Homeಮುಖಪುಟತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

- Advertisement -
- Advertisement -

ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬರಮಾಡಿಕೊಳ್ಳಲು ಹೋಗುವುದಿಲ್ಲ. ಆರು ತಿಂಗಳಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌‌ ಅವರು ಪ್ರಧಾನಿಯವರನ್ನು ಸ್ವಾಗತಿಸದೆ ಪ್ರೋಟೋಕಾಲ್‌ ಅನುಸರಿಸಿಲ್ಲ ಎಂದು ಆರೋಪಿಸಲಾಗಿದೆ.

ತೆಲಂಗಾಣ ಸರ್ಕಾರವು ಹಂಚಿಕೊಂಡ ಟಿಪ್ಪಣಿಯ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 2:55ಕ್ಕೆ ಹೈದರಾಬಾದ್‌ಗೆ ಬಂದಿಳಿಯಲಿದ್ದಾರೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಸಚಿವರು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕರಾಗಿದ್ದು, ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳುವಂತೆ ಟಿಆರ್‌ಎಸ್‌ನ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಕೊನೆಗೊಳ್ಳಲಿರುವ ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ.

ಇದರ ನಡುವೆ ಮತ್ತೊಂದು ಬೆಳವಣಿಗೆಯಾಗಿದೆ. ತೆಲಂಗಾಣ ಸಿಎಂ ಚಂದ್ರಶೇರ್‌ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳದೆ, ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ಮುಂದಾದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಪ್ರಧಾನಿ ಆಗಮಿಸುವ ಎರಡು ಗಂಟೆಗಳ ಮೊದಲು ಐಟಿ ನಗರಕ್ಕೆ ಸಿನ್ಹಾ ಬರುವುದು ನಿಗದಿಯಾಗಿತ್ತು.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಕೆಸಿಆರ್ ಅವರು ತಮ್ಮ ಪಕ್ಷದ ಬೆಂಬಲವನ್ನು ಸಿನ್ಹಾಗೆ ನೀಡಿದ್ದಾರೆ. ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಎನ್‌ಡಿಎ ಪರವಾಗಿ ಸ್ಪರ್ಧಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ಕೆಸಿಆರ್ ಅವರು ಕೇಂದ್ರ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಕಳೆದ ತಿಂಗಳಷ್ಟೇ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ವಿರುದ್ಧ ಕೆಸಿಆರ್‌ ಮಾತನಾಡಿದ್ದರು. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಅಗ್ನಿಪಥ್ ವಿರುದ್ಧ ಆಕ್ರೋಶ ಹೊರಹಾಕಿವೆ.

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಗೈರು ಹಾಜರಾಗಿದ್ದರು. ಫೆಬ್ರವರಿಯಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನ 20ನೇ ವರ್ಷದ ವಾರ್ಷಿಕ ಸಮಾರಂಭಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಹೈದರಾಬಾದ್‌ಗೆ ಭೇಟಿ ನೀಡಿದಾಗಲೂ ಅವರು ಬೆಂಗಳೂರಿಗೆ ಬಂದಿದ್ದರು.

ಇರಾನಿ ಟೀ, ಧಮ್‌ ಬಿರಿಯಾನಿ ಸೇವಿಸುವುದು ಮರೆಯದಿರಿ: ಕೆ.ಟಿ.ರಾಮರಾವ್‌

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ಬೃಹತ್‌‌ ಕಟ್ಟಡಗಳ ಚಿತ್ರಗಳನ್ನು ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ರಾವ್ ಅವರು ಬಿಜೆಪಿಯ ಹೆಸರನ್ನು ಉಲ್ಲೇಖಿಸದಿದ್ದರೂ, “ವಾಟ್ಸ್‌‌ಅಪ್‌‌ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿ ಸಭೆ” ಮತ್ತು “ಜುಮ್ಲಾ ಜೀವೀಸ್‌” ಥರದ ಪದಗಳನ್ನು ಬಳಸಿ ಟಾರ್ಗೆಟ್ ಮಾಡಿದ್ದಾರೆ.

ನಕಲಿ ಸುದ್ದಿ, ವದಂತಿ ಹರಡುವವರನ್ನು “ವಾಟ್ಸ್‌ಅಪ್‌ ವಿಶ್ವವಿದ್ಯಾನಿಲಯದವರು”ಎಂದು ಸಾಮಾನ್ಯವಾಗಿ ಕಾಲೆಳೆಯಲಾಗುತ್ತದೆ. ಬಿಜೆಪಿಯನ್ನು ಗೇಲಿ ಮಾಡಲೂ ವಿರೋಧ ಪಕ್ಷಗಳು ಈ ಸಾಲನ್ನು ಹೆಚ್ಚಾಗಿ ಬಳಸುತ್ತವೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ತೆಲಂಗಾಣಕ್ಕೆ ಭೇಟಿ ನೀಡುವವರು, ಇಲ್ಲಿನ ಸರ್ಕಾರವು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆಗಳನ್ನು ಅನುಸರಿಸಬೇಕು” ಎಂದು ರಾಮರಾವ್‌ ಸಲಹೆ ನೀಡಿದ್ದಾರೆ.

“ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಚಾಯ್ ಅನ್ನು ಆನಂದಿಸಲು ಮರೆಯಬೇಡಿ” ಎಂದು ತಿಳಿಸಿದ್ದಾರೆ.

18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದಕ್ಷಿಣ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರನೇ ಸಭೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಬಿಜೆಪಿಯು ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಹೈದರಾಬಾದ್‌ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಾಟ್ಸಪ್ ಯೂನಿವರ್ಸಿಟಿಯವರಿಗೆ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡೊ ಅಭ್ಯಾಸ ಇದೆ. ನೇರವಾಗಿ ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲು ಆಗುವುದಿಲ್ಲಾ… Ekanath and Devendra Fadnavis (ED) govt. ಇದಕ್ಕೆ ಉದಾಹರಣೆ…

  2. ದುರಂಕಾರಿ ಕೆಸಿಆರ್ ಗೆ ಮುಂಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದ ಜನ ಚಿಪ್ಪೆಯಲ್ಲಿ ನೀರು ಕುಡಿಸ್ತಾರೆ ಅನ್ನೋದು ಖಚಿತ ಆಗಿದೆ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...