹೋಗಬೇಕು.

ವಲಸಿಗ ಕಾರ್ಮಿಕರು ಈಗ ಬಹುಸಂಖ್ಯೆಯಲ್ಲಿ ನಗರಗಳನ್ನು, ಪಟ್ಟಣದಗಳನ್ನು ಬಿಟ್ಟು ಗ್ರಾಮಗಳಿಗೆ ಹೋಗಿದ್ದಾರೆ. ಅವರು ತಮ್ಮ ಗ್ರಾಮಗಳಲ್ಲಿ ಜೀವನ ನಡೆಸುವುದಾದರೂ ಹೇಗೆ? ಭೂಮಿತಿ ಶಾಸನವನ್ನು ಪುನಃ ಪರಿಶೀಲಿಸಿ ಸೀಲಿಂಗ್ ಲಿಮಿಟ್ ಅನ್ನು ಇಳಿಸಿ ಯಾರು ವ್ಯವಸಾಯದಲ್ಲಿ ತೊಡಗಿಕೊಳ್ಳಲು ಆಶಿಸುವರೋ ಅವರಿಗೆ ತಲಾ ನಾಲ್ಕುವರೆ ಎಕರೆ ಕುಷ್ಕಿ ಜಮೀನನ್ನು ಮಂಜೂರು ಮಾಡಬೇಕು. ಹೀಗೆ ಸರ್ಕಾರ ಕೊಟ್ಟ ಭೂಮಿಯನ್ನು ಮಾರಾಟ-ಭೋಗ್ಯ ಯಾವುದನ್ನು ಮಾಡುವ ಆಗಿಲ್ಲ ಎಂದು ಕಾನೂನು ಮಾಡಬೇಕು. ಉಳಿದ ವಲಸಿಗರಿಗೆ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿ ಕೆಲಸ ಕೊಡಬೇಕು. ನಾಲ್ಕು ಹಳ್ಳಿಗಳಿಗೆ ಸೇರಿದಂತೆ ಒಂದು ಸಣ್ಣ ಕೈಗಾರಿಕೆ ಸ್ಥಾಪಿತವಾಗುವದಾದರೆ ಅವರಿಗೆಲ್ಲ ಕೆಲಸ ಕೊಡಬಹುದು.

ಗ್ರಾಮಗಳಲ್ಲಿ ಇರುವ ಬಡಗಿ, ಕಮ್ಮಾರ, ನೇಕಾರ, ಚಮ್ಮಾರ, ಇವರಿಗೆಲ್ಲ ಶಿಕ್ಷಣ ಕೊಟ್ಟು ತಮ್ಮ ವೃತ್ತಿ ಕೌಶಲವನ್ನು ಬೆಳೆಸಿಕೊಳ್ಳಲು ಮಾರ್ಗದರ್ಶನ ಮಾಡಬೇಕು. ನಲ್ಲಿ, ಮೋಟಾರ್ ಸೈಕಲ್, ರೇಡಿಯೋ, ಟಿ.ವಿ. ಕೊಳವೇ ಬಾವಿ, ಗಡಿಯಾರ, ಮುಂತಾದವುಗಳ ರಿಪೇರಿ ಕೆಲಸ ಕಲಿಸಿ ಅವರಿಗೆ ಒಬ್ಬೊಬ್ಬರಿಗೂ ಒಂದು ಕಿಟ್ ಕೊಟ್ಟರೇ ಅವರು ಜೀವನ ನಿರ್ವಹಣೆಗೆ ಈ ಕಸುಬುಗಳನ್ನು ಅವಲಂಬಿಸಿಯಾರು. ತರಕಾರಿ, ಹಣ್ಣು ಇವುಗಳ ಸಂಸ್ಕರಣ ಘಟಕಗಳನ್ನು ಸ್ಥಾಪಿಸಿ ಜನರಿಗೆ ಕೆಲಸ ಕೊಡಬಹುದು. ಈ ಮೂಲಕ ಗ್ರಾಮೀಣ ಜನರ ಬಡತನವನ್ನು ದೂರಮಾಡಬಹುದು. ಇದನ್ನೆಲ್ಲ ಮೋದಿ ಸರ್ಕಾರ ಮಾಡೀತೇ ಎಂದು ಕುತೂಹಲದಿಂದ ಕಾದುಕೂತು ನೋಡಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....