Homeಮುಖಪುಟತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

- Advertisement -
- Advertisement -

ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬರಮಾಡಿಕೊಳ್ಳಲು ಹೋಗುವುದಿಲ್ಲ. ಆರು ತಿಂಗಳಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌‌ ಅವರು ಪ್ರಧಾನಿಯವರನ್ನು ಸ್ವಾಗತಿಸದೆ ಪ್ರೋಟೋಕಾಲ್‌ ಅನುಸರಿಸಿಲ್ಲ ಎಂದು ಆರೋಪಿಸಲಾಗಿದೆ.

ತೆಲಂಗಾಣ ಸರ್ಕಾರವು ಹಂಚಿಕೊಂಡ ಟಿಪ್ಪಣಿಯ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 2:55ಕ್ಕೆ ಹೈದರಾಬಾದ್‌ಗೆ ಬಂದಿಳಿಯಲಿದ್ದಾರೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಸಚಿವರು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕರಾಗಿದ್ದು, ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳುವಂತೆ ಟಿಆರ್‌ಎಸ್‌ನ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಕೊನೆಗೊಳ್ಳಲಿರುವ ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ.

ಇದರ ನಡುವೆ ಮತ್ತೊಂದು ಬೆಳವಣಿಗೆಯಾಗಿದೆ. ತೆಲಂಗಾಣ ಸಿಎಂ ಚಂದ್ರಶೇರ್‌ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳದೆ, ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ಮುಂದಾದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಪ್ರಧಾನಿ ಆಗಮಿಸುವ ಎರಡು ಗಂಟೆಗಳ ಮೊದಲು ಐಟಿ ನಗರಕ್ಕೆ ಸಿನ್ಹಾ ಬರುವುದು ನಿಗದಿಯಾಗಿತ್ತು.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಕೆಸಿಆರ್ ಅವರು ತಮ್ಮ ಪಕ್ಷದ ಬೆಂಬಲವನ್ನು ಸಿನ್ಹಾಗೆ ನೀಡಿದ್ದಾರೆ. ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಎನ್‌ಡಿಎ ಪರವಾಗಿ ಸ್ಪರ್ಧಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ಕೆಸಿಆರ್ ಅವರು ಕೇಂದ್ರ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಕಳೆದ ತಿಂಗಳಷ್ಟೇ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ವಿರುದ್ಧ ಕೆಸಿಆರ್‌ ಮಾತನಾಡಿದ್ದರು. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಅಗ್ನಿಪಥ್ ವಿರುದ್ಧ ಆಕ್ರೋಶ ಹೊರಹಾಕಿವೆ.

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಗೈರು ಹಾಜರಾಗಿದ್ದರು. ಫೆಬ್ರವರಿಯಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನ 20ನೇ ವರ್ಷದ ವಾರ್ಷಿಕ ಸಮಾರಂಭಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಹೈದರಾಬಾದ್‌ಗೆ ಭೇಟಿ ನೀಡಿದಾಗಲೂ ಅವರು ಬೆಂಗಳೂರಿಗೆ ಬಂದಿದ್ದರು.

ಇರಾನಿ ಟೀ, ಧಮ್‌ ಬಿರಿಯಾನಿ ಸೇವಿಸುವುದು ಮರೆಯದಿರಿ: ಕೆ.ಟಿ.ರಾಮರಾವ್‌

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ಬೃಹತ್‌‌ ಕಟ್ಟಡಗಳ ಚಿತ್ರಗಳನ್ನು ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ರಾವ್ ಅವರು ಬಿಜೆಪಿಯ ಹೆಸರನ್ನು ಉಲ್ಲೇಖಿಸದಿದ್ದರೂ, “ವಾಟ್ಸ್‌‌ಅಪ್‌‌ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿ ಸಭೆ” ಮತ್ತು “ಜುಮ್ಲಾ ಜೀವೀಸ್‌” ಥರದ ಪದಗಳನ್ನು ಬಳಸಿ ಟಾರ್ಗೆಟ್ ಮಾಡಿದ್ದಾರೆ.

ನಕಲಿ ಸುದ್ದಿ, ವದಂತಿ ಹರಡುವವರನ್ನು “ವಾಟ್ಸ್‌ಅಪ್‌ ವಿಶ್ವವಿದ್ಯಾನಿಲಯದವರು”ಎಂದು ಸಾಮಾನ್ಯವಾಗಿ ಕಾಲೆಳೆಯಲಾಗುತ್ತದೆ. ಬಿಜೆಪಿಯನ್ನು ಗೇಲಿ ಮಾಡಲೂ ವಿರೋಧ ಪಕ್ಷಗಳು ಈ ಸಾಲನ್ನು ಹೆಚ್ಚಾಗಿ ಬಳಸುತ್ತವೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ತೆಲಂಗಾಣಕ್ಕೆ ಭೇಟಿ ನೀಡುವವರು, ಇಲ್ಲಿನ ಸರ್ಕಾರವು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆಗಳನ್ನು ಅನುಸರಿಸಬೇಕು” ಎಂದು ರಾಮರಾವ್‌ ಸಲಹೆ ನೀಡಿದ್ದಾರೆ.

“ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಚಾಯ್ ಅನ್ನು ಆನಂದಿಸಲು ಮರೆಯಬೇಡಿ” ಎಂದು ತಿಳಿಸಿದ್ದಾರೆ.

18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದಕ್ಷಿಣ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರನೇ ಸಭೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಬಿಜೆಪಿಯು ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಹೈದರಾಬಾದ್‌ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಾಟ್ಸಪ್ ಯೂನಿವರ್ಸಿಟಿಯವರಿಗೆ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡೊ ಅಭ್ಯಾಸ ಇದೆ. ನೇರವಾಗಿ ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲು ಆಗುವುದಿಲ್ಲಾ… Ekanath and Devendra Fadnavis (ED) govt. ಇದಕ್ಕೆ ಉದಾಹರಣೆ…

  2. ದುರಂಕಾರಿ ಕೆಸಿಆರ್ ಗೆ ಮುಂಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದ ಜನ ಚಿಪ್ಪೆಯಲ್ಲಿ ನೀರು ಕುಡಿಸ್ತಾರೆ ಅನ್ನೋದು ಖಚಿತ ಆಗಿದೆ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...