Homeಮುಖಪುಟಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

ಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

- Advertisement -
- Advertisement -

ಪ್ರಧಾನಿ ಮೋದಿ ಅಂಫಾನ್ ಪೀಡಿತ ಬಂಗಾಳ ಮತ್ತು ಒಡಿಶಾ ರಾಜ್ಯಗಳಿಗೆ ಚಂಡಮಾರುತದಿಂದಾದ ಹಾನಿಯ ವೈಮಾನಿಕ ಸಮೀಕ್ಷೆ ಮಾಡಲು ಇಂದು ತೆರಳಿದ್ದಾರೆ.

ಕೊರೊನಾ ಬಿಕ್ಕಟ್ಟಿನ 83 ದಿನಗಳ ನಂತರ ಪ್ರಧಾನಿ ಮೋದಿಯವರ ಮೊದಲ ಪ್ರವಾಸ ಇದಾಗಿದೆ. ಅವರ ಕೊನೆಯ ಪ್ರವಾಸ ಫೆಬ್ರವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮತ್ತು ಚಿತ್ರಕೂಟ್ ಗೆ ಆಗಿತ್ತು. ಇಂದು ಪ್ರಧಾನಿ ಅಂಫಾನ್ ಪೀಡಿತ ಕೋಲ್ಕತಾ ಮತ್ತು ಪಶ್ಚಿಮ ಬಂಗಾಳದ 24 ಉತ್ತರ ಪರಗಣ ಜಿಲ್ಲೆಗಳಿಗೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಅವರು ವೈಮಾನಿಕ ಸಮೀಕ್ಷೆಗಳನ್ನು ನಡೆಸುತ್ತಾರೆ ಮತ್ತು ಪರಿಶೀಲನಾ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಪರಿಹಾರ ಮತ್ತು ಪುನರ್ವಸತಿ ವಿಷಯಗಳ ಬಗ್ಗೆ ಚರ್ಚಿಸಲಾಗುವುದು” ಎಂದು ಪ್ರಧಾನ ಮಂತ್ರಿ ಕಚೇರಿ ಗುರುವಾರ ರಾತ್ರಿ ಟ್ವೀಟ್‌ನಲ್ಲಿ ತಿಳಿಸಿದೆ.
ಅತ್ಯಂತ ತೀವ್ರವಾದ ಚಂಡಮಾರುತವು ದುರ್ಬಲಗೊಂಡು ಬಾಂಗ್ಲಾದೇಶಕ್ಕೆ ಸ್ಥಳಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

‘ಅಂಫಾನ್’ ಚಂಡಮಾರುತದಿಂದ ರಾಜ್ಯದಲ್ಲಿ ಸುಮಾರು 76 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತ, “ರಾಜ್ಯದಲ್ಲಿ ‘ಅಂಫಾನ್’ ಚಂಡಮಾರುತದಿಂದ 76 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತಪಟ್ಟವರ ಕುಟುಂಬಕ್ಕೆ 2.5 ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ , ಚಂಡಮಾರುತ ಪೀಡಿತ ಪ್ರದೇಶಕ್ಕೆ ಪ್ರಧಾನಿಯವರು ಭೇಟಿ ನೀಡಿ ಹಾನಿಗಳ ಬಗ್ಗೆ ಪರಿಶೀಲನೆ ನಡೆಸಬೇಕು” ಎಂದು ಹೇಳಿದ್ದಾರೆ.

“ಸುಂದರ್‌ಬನ್ಸ್‌ಗೆ ಭೇಟಿ ನೀಡುವಂತೆ ನಾನು ಪ್ರಧಾನ ಮಂತ್ರಿಯನ್ನು ಕೇಳಿದ್ದೇನೆ. ಈ ಬಿಕ್ಕಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡೋಣ… ಅಮಿತ್ ಶಾ ಅವರು ಇಂದು ಮಧ್ಯಾಹ್ನ ಕರೆ ಮಾಡಿ ಕೇಂದ್ರವು ಸಂಪೂರ್ಣ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು” ಎಂದು ಮಮತಾ ಹೇಳಿದ್ದರು.

ಘಟನೆಯ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿನ್ನೆ ಟ್ವೀಟ್ ಮಾಡಿ “ಈ ಸವಾಲಿನ ಸಮಯದಲ್ಲಿ ಚಂಡಮಾರುತದಿಂದ ಪೀಡಿತರಾದವರಿಗೆ ಸಹಾಯ ಮಾಡಲು ಇಡೀ ರಾಷ್ಟ್ರ ಬಂಗಾಳದ ಜೊತೆ ನಿಂತಿದೆ. ರಾಜ್ಯದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದೆ. ಯಥಾಸ್ಥಿತಿಗಾಗಿ ಪ್ರಯತ್ನಗಳು ನಡೆಯುತ್ತಿವೆ” ಎಂದು ಹೇಳಿದ್ದರು.

ಗಂಟೆಗೆ 185 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಇದರಿಂದಾಗಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದುದರಿಂದ ವಿದ್ಯುದಾಘಾತದಿಂದಾಗಿ ಹೆಚ್ಚಿನವರು ಸಾವನ್ನಪ್ಪಿದ್ದಾರೆ ಎಂದು ಮಮತ ಬ್ಯಾನರ್ಜಿ ಹೇಳಿದ್ದಾರೆ. ಮೃತಪಟ್ಟ 72 ಜನರಲ್ಲಿ 15 ಮಂದಿ ಕೋಲ್ಕತ್ತಾದವರು ಎನ್ನಲಾಗಿದೆ.

ಚಂಡಮಾರುತದಿಂದಾಗಿ 1 ಲಕ್ಷ ಕೋಟಿ ರೂ.ಗಳ ನಷ್ಟವಾಗಬಹುದು ಎಂದು ಬುಧವಾರ ಸಂಜೆ ಮುಖ್ಯಮಂತ್ರಿ ಮಮತ ಹೇಳಿಕೊಂಡಿದ್ದರು.

ಇಂದು ಪ್ರಧಾನಿ ಮೋದಿ ಮೊದಲಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಮಧ್ಯಾಹ್ನ ನಂತರ ಒಡಿಶಾಗೆ ತೆರಳುತ್ತಾರೆ ಎಂದು ಪಿಟಿಐ ವರದಿ ಮಾಡಿದೆ.


ಓದಿ: ಅಂಫಾನ್ ಚಂಡಮಾರುತವನ್ನು ತಾಂಡವ ನೃತ್ಯ ಎಂದ ಮಮತ ಬ್ಯಾನರ್ಜಿ.


ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...