Homeಮುಖಪುಟತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

- Advertisement -
- Advertisement -

ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬರಮಾಡಿಕೊಳ್ಳಲು ಹೋಗುವುದಿಲ್ಲ. ಆರು ತಿಂಗಳಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌‌ ಅವರು ಪ್ರಧಾನಿಯವರನ್ನು ಸ್ವಾಗತಿಸದೆ ಪ್ರೋಟೋಕಾಲ್‌ ಅನುಸರಿಸಿಲ್ಲ ಎಂದು ಆರೋಪಿಸಲಾಗಿದೆ.

ತೆಲಂಗಾಣ ಸರ್ಕಾರವು ಹಂಚಿಕೊಂಡ ಟಿಪ್ಪಣಿಯ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 2:55ಕ್ಕೆ ಹೈದರಾಬಾದ್‌ಗೆ ಬಂದಿಳಿಯಲಿದ್ದಾರೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಸಚಿವರು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕರಾಗಿದ್ದು, ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳುವಂತೆ ಟಿಆರ್‌ಎಸ್‌ನ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಕೊನೆಗೊಳ್ಳಲಿರುವ ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ.

ಇದರ ನಡುವೆ ಮತ್ತೊಂದು ಬೆಳವಣಿಗೆಯಾಗಿದೆ. ತೆಲಂಗಾಣ ಸಿಎಂ ಚಂದ್ರಶೇರ್‌ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳದೆ, ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ಮುಂದಾದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಪ್ರಧಾನಿ ಆಗಮಿಸುವ ಎರಡು ಗಂಟೆಗಳ ಮೊದಲು ಐಟಿ ನಗರಕ್ಕೆ ಸಿನ್ಹಾ ಬರುವುದು ನಿಗದಿಯಾಗಿತ್ತು.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಕೆಸಿಆರ್ ಅವರು ತಮ್ಮ ಪಕ್ಷದ ಬೆಂಬಲವನ್ನು ಸಿನ್ಹಾಗೆ ನೀಡಿದ್ದಾರೆ. ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಎನ್‌ಡಿಎ ಪರವಾಗಿ ಸ್ಪರ್ಧಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ಕೆಸಿಆರ್ ಅವರು ಕೇಂದ್ರ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಕಳೆದ ತಿಂಗಳಷ್ಟೇ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ವಿರುದ್ಧ ಕೆಸಿಆರ್‌ ಮಾತನಾಡಿದ್ದರು. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಅಗ್ನಿಪಥ್ ವಿರುದ್ಧ ಆಕ್ರೋಶ ಹೊರಹಾಕಿವೆ.

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಗೈರು ಹಾಜರಾಗಿದ್ದರು. ಫೆಬ್ರವರಿಯಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನ 20ನೇ ವರ್ಷದ ವಾರ್ಷಿಕ ಸಮಾರಂಭಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಹೈದರಾಬಾದ್‌ಗೆ ಭೇಟಿ ನೀಡಿದಾಗಲೂ ಅವರು ಬೆಂಗಳೂರಿಗೆ ಬಂದಿದ್ದರು.

ಇರಾನಿ ಟೀ, ಧಮ್‌ ಬಿರಿಯಾನಿ ಸೇವಿಸುವುದು ಮರೆಯದಿರಿ: ಕೆ.ಟಿ.ರಾಮರಾವ್‌

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ಬೃಹತ್‌‌ ಕಟ್ಟಡಗಳ ಚಿತ್ರಗಳನ್ನು ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ರಾವ್ ಅವರು ಬಿಜೆಪಿಯ ಹೆಸರನ್ನು ಉಲ್ಲೇಖಿಸದಿದ್ದರೂ, “ವಾಟ್ಸ್‌‌ಅಪ್‌‌ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿ ಸಭೆ” ಮತ್ತು “ಜುಮ್ಲಾ ಜೀವೀಸ್‌” ಥರದ ಪದಗಳನ್ನು ಬಳಸಿ ಟಾರ್ಗೆಟ್ ಮಾಡಿದ್ದಾರೆ.

ನಕಲಿ ಸುದ್ದಿ, ವದಂತಿ ಹರಡುವವರನ್ನು “ವಾಟ್ಸ್‌ಅಪ್‌ ವಿಶ್ವವಿದ್ಯಾನಿಲಯದವರು”ಎಂದು ಸಾಮಾನ್ಯವಾಗಿ ಕಾಲೆಳೆಯಲಾಗುತ್ತದೆ. ಬಿಜೆಪಿಯನ್ನು ಗೇಲಿ ಮಾಡಲೂ ವಿರೋಧ ಪಕ್ಷಗಳು ಈ ಸಾಲನ್ನು ಹೆಚ್ಚಾಗಿ ಬಳಸುತ್ತವೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ತೆಲಂಗಾಣಕ್ಕೆ ಭೇಟಿ ನೀಡುವವರು, ಇಲ್ಲಿನ ಸರ್ಕಾರವು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆಗಳನ್ನು ಅನುಸರಿಸಬೇಕು” ಎಂದು ರಾಮರಾವ್‌ ಸಲಹೆ ನೀಡಿದ್ದಾರೆ.

“ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಚಾಯ್ ಅನ್ನು ಆನಂದಿಸಲು ಮರೆಯಬೇಡಿ” ಎಂದು ತಿಳಿಸಿದ್ದಾರೆ.

18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದಕ್ಷಿಣ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರನೇ ಸಭೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಬಿಜೆಪಿಯು ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಹೈದರಾಬಾದ್‌ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ವಾಟ್ಸಪ್ ಯೂನಿವರ್ಸಿಟಿಯವರಿಗೆ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡೊ ಅಭ್ಯಾಸ ಇದೆ. ನೇರವಾಗಿ ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲು ಆಗುವುದಿಲ್ಲಾ… Ekanath and Devendra Fadnavis (ED) govt. ಇದಕ್ಕೆ ಉದಾಹರಣೆ…

  2. ದುರಂಕಾರಿ ಕೆಸಿಆರ್ ಗೆ ಮುಂಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದ ಜನ ಚಿಪ್ಪೆಯಲ್ಲಿ ನೀರು ಕುಡಿಸ್ತಾರೆ ಅನ್ನೋದು ಖಚಿತ ಆಗಿದೆ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...