Homeಮುಖಪುಟಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

ಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

- Advertisement -
- Advertisement -

ಪ್ರಧಾನಿ ಮೋದಿ ಅಂಫಾನ್ ಪೀಡಿತ ಬಂಗಾಳ ಮತ್ತು ಒಡಿಶಾ ರಾಜ್ಯಗಳಿಗೆ ಚಂಡಮಾರುತದಿಂದಾದ ಹಾನಿಯ ವೈಮಾನಿಕ ಸಮೀಕ್ಷೆ ಮಾಡಲು ಇಂದು ತೆರಳಿದ್ದಾರೆ.

ಕೊರೊನಾ ಬಿಕ್ಕಟ್ಟಿನ 83 ದಿನಗಳ ನಂತರ ಪ್ರಧಾನಿ ಮೋದಿಯವರ ಮೊದಲ ಪ್ರವಾಸ ಇದಾಗಿದೆ. ಅವರ ಕೊನೆಯ ಪ್ರವಾಸ ಫೆಬ್ರವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮತ್ತು ಚಿತ್ರಕೂಟ್ ಗೆ ಆಗಿತ್ತು. ಇಂದು ಪ್ರಧಾನಿ ಅಂಫಾನ್ ಪೀಡಿತ ಕೋಲ್ಕತಾ ಮತ್ತು ಪಶ್ಚಿಮ ಬಂಗಾಳದ 24 ಉತ್ತರ ಪರಗಣ ಜಿಲ್ಲೆಗಳಿಗೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಅವರು ವೈಮಾನಿಕ ಸಮೀಕ್ಷೆಗಳನ್ನು ನಡೆಸುತ್ತಾರೆ ಮತ್ತು ಪರಿಶೀಲನಾ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಪರಿಹಾರ ಮತ್ತು ಪುನರ್ವಸತಿ ವಿಷಯಗಳ ಬಗ್ಗೆ ಚರ್ಚಿಸಲಾಗುವುದು” ಎಂದು ಪ್ರಧಾನ ಮಂತ್ರಿ ಕಚೇರಿ ಗುರುವಾರ ರಾತ್ರಿ ಟ್ವೀಟ್‌ನಲ್ಲಿ ತಿಳಿಸಿದೆ.
ಅತ್ಯಂತ ತೀವ್ರವಾದ ಚಂಡಮಾರುತವು ದುರ್ಬಲಗೊಂಡು ಬಾಂಗ್ಲಾದೇಶಕ್ಕೆ ಸ್ಥಳಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

‘ಅಂಫಾನ್’ ಚಂಡಮಾರುತದಿಂದ ರಾಜ್ಯದಲ್ಲಿ ಸುಮಾರು 76 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತ, “ರಾಜ್ಯದಲ್ಲಿ ‘ಅಂಫಾನ್’ ಚಂಡಮಾರುತದಿಂದ 76 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತಪಟ್ಟವರ ಕುಟುಂಬಕ್ಕೆ 2.5 ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ , ಚಂಡಮಾರುತ ಪೀಡಿತ ಪ್ರದೇಶಕ್ಕೆ ಪ್ರಧಾನಿಯವರು ಭೇಟಿ ನೀಡಿ ಹಾನಿಗಳ ಬಗ್ಗೆ ಪರಿಶೀಲನೆ ನಡೆಸಬೇಕು” ಎಂದು ಹೇಳಿದ್ದಾರೆ.

“ಸುಂದರ್‌ಬನ್ಸ್‌ಗೆ ಭೇಟಿ ನೀಡುವಂತೆ ನಾನು ಪ್ರಧಾನ ಮಂತ್ರಿಯನ್ನು ಕೇಳಿದ್ದೇನೆ. ಈ ಬಿಕ್ಕಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡೋಣ… ಅಮಿತ್ ಶಾ ಅವರು ಇಂದು ಮಧ್ಯಾಹ್ನ ಕರೆ ಮಾಡಿ ಕೇಂದ್ರವು ಸಂಪೂರ್ಣ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು” ಎಂದು ಮಮತಾ ಹೇಳಿದ್ದರು.

ಘಟನೆಯ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿನ್ನೆ ಟ್ವೀಟ್ ಮಾಡಿ “ಈ ಸವಾಲಿನ ಸಮಯದಲ್ಲಿ ಚಂಡಮಾರುತದಿಂದ ಪೀಡಿತರಾದವರಿಗೆ ಸಹಾಯ ಮಾಡಲು ಇಡೀ ರಾಷ್ಟ್ರ ಬಂಗಾಳದ ಜೊತೆ ನಿಂತಿದೆ. ರಾಜ್ಯದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದೆ. ಯಥಾಸ್ಥಿತಿಗಾಗಿ ಪ್ರಯತ್ನಗಳು ನಡೆಯುತ್ತಿವೆ” ಎಂದು ಹೇಳಿದ್ದರು.

ಗಂಟೆಗೆ 185 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಇದರಿಂದಾಗಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದುದರಿಂದ ವಿದ್ಯುದಾಘಾತದಿಂದಾಗಿ ಹೆಚ್ಚಿನವರು ಸಾವನ್ನಪ್ಪಿದ್ದಾರೆ ಎಂದು ಮಮತ ಬ್ಯಾನರ್ಜಿ ಹೇಳಿದ್ದಾರೆ. ಮೃತಪಟ್ಟ 72 ಜನರಲ್ಲಿ 15 ಮಂದಿ ಕೋಲ್ಕತ್ತಾದವರು ಎನ್ನಲಾಗಿದೆ.

ಚಂಡಮಾರುತದಿಂದಾಗಿ 1 ಲಕ್ಷ ಕೋಟಿ ರೂ.ಗಳ ನಷ್ಟವಾಗಬಹುದು ಎಂದು ಬುಧವಾರ ಸಂಜೆ ಮುಖ್ಯಮಂತ್ರಿ ಮಮತ ಹೇಳಿಕೊಂಡಿದ್ದರು.

ಇಂದು ಪ್ರಧಾನಿ ಮೋದಿ ಮೊದಲಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಮಧ್ಯಾಹ್ನ ನಂತರ ಒಡಿಶಾಗೆ ತೆರಳುತ್ತಾರೆ ಎಂದು ಪಿಟಿಐ ವರದಿ ಮಾಡಿದೆ.


ಓದಿ: ಅಂಫಾನ್ ಚಂಡಮಾರುತವನ್ನು ತಾಂಡವ ನೃತ್ಯ ಎಂದ ಮಮತ ಬ್ಯಾನರ್ಜಿ.


ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...