Homeಮುಖಪುಟತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

- Advertisement -
- Advertisement -

ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬರಮಾಡಿಕೊಳ್ಳಲು ಹೋಗುವುದಿಲ್ಲ. ಆರು ತಿಂಗಳಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌‌ ಅವರು ಪ್ರಧಾನಿಯವರನ್ನು ಸ್ವಾಗತಿಸದೆ ಪ್ರೋಟೋಕಾಲ್‌ ಅನುಸರಿಸಿಲ್ಲ ಎಂದು ಆರೋಪಿಸಲಾಗಿದೆ.

ತೆಲಂಗಾಣ ಸರ್ಕಾರವು ಹಂಚಿಕೊಂಡ ಟಿಪ್ಪಣಿಯ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 2:55ಕ್ಕೆ ಹೈದರಾಬಾದ್‌ಗೆ ಬಂದಿಳಿಯಲಿದ್ದಾರೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಸಚಿವರು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕರಾಗಿದ್ದು, ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳುವಂತೆ ಟಿಆರ್‌ಎಸ್‌ನ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಕೊನೆಗೊಳ್ಳಲಿರುವ ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ.

ಇದರ ನಡುವೆ ಮತ್ತೊಂದು ಬೆಳವಣಿಗೆಯಾಗಿದೆ. ತೆಲಂಗಾಣ ಸಿಎಂ ಚಂದ್ರಶೇರ್‌ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳದೆ, ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ಮುಂದಾದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಪ್ರಧಾನಿ ಆಗಮಿಸುವ ಎರಡು ಗಂಟೆಗಳ ಮೊದಲು ಐಟಿ ನಗರಕ್ಕೆ ಸಿನ್ಹಾ ಬರುವುದು ನಿಗದಿಯಾಗಿತ್ತು.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಕೆಸಿಆರ್ ಅವರು ತಮ್ಮ ಪಕ್ಷದ ಬೆಂಬಲವನ್ನು ಸಿನ್ಹಾಗೆ ನೀಡಿದ್ದಾರೆ. ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಎನ್‌ಡಿಎ ಪರವಾಗಿ ಸ್ಪರ್ಧಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ಕೆಸಿಆರ್ ಅವರು ಕೇಂದ್ರ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಕಳೆದ ತಿಂಗಳಷ್ಟೇ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ವಿರುದ್ಧ ಕೆಸಿಆರ್‌ ಮಾತನಾಡಿದ್ದರು. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಅಗ್ನಿಪಥ್ ವಿರುದ್ಧ ಆಕ್ರೋಶ ಹೊರಹಾಕಿವೆ.

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಗೈರು ಹಾಜರಾಗಿದ್ದರು. ಫೆಬ್ರವರಿಯಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನ 20ನೇ ವರ್ಷದ ವಾರ್ಷಿಕ ಸಮಾರಂಭಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಹೈದರಾಬಾದ್‌ಗೆ ಭೇಟಿ ನೀಡಿದಾಗಲೂ ಅವರು ಬೆಂಗಳೂರಿಗೆ ಬಂದಿದ್ದರು.

ಇರಾನಿ ಟೀ, ಧಮ್‌ ಬಿರಿಯಾನಿ ಸೇವಿಸುವುದು ಮರೆಯದಿರಿ: ಕೆ.ಟಿ.ರಾಮರಾವ್‌

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ಬೃಹತ್‌‌ ಕಟ್ಟಡಗಳ ಚಿತ್ರಗಳನ್ನು ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ರಾವ್ ಅವರು ಬಿಜೆಪಿಯ ಹೆಸರನ್ನು ಉಲ್ಲೇಖಿಸದಿದ್ದರೂ, “ವಾಟ್ಸ್‌‌ಅಪ್‌‌ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿ ಸಭೆ” ಮತ್ತು “ಜುಮ್ಲಾ ಜೀವೀಸ್‌” ಥರದ ಪದಗಳನ್ನು ಬಳಸಿ ಟಾರ್ಗೆಟ್ ಮಾಡಿದ್ದಾರೆ.

ನಕಲಿ ಸುದ್ದಿ, ವದಂತಿ ಹರಡುವವರನ್ನು “ವಾಟ್ಸ್‌ಅಪ್‌ ವಿಶ್ವವಿದ್ಯಾನಿಲಯದವರು”ಎಂದು ಸಾಮಾನ್ಯವಾಗಿ ಕಾಲೆಳೆಯಲಾಗುತ್ತದೆ. ಬಿಜೆಪಿಯನ್ನು ಗೇಲಿ ಮಾಡಲೂ ವಿರೋಧ ಪಕ್ಷಗಳು ಈ ಸಾಲನ್ನು ಹೆಚ್ಚಾಗಿ ಬಳಸುತ್ತವೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ತೆಲಂಗಾಣಕ್ಕೆ ಭೇಟಿ ನೀಡುವವರು, ಇಲ್ಲಿನ ಸರ್ಕಾರವು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆಗಳನ್ನು ಅನುಸರಿಸಬೇಕು” ಎಂದು ರಾಮರಾವ್‌ ಸಲಹೆ ನೀಡಿದ್ದಾರೆ.

“ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಚಾಯ್ ಅನ್ನು ಆನಂದಿಸಲು ಮರೆಯಬೇಡಿ” ಎಂದು ತಿಳಿಸಿದ್ದಾರೆ.

18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದಕ್ಷಿಣ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರನೇ ಸಭೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಬಿಜೆಪಿಯು ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಹೈದರಾಬಾದ್‌ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಾಟ್ಸಪ್ ಯೂನಿವರ್ಸಿಟಿಯವರಿಗೆ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡೊ ಅಭ್ಯಾಸ ಇದೆ. ನೇರವಾಗಿ ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲು ಆಗುವುದಿಲ್ಲಾ… Ekanath and Devendra Fadnavis (ED) govt. ಇದಕ್ಕೆ ಉದಾಹರಣೆ…

  2. ದುರಂಕಾರಿ ಕೆಸಿಆರ್ ಗೆ ಮುಂಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದ ಜನ ಚಿಪ್ಪೆಯಲ್ಲಿ ನೀರು ಕುಡಿಸ್ತಾರೆ ಅನ್ನೋದು ಖಚಿತ ಆಗಿದೆ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...