Homeಮುಖಪುಟಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿರುವುದು ವಿಶೇಷವಾಗಿದೆ.

- Advertisement -
- Advertisement -

ಡಿಸೆಂಬರ್‌ 1 ರಂದು ನಡೆಯಲಿರುವ ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ.‌ ಇತ್ತೀಚೆಗೆ ತಮಿಳುನಾಡು, ಮಹರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ ಉಂಟಾಗಿದ್ದ ಭಾರಿ ಪ್ರವಾಹದ ಸಂದರ್ಭದಲ್ಲಿ ಎಲ್ಲಿಯೂ ಕಾಣದ, ಅವುಗಳ ಬಗ್ಗೆ ತುಟಿಪಿಟಿಕ್ ಎನ್ನದ ಬಿಜೆಪಿ ನೇತೃತ್ವದ ಕೇಂದ್ರದ ನಾಯಕರು ಇದೀಗ ಕೇವಲ ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಸಮಯ ಹೊಂದಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವೆಂಬರ್ 28 ರಂದು ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದರ ಮರುದಿನವೇ ಗೃಹ ಸಚಿವ ಅಮಿತ್​ ಶಾ ಸಹ ರೋಡ್​ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯಿದೆ. ನವೆಂಬರ್​ 28 ರಂದು ಪ್ರಧಾನಿ ಮೋದಿ ಸಹ ಭಾರತ್ ಬಯೋಟೆಕ್​ ಭೇಟಿಗಾಗಿ ಹೈದ್ರಾಬಾದ್​ಗೆ ಆಗಮಿಸಲಿದ್ದು, ಅವರೂ ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ! 

ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದಾರೆ. ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷ ವನತಿ ಶ್ರೀನಿವಾಸನ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಕಂದರಾಬಾದ್‌ನ ಲೋಕಸಭಾ ಸದಸ್ಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈಗಾಗಲೇ ಬಿಜೆಪಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ನೆರೆ ಬಂದಾಗ ಕಾಣದಿದ್ದ ಇವರೆಲ್ಲರೂ ಈ ಮೂಲಕ ಅಧಿಕಾರ ಮಾತ್ರವೆ ತಮ್ಮ ಆದ್ಯತೆ, ಉತ್ತಮ ಆಡಳಿತವಲ್ಲ ಎಂದು ಪದೇ ಪದೇ ನಿರೂಪಿಸುತ್ತಿದ್ದಾರೆ. ನಿಜಕ್ಕೂ ಇದರ ಹಿಂದಿನ ಮರ್ಮವೇನು? ಒಂದು ಪಾಲಿಕೆಗೆ ಬಿಜೆಪಿ ಈ ರೀತಿಯ ಸಮಯ ಹೊಂದಿಸಿಕೊಳ್ಳುತ್ತಿರುವುದೇಕೆ?

ಜಿನ್ನಾ

ಈಗಾಗಲೆ ಚುನಾವಣೆಯ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಅದಲ್ಲದೆ ಹೈದರಾಬಾದ್‌ನಲ್ಲಿ ಹಿಡಿತವಿರುವ ಅಸಾದುದ್ದೀನ್ ಒವೈಸಿ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂಬಂತೆ ಬಿಂಬಿಸುವಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚುನಾವಣೆಯ ನಂತರ ತಮಿಳುನಾಡು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದನ್ನು ಬಳಸಿಕೊಂಡು ಬಿಜೆಪಿ ತಮ್ಮ ಮತದಾರರನ್ನು ಸೆಳೆಯುತ್ತಿದೆ ಎಂಬ ಅನುಮಾನ ಕೂಡಾ ಕಾಡುತ್ತಿದೆ.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಈ ಅನುಮಾನವನ್ನು ಗಟ್ಟಿಗೊಳಿಸುವಂತೆ ಸಂಸದ ತೇಜಸ್ವಿ ಸೂರ್ಯ, ಒವೈಸಿಯನ್ನು ’ಜಿನ್ನಾ ಅವತಾರ’ ಎಂದಿದ್ದು, ರೋಹಿಂಗ್ಯ ವಿಚಾರವನ್ನು ಮುನ್ನಲೆಗೆ ತಂದಿರುವುದು, ಒವೈಸಿಗೆ ಮತ ಹಾಕಿ ಹೈದರಾಬಾದ್‌‌ನಲ್ಲಿ ಗೆದ್ದರೆ ಅವರು ಭಾರತದ ಇತರ ರಾಜ್ಯಗಳ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಗೆಲ್ಲುತ್ತಾರೆಂದು ಹೇಳುತ್ತಾ ಒಂದು ವರ್ಗದಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಇವುಗಳನ್ನು ರಾಷ್ಟ್ರೀಯ ಮಾಧ್ಯಮಗಳು ಕೂಡಾ ನಿಯ್ಯತ್ತಿನಿಂದ ವರದಿ ಮಾಡುತ್ತಿದೆ. ತೆಲಂಗಾಣದ ಪಾಲಿಕೆಯೊಂದರ ಚುನಾವಣೆಯನ್ನು ರಾಷ್ಟ್ರೀಯ ಸುದ್ದಿಯನ್ನಾಗಿ ಮಾಡಿ ಮತದಾರರನ್ನು ದ್ರುವಿಕರಣ ಮಾಡುತ್ತಿದ್ದಾರೆ. ಈ ಚುನಾವಣೆಯನ್ನು ಹಿಂದೂ-ಮುಸ್ಲಿಂ ಹೋರಾಟ ಎನ್ನುವ ಮಟ್ಟಿಗೆ ಬಿಜೆಪಿ ಪ್ರಚಾರ ಮಾಡುತ್ತಿದೆ. ಹಾಗಾಗಿಯೆ ತೇಜಸ್ವಿ ಬಿಜೆಪಿಗೆ ನೀಡುವ ಮತ ಹಿಂದುತ್ವಕ್ಕೆ ನೀಡುವ ಮತ ಎಂದು ಒತ್ತಿ ಹೇಳುತ್ತಿರುವುದು.

ಹಾಗೆ ನೋಡಿದರೆ ಬಿಜೆಪಿಯು 150 ಸದಸ್ಯ ಬಲವಿರುವ ಹೈದರಾಬಾದ್ ಪಾಲಿಕೆಯ 2016 ರ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. 2018 ರಲ್ಲಿ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿತ್ತು. ಒಟ್ಟಿನಲ್ಲಿ ಬಿಜೆಪಿಯವರಿಂದ ಹಿಂದೂ ವಿರೋಧಿ ಎಂದು ಕರೆಯಲ್ಪಡುತ್ತಿರುವ ಒವೈಸಿಯನ್ನು ಜಾಸ್ತಿ ಮಾತಾಡಿಸಿ, ಹೈದರಾಬಾದ್ ಪಾಲಿಕೆಯ ನೆಪದಲ್ಲಿ ಹಿಂದೂ ಮತಗಳನ್ನು ದ್ರುವೀಕರಣ ಮಾಡುತ್ತಾ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕಡೆ ಮುಖ ಮಾಡುತ್ತಿದೆ. ಅದಕ್ಕೆಂದೆ ತಿಂಗಳ ಹಿಂದೆಯಷ್ಟೇ ನೆರೆ ಬಂದು ಮುಳುಗಿದ್ದ ಹೈದರಾಬಾದ್‌ ಬಗ್ಗೆ ತಲೆಕೆಡಿಸಿ ಕೊಳ್ಳದ ಬಿಜೆಪಿಯ ನಾಯಕರು ಈಗ ಆದ್ಯತೆಯ ಮೇಲೆ ಭೇಟಿ ನೀಡುತ್ತಿದ್ದಾರೆ, ಅದೂ ಯಕಶ್ಚಿತ್‌ ಪಾಲಿಕೆಯೊಂದರ ಚುನಾವಣೆಗೆ!

ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...