Homeಮುಖಪುಟರಾಜ್ಯಗಳ ಅನುದಾನ ಕಡಿತಕ್ಕೆ ಹಿಂಬಾಗಿಲಿನಿಂದ ಪ್ರಯತ್ನಿಸಿದ್ದ ಮೋದಿ: ಅಲ್‌ ಜಝೀರಾ ವರದಿ

ರಾಜ್ಯಗಳ ಅನುದಾನ ಕಡಿತಕ್ಕೆ ಹಿಂಬಾಗಿಲಿನಿಂದ ಪ್ರಯತ್ನಿಸಿದ್ದ ಮೋದಿ: ಅಲ್‌ ಜಝೀರಾ ವರದಿ

- Advertisement -
- Advertisement -

2014 ರಲ್ಲಿ ಪ್ರಧಾನ ಮಂತ್ರಿಯಾದ ತಕ್ಷಣ, ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಮೀಸಲಿಟ್ಟ ಅನುದಾನವನ್ನು ಗಮನಾರ್ಹವಾಗಿ ಕಡಿತಗೊಳಿಸಲು ಭಾರತದ ಹಣಕಾಸು ಆಯೋಗದೊಂದಿಗೆ ‘ಹಿಂಬಾಗಿಲಿನ ಮಾತುಕತೆ’ ನಡೆಸಿದ್ದರು ಎಂದು ‘ಅಲ್‌ ಜಝೀರಾ’ ವರದಿ ಮಾಡಿದೆ.

‘ಕೇಂದ್ರೀಯ ತೆರಿಗೆಗಳಿಂದ ರಾಜ್ಯಗಳ ಪಾಲನ್ನು ನಿರ್ಧರಿಸುವ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಿದೆ’ ಎಂದು ಆಯೋಗದ ಮುಖ್ಯಸ್ಥರು ವಿರೋಧಿಸಿದ ನಂತರ, ಮೋದಿ ಅವರು ಹಿಂದೆ ಸರಿಯಬೇಕಾಯಿತು ಎಂದು ಹೇಳಲಾಗಿದೆ.

ಹಣಕಾಸು ಆಯೋಗದ ದೃಢವಾದ ನಿಲುವು ಮೋದಿ ಸರ್ಕಾರವು ತನ್ನ ಮೊದಲ ಪೂರ್ಣ ಬಜೆಟ್ ಅನ್ನು 48 ಗಂಟೆಗಳಲ್ಲಿ ತರಾತುರಿಯಲ್ಲಿ ಮರುಪರಿಶೀಲಿಸುವಂತೆ ಮಾಡಿತು. ತೆರಿಗೆಗಳ ಹೆಚ್ಚಿನ ಭಾಗವನ್ನು ಕೇಂದ್ರದಲ್ಲೇ ಉಳಿಸಿಕೊಳ್ಳುವ ಅವರ ಊಹೆಯು ಕಾರ್ಯಸಾಧುವಾಗದ ಕಾರಣ, ಒಕ್ಕೂಟ ಸರ್ಕಾರವು ತನ್ನ ಕಲ್ಯಾಣ ಕಾರ್ಯಕ್ರಮಗಳ ಹಣವನ್ನು ಕಡಿತಗೊಳಿಸಿತ್ತು.

ಅದೇ ಸಮಯದಲ್ಲಿ, ‘ರಾಜ್ಯಗಳಿಗೆ ಹಂಚಿಕೆ ಮಾಡಬೇಕಾದ ತೆರಿಗೆ ಭಾಗಗಳ ಕುರಿತು ಹಣಕಾಸು ಆಯೋಗದ ಶಿಫಾರಸುಗಳನ್ನು ನಾನು ಸ್ವಾಗತಿಸುತ್ತೇನೆ’ ಎಂದು ಮೋದಿ ಸಂಸತ್ತಿನಲ್ಲಿ ಸುಳ್ಳು ಹೇಳಿಕೆ ನೀಡಿದರು.

ಒಕ್ಕೂಟ ಸರ್ಕಾರ ಬಜೆಟ್ ತಯಾರಿಕೆಯಲ್ಲಿ ಹಣಕಾಸಿನ ಚೌಕಾಶಿ ಮತ್ತು ತೆರೆಮರೆಯ ಕಾರ್ಯಾಚರಣೆ ಬಗ್ಗೆ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಅವರಿಂದ ಬಹಿರಂಗವಾಗಿದೆ. ಪ್ರಧಾನ ಮಂತ್ರಿ ಕಚೇರಿಯಲ್ಲಿ ಜಂಟಿ ಕಾರ್ಯದರ್ಶಿಯಾಗಿ, ಅವರು ಮೋದಿ ಮತ್ತು ಹಣಕಾಸು ಆಯೋಗದ ಅಧ್ಯಕ್ಷ ವೈವಿ ರೆಡ್ಡಿ ನಡುವಿನ ‘ಹಿಂಬಾಗಿಲ ಸಂಧಾನ’ದಲ್ಲಿ ಸಂವಹಕಾರರಾಗಿದ್ದರು.

ಪ್ರಧಾನ ಮಂತ್ರಿ ಮತ್ತು ಅವರ ತಂಡವು ರಾಜ್ಯಗಳ ಹಣಕಾಸು ಕಡಿತಗೊಳಿಸಲು ಮೊದಲಿನಿಂದಲೂ ಪ್ರಯತ್ನಿಸಿದೆ ಎಂದು ಪ್ರಸ್ತುತ ಭಾರತ ಸರ್ಕಾರದ ಉನ್ನತ ಸರ್ಕಾರಿ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಒಪ್ಪಿಕೊಂಡಿರುವುದು ಚರ್ಚಗೆ ಗ್ರಾಸವಾಗಿದೆ. ಈಗ ಬಗ್ಗೆ ಹಲವು ರಾಜ್ಯಗಳು ಪದೇ ಪದೇ ಕಳವಳ ವ್ಯಕ್ತಪಡಿಸಿವೆ.
ಸರ್ಕಾರೇತರ ಚಿಂತಕರ ಚಾವಡಿಯಾದ ‘ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯ ಕೇಂದ್ರ’ (ಸಿಎಸ್ಇಪಿ) ಆಯೋಜಿಸಿದ್ದ ‘ಭಾರತದಲ್ಲಿ ಹಣಕಾಸು ವರದಿ’ ಕುರಿತು ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಸುಬ್ರಹ್ಮಣ್ಯಂ ಅವರು ಈ ಮಾಹಿತಿಯನ್ನು ಹಂಚಿಕೊಂಡರು.

ಒಕ್ಕೂಟ ಸರ್ಕಾರ ಬಜೆಟ್‌ಗಳು “ಸತ್ಯವನ್ನು ಮುಚ್ಚುವ ಪ್ರಯತ್ನದ ಪದರಗಳಲ್ಲಿ ಹೇಗೆ ಆವರಿಸಲ್ಪಟ್ಟಿವೆ” ಎಂಬುದನ್ನು ಅವರು ಬಹಿರಂಗಪಡಿಸಿದರು. ‘ಸರ್ಕಾರದ ಖಾತೆಗಳು ಪಾರದರ್ಶಕವಾಗಿದ್ದರೆ, ಹಣಕಾಸಿನ ಸ್ಥಿತಿಯ ಸತ್ಯವು ಸ್ಪಷ್ಟವಾಗುತ್ತದೆ. ಅದಾನಿ ಗ್ರೂಪ್‌ನ ಹಣಕಾಸಿನ ಸ್ಥಿತಗತಿಯನ್ನು ಅಮೆರಿಕ ಮೂಲದ ‘ಹಿಂಡೆನ್ಬರ್ಗ್’ ರಿಸರ್ಚ್ ಕಳೆದ ವರ್ಷ ಹೇಗೆ ಬೆಳಕಿಗೆ ತಂದಿತು ಎಂಬುದರ ಬಗ್ಗೆ ಅವರು ಮಾತನಾಡಿದ್ದಾರೆ.

ಭಾರತದ ಅತಿ ದೊಡ್ಡ ವ್ಯಾಪಾರ ಸಮೂಹಗಳ ಲೆಕ್ಕಪತ್ರ ವಂಚನೆ ಮತ್ತು ಇತರ ಸಮಸ್ಯೆಗಳ ಆಪಾದನೆಗಳು ಅದಾನಿ ಗುಂಪಿನ ಮೌಲ್ಯಮಾಪನದಲ್ಲಿ ಸುಮಾತು $132 ಬಿಲಿಯನ್ ಮಾರುಕಟ್ಟೆ ಕುಸಿತಕ್ಕೆ ಕಾರಣವಾಯಿತು.

ಅಲ್ ಜಝೀರಾಗೆ ರಿಪೋರ್ಟರ್ಸ್ ಕಲೆಕ್ಟಿವ್ ಚರ್ಚೆಯಲ್ಲಿ ಒಂದು ದಶಕದ ಹಿಂದಿನ ಬಜೆಟ್ ಮತ್ತು ಇತರ ದಾಖಲೆಗಳ ವಿರುದ್ಧ ಸುಬ್ರಹ್ಮಣ್ಯಂ ಅವರ ಆರೋಪಗಳ ಕುರಿತು ಸ್ವತಂತ್ರವಾಗಿ ಪರಿಶೀಲಿಸಿತು.

ಸುಬ್ರಹ್ಮಣ್ಯಂ ಅವರು ಸರ್ಕಾರದ ಅನುದಾನಿತ ಮೂಲಸೌಕರ್ಯ ಯೋಜನೆಯಲ್ಲಿ ಹಣಕಾಸಿನ ದುರುಪಯೋಗ ಮತ್ತು ವಂಚನೆಯ ವಿವರಗಳನ್ನು ಬಹಿರಂಗಪಡಿಸಿ, ಅದನ್ನು “ತಮಾಷೆಯ ಪ್ರಕರಣ” ಎಂದು ಉಲ್ಲೇಖಿಸಿದ್ದಾರೆ.

ಅವರ ಬಹುಮುಖ್ಯ ಮುಚ್ಚಿಟ್ಟ ಸತ್ಯದ ಬಹಿರಂಗಪಡಿಸುವಿಕೆಯ ಹೊರತಾಗಿಯೂ, ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದ ನೇರಪ್ರಸಾರ ವಿಡಿಯೋ 500 ಕ್ಕಿಂತ ಕಡಿಮೆ ವೀಕ್ಷಣೆ ಕಂಡಿದೆ. ದಿ ರಿಪೋರ್ಟರ್ಸ್ ಕಲೆಕ್ಟಿವ್ ಪ್ರಧಾನ ಮಂತ್ರಿ ಕಚೇರಿಗೆ ವಿವರವಾದ ಪ್ರಶ್ನೆಗಳನ್ನು ಕಳುಹಿಸಿದ ಗಂಟೆಗಳ ನಂತರ, ಸಿಎಸ್ಇಪಿ ಯೂಟ್ಯೂಬ್ ಚಾನೆಲ್‌ನಲ್ಲಿ ವಿಚಾರ ಸಂಕಿರಣದ ವೀಡಿಯೋ ವೀಕ್ಷಣೆಯನ್ನು ಕಡಿತಗೊಳಿಸಲಾಯಿತು. ಸುಬ್ರಹ್ಮಣ್ಯಂ ಮತ್ತು ದಿ ರಿಪೋರ್ಟರ್ಸ್ ಕಲೆಕ್ಟಿವ್‌ನ ವಿವರವಾದ ಪ್ರಶ್ನೆಗಳಿಗೆ ಹಣಕಾಸು ಸಚಿವಾಲಯ-ಪಿಎಂಒ ಈವರೆಗೆ ಪ್ರತಿಕ್ರಿಯಿಸಿಲ್ಲ.

ಅಲ್ ಜಝೀರಾ ವರದಿ ಬಗ್ಗೆ ಕಾಂಗ್ರೆಸ್‌ನ ಜೈರಾಮ್ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಯ ಈ ನಿರ್ಲಕ್ಷ್ಯವು ಪ್ರಧಾನ ಮಂತ್ರಿಯ ನಿಜವಾದ ನಿಯತ್ತನ್ನು ಬಹಿರಂಗಪಡಿಸುತ್ತದೆ: ಅತಿಕೇಂದ್ರೀಕರಣ, ಸಂಪೂರ್ಣ ನಿಯಂತ್ರಣ ಮತ್ತು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಕಿತ್ತುಹಾಕುವಿಕೆ. ರಾಜ್ಯಕ್ಕಾಗಿ ಕಡ್ಡಾಯ ನಿಧಿಗಳನ್ನು ಮೂಲೆಗುಂಪು ಮಾಡುವ ಈ ಪ್ರಯತ್ನದ ಪ್ರಭಾವವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ನಾವು ಅವರ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ರಾಜ್ಯ ಸರ್ಕಾರಗಳು ಕಾನೂನು ಮತ್ತು ಸುವ್ಯವಸ್ಥೆಯಿಂದ ಶಾಲಾ ಶಿಕ್ಷಣದವರೆಗೆ ಎಲ್ಲದಕ್ಕೂ ಹಣಕಾಸು ಒದಗಿಸುತ್ತವೆ. ಜಿಎಸ್‌ಟಿಯ ಪರಿಚಯದ ನಂತರ ಕಡಿಮೆ ಆದಾಯದ ಮೂಲಗಳನ್ನು ಹೊಂದಿವೆ’ ಎಂದು ಜೈರಾಮ್ ರಮೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸೆಸ್ ಮತ್ತು ಸರ್ಚಾರ್ಜ್‌ಗಳು: ರಾಜ್ಯ ಹಕ್ಕುಗಳನ್ನು ಬದಿಗೊತ್ತುವ ಸಾಧನ

ಅಲ್‌ ಝಜೀರಾ ಅವರದಿಯ ಕುರಿತು ಮುಖ್ಯಮಂತ್ರಿ ಸಿದ್ದರಾನಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, ‘ರಾಜ್ಯಗಳೊಂದಿಗೆ ಹಂಚಿಕೊಳ್ಳದಿರುವ ಸೆಸ್ ಮತ್ತು ಸರ್ಚಾರ್ಜ್‌ಗಳ ಸಂಗ್ರಹದಲ್ಲಿನ ಸ್ಥಿರವಾದ ಹೆಚ್ಚಳವು ಕರ್ನಾಟಕದಂತಹ ರಾಜ್ಯಗಳ ಆದಾಯದ ಸರಿಯಾದ ಪಾಲನ್ನು ಕಸಿದುಕೊಳ್ಳುವ ತಂತ್ರವಾಗಿ ಹೊರಹೊಮ್ಮಿದೆ. ಮಾಲಿನಿ ಚಕ್ರವರ್ತಿ ಅವರು ವಿವರಿಸಿರುವ ಈ ವಿಧಾನವು, ರಾಜ್ಯದ ಹಣಕಾಸಿನ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ಹೆಚ್ಚಿಸಲು ಲೆಕ್ಕಾಚಾರದ ತಂತ್ರವನ್ನು ಪ್ರದರ್ಶಿಸುತ್ತದೆ. 2011-12ರಲ್ಲಿ ಒಟ್ಟು ತೆರಿಗೆಗಳ ಶೇ.10.4ರಿಂದ 2021-22ರ ವೇಳೆಗೆ ಶೇ.18.4ಕ್ಕೆ ಸೆಸ್ ಮತ್ತು ಸರ್ಚಾರ್ಜ್ಗಳ ಪಾಲು ಗಣನೀಯವಾಗಿ ಏರಿಕೆಯಾಗಲು ಬಿಜೆಪಿ ಸರ್ಕಾರದ ಆರ್ಥಿಕ ತಂತ್ರಗಳು ಕಾರಣವಾಗಿವೆ’ ಎಂದು ಆರೋಪಿಸಿದ್ದಾರೆ.

‘ಬಿವಿಆರ್ ಸುಬ್ರಹ್ಮಣ್ಯಂ ಅವರು ಬಹಿರಂಗಪಡಿಸಿದ ಸಂಗತಿಗಳು ಮತ್ತು ಅಲ್ ಜಝೀರಾ ಅವರ ಲೇಖನದ ಒಳನೋಟಗಳು ಒಕ್ಕೂಟದ ಹಣಕಾಸು ಸಂಬಂಧಗಳ ಬಗ್ಗೆ ಮೋದಿ ಸರ್ಕಾರದ ಧೋರಣೆಯ ಚಿತ್ರವನ್ನು ಬಹಿರಂಗಪಡಿಸುತ್ತವೆ. ಕರ್ನಾಟಕದಂತಹ ರಾಜ್ಯಗಳು ಕೇಂದ್ರ ಸರ್ಕಾರದ ಆರ್ಥಿಕ ದುರುಪಯೋಗದ ಭಾರವನ್ನು ಹೊರಲು ಬಿಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಈ ವಿಷಯಗಳನ್ನು ಸಾರ್ವಜನಿಕ ಚರ್ಚೆಯ ಮುಂಚೂಣಿಗೆ ತರುವುದು ಅನಿವಾರ್ಯವಾಗಿದೆ’ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಮಸೀದಿ ಧ್ವಂಸಗೊಳಿಸಿ ರಾಮಮಂದಿರ ಕಟ್ಟುವುದನ್ನು ಒಪ್ಪುವುದಿಲ್ಲ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...