Homeಮುಖಪುಟತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

- Advertisement -
- Advertisement -

ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬರಮಾಡಿಕೊಳ್ಳಲು ಹೋಗುವುದಿಲ್ಲ. ಆರು ತಿಂಗಳಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌‌ ಅವರು ಪ್ರಧಾನಿಯವರನ್ನು ಸ್ವಾಗತಿಸದೆ ಪ್ರೋಟೋಕಾಲ್‌ ಅನುಸರಿಸಿಲ್ಲ ಎಂದು ಆರೋಪಿಸಲಾಗಿದೆ.

ತೆಲಂಗಾಣ ಸರ್ಕಾರವು ಹಂಚಿಕೊಂಡ ಟಿಪ್ಪಣಿಯ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 2:55ಕ್ಕೆ ಹೈದರಾಬಾದ್‌ಗೆ ಬಂದಿಳಿಯಲಿದ್ದಾರೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಸಚಿವರು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕರಾಗಿದ್ದು, ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳುವಂತೆ ಟಿಆರ್‌ಎಸ್‌ನ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಕೊನೆಗೊಳ್ಳಲಿರುವ ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ.

ಇದರ ನಡುವೆ ಮತ್ತೊಂದು ಬೆಳವಣಿಗೆಯಾಗಿದೆ. ತೆಲಂಗಾಣ ಸಿಎಂ ಚಂದ್ರಶೇರ್‌ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳದೆ, ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ಮುಂದಾದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಪ್ರಧಾನಿ ಆಗಮಿಸುವ ಎರಡು ಗಂಟೆಗಳ ಮೊದಲು ಐಟಿ ನಗರಕ್ಕೆ ಸಿನ್ಹಾ ಬರುವುದು ನಿಗದಿಯಾಗಿತ್ತು.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಕೆಸಿಆರ್ ಅವರು ತಮ್ಮ ಪಕ್ಷದ ಬೆಂಬಲವನ್ನು ಸಿನ್ಹಾಗೆ ನೀಡಿದ್ದಾರೆ. ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಎನ್‌ಡಿಎ ಪರವಾಗಿ ಸ್ಪರ್ಧಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ಕೆಸಿಆರ್ ಅವರು ಕೇಂದ್ರ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಕಳೆದ ತಿಂಗಳಷ್ಟೇ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ವಿರುದ್ಧ ಕೆಸಿಆರ್‌ ಮಾತನಾಡಿದ್ದರು. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಅಗ್ನಿಪಥ್ ವಿರುದ್ಧ ಆಕ್ರೋಶ ಹೊರಹಾಕಿವೆ.

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಗೈರು ಹಾಜರಾಗಿದ್ದರು. ಫೆಬ್ರವರಿಯಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನ 20ನೇ ವರ್ಷದ ವಾರ್ಷಿಕ ಸಮಾರಂಭಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಹೈದರಾಬಾದ್‌ಗೆ ಭೇಟಿ ನೀಡಿದಾಗಲೂ ಅವರು ಬೆಂಗಳೂರಿಗೆ ಬಂದಿದ್ದರು.

ಇರಾನಿ ಟೀ, ಧಮ್‌ ಬಿರಿಯಾನಿ ಸೇವಿಸುವುದು ಮರೆಯದಿರಿ: ಕೆ.ಟಿ.ರಾಮರಾವ್‌

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ಬೃಹತ್‌‌ ಕಟ್ಟಡಗಳ ಚಿತ್ರಗಳನ್ನು ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ರಾವ್ ಅವರು ಬಿಜೆಪಿಯ ಹೆಸರನ್ನು ಉಲ್ಲೇಖಿಸದಿದ್ದರೂ, “ವಾಟ್ಸ್‌‌ಅಪ್‌‌ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿ ಸಭೆ” ಮತ್ತು “ಜುಮ್ಲಾ ಜೀವೀಸ್‌” ಥರದ ಪದಗಳನ್ನು ಬಳಸಿ ಟಾರ್ಗೆಟ್ ಮಾಡಿದ್ದಾರೆ.

ನಕಲಿ ಸುದ್ದಿ, ವದಂತಿ ಹರಡುವವರನ್ನು “ವಾಟ್ಸ್‌ಅಪ್‌ ವಿಶ್ವವಿದ್ಯಾನಿಲಯದವರು”ಎಂದು ಸಾಮಾನ್ಯವಾಗಿ ಕಾಲೆಳೆಯಲಾಗುತ್ತದೆ. ಬಿಜೆಪಿಯನ್ನು ಗೇಲಿ ಮಾಡಲೂ ವಿರೋಧ ಪಕ್ಷಗಳು ಈ ಸಾಲನ್ನು ಹೆಚ್ಚಾಗಿ ಬಳಸುತ್ತವೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ತೆಲಂಗಾಣಕ್ಕೆ ಭೇಟಿ ನೀಡುವವರು, ಇಲ್ಲಿನ ಸರ್ಕಾರವು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆಗಳನ್ನು ಅನುಸರಿಸಬೇಕು” ಎಂದು ರಾಮರಾವ್‌ ಸಲಹೆ ನೀಡಿದ್ದಾರೆ.

“ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಚಾಯ್ ಅನ್ನು ಆನಂದಿಸಲು ಮರೆಯಬೇಡಿ” ಎಂದು ತಿಳಿಸಿದ್ದಾರೆ.

18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದಕ್ಷಿಣ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರನೇ ಸಭೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಬಿಜೆಪಿಯು ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಹೈದರಾಬಾದ್‌ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಾಟ್ಸಪ್ ಯೂನಿವರ್ಸಿಟಿಯವರಿಗೆ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡೊ ಅಭ್ಯಾಸ ಇದೆ. ನೇರವಾಗಿ ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲು ಆಗುವುದಿಲ್ಲಾ… Ekanath and Devendra Fadnavis (ED) govt. ಇದಕ್ಕೆ ಉದಾಹರಣೆ…

  2. ದುರಂಕಾರಿ ಕೆಸಿಆರ್ ಗೆ ಮುಂಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದ ಜನ ಚಿಪ್ಪೆಯಲ್ಲಿ ನೀರು ಕುಡಿಸ್ತಾರೆ ಅನ್ನೋದು ಖಚಿತ ಆಗಿದೆ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...