Homeಅಂತರಾಷ್ಟ್ರೀಯಮೋದಿ ಮತ್ತು ಟ್ರಂಪ್ ಭೇಟಿ: ಭಾರತಕ್ಕೆ ಮುಂಬೈ ದಾಳಿಯ ಸಂಚುಕೋರ ರಾಣಾನ ಹಸ್ತಾಂತರಕ್ಕೆ ಅನುಮೋದನೆ

ಮೋದಿ ಮತ್ತು ಟ್ರಂಪ್ ಭೇಟಿ: ಭಾರತಕ್ಕೆ ಮುಂಬೈ ದಾಳಿಯ ಸಂಚುಕೋರ ರಾಣಾನ ಹಸ್ತಾಂತರಕ್ಕೆ ಅನುಮೋದನೆ

- Advertisement -
- Advertisement -

26/11ರ ಮುಂಬೈ ಭಯೋತ್ಪಾದಕ ದಾಳಿಯ ಅಪರಾಧಿ ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದನೆ ನೀಡಿದ್ದು, ಆತನು ಭಾರತದಲ್ಲಿ ನ್ಯಾಯ ಪ್ರಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

26/11ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದರು ಮತ್ತು ಅವನು ಭಾರತದಲ್ಲಿ ನ್ಯಾಯವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಶ್ವೇತಭವನದಲ್ಲಿ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು.

“2008ರ ಭೀಕರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಸಂಚುಕೋರರಲ್ಲಿ ಒಬ್ಬನಾದ ತಹವ್ವೂರ್ ರಾಣಾನನ್ನ ನಮ್ಮ ಆಡಳಿತವು ಇಂಡಿಯಾಕ್ಕೆ ಹಸ್ತಾಂತರಿಸುವ ಕುರಿತು ಅನುಮೋದನೆ ನೀಡಿದೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಅಲ್ಲಿ ಆತನು ನ್ಯಾಯವನ್ನು ಎದುರಿಸಬೇಕಾಗುತ್ತದೆ” ಎಂದು ಟ್ರಂಪ್ ಹೇಳಿದರು.

2008ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾಗಿ ಪ್ರಸ್ತುತ ಲಾಸ್ ಏಂಜಲೀಸ್ ಜೈಲಿನಲ್ಲಿ ಬಂಧಿಯಾಗಿರುವ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಒತ್ತಾಯಿಸುತ್ತಿದೆ. ಪಾಕಿಸ್ತಾನ ಮೂಲದ ಕೆನಡಾದ ಪ್ರಜೆಯಾಗಿರುವ ಈತ, ದಾಳಿಯ ಪ್ರಮುಖ ವ್ಯಕ್ತಿ “ದೌದ್ ಗಿಲಾನಿ” ಎಂದೂ ಕರೆಯಲ್ಪಡುವ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ಸಂಪರ್ಕ ಹೊಂದಿದ್ದಾನೆ. ದಾಳಿಯನ್ನು ನಡೆಸುವಲ್ಲಿ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯಿಬಾ (LeT)ಗೆ ಬೆಂಬಲ ನೀಡುವಲ್ಲಿ ಹೆಡ್ಲಿ ಮತ್ತು ಪಾಕಿಸ್ತಾನದಲ್ಲಿರುವ ಇತರರಿಗೆ ಸಹಾಯ ಮಾಡಿದ ಆರೋಪ ಅವನ ಮೇಲಿದೆ.

“ಪ್ರಪಂಚದಾದ್ಯಂತ ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸಲು ಭಾರತ ಮತ್ತು ಅಮೆರಿಕ ಹಿಂದೆಂದಿಗಿಂತಲೂ ಉತ್ತಮವಾಗಿ ಕಾರ್ಯನಿರ್ವಹಿಸಲಿವೆ” ಎಂದು ಅಮೆರಿಕದ ಅಧ್ಯಕ್ಷರು ಶ್ವೇತಭವನದ ಬ್ರೀಫಿಂಗ್‌ನಲ್ಲಿ ಘೋಷಿಸಿದರು.

ಭಾರತ ವಿರುದ್ಧ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ವಿಶೇಷವಾಗಿ ಖಲಿಸ್ತಾನಿ ಉಗ್ರಗಾಮಿಗಳನ್ನು ಅಮೆರಿಕದಲ್ಲಿ ಹಸ್ತಾಂತರಿಸುವ ಬಗ್ಗೆ ಇಂಡಿಯಾ ಟುಡೇಯ ಗೀತಾ ಮೋಹನ್ ಅವರ ಪ್ರಶ್ನೆಗೆ ಉತ್ತರಿಸಿದ ಅಮೆರಿಕ ಅಧ್ಯಕ್ಷರು, “ಇನ್ನೂ ಹೆಚ್ಚಿನದನ್ನು ಅನುಸರಿಸಬೇಕಾಗಿದೆ” ಎಂದು ಹೇಳಿದರು.

“ಭಾರತವು ಬೈಡೆನ್ ಆಡಳಿತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿತ್ತು ಎಂದು ನಾನು ಭಾವಿಸುವುದಿಲ್ಲ… ಭಾರತ ಮತ್ತು ಬೈಡೆನ್ ಆಡಳಿತದ ನಡುವೆ ಹೆಚ್ಚು ಸೂಕ್ತವಲ್ಲದ ಬಹಳಷ್ಟು ವಿಷಯಗಳು ನಡೆದವು. ನಾವು ತುಂಬಾ ಹಿಂಸಾತ್ಮಕ ವ್ಯಕ್ತಿಯನ್ನು (ತಹವ್ವೂರ್ ರಾಣಾ) ತಕ್ಷಣವೇ ಭಾರತಕ್ಕೆ ಹಿಂತಿರುಗಿಸುತ್ತಿದ್ದೇವೆ. ನಮಗೆ ಕೆಲವು ವಿನಂತಿಗಳಿರುವುದರಿಂದ ಇನ್ನೂ ಹೆಚ್ಚಿನವುಗಳಿವೆ. ಆದ್ದರಿಂದ ನಾವು ಅಪರಾಧದ ಕುರಿತು ಭಾರತದೊಂದಿಗೆ ಕೆಲಸ ಮಾಡುತ್ತೇವೆ ಮತ್ತು ಅದನ್ನು ಭಾರತಕ್ಕೆ ಒಳ್ಳೆಯದಾಗಿಸಲು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.

ಹಸ್ತಾಂತರಕ್ಕೆ ಅನುಮತಿ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಯವರು ಟ್ರಂಪ್‌ಗೆ ಧನ್ಯವಾದ ಅರ್ಪಿಸಿದರು ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವಲ್ಲಿ ಭಾರತದ ಸಹಕಾರದ ಭರವಸೆಯನ್ನು ನೀಡಿದರು.

“ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ನಾವು ಸಹಕರಿಸುತ್ತೇವೆ. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ. 26/11ರ ದಾಳಿಯ ಭಯೋತ್ಪಾದಕ ತಹಾವೂರ್ ರಾಣಾನನ್ನು ಹಸ್ತಾಂತರಿಸಲು ನಿರ್ಧರಿಸಿದ್ದಕ್ಕಾಗಿ ಅಧ್ಯಕ್ಷ ಟ್ರಂಪ್‌ಗೆ ಕೃತಜ್ಞತೆ ಸಲ್ಲಿಸುತ್ತೇವೆ. ನಮ್ಮ ನ್ಯಾಯಾಲಯಗಳು ಅವನನ್ನು ಕಟಕಟೆಗೆ ತರುತ್ತವೆ” ಎಂದು ಅವರು ಹೇಳಿದರು.

ಹಸ್ತಾಂತರದ ಸಮಯದ ಕುರಿತು ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು, ನವದೆಹಲಿಯು ಇದರ ಜಾರಿ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ – ಅವರ ಶರಣಾಗತಿ ಮತ್ತು ಭಾರತಕ್ಕೆ ಹಸ್ತಾಂತರದ ಕುರಿತು ಕೆಲವು ಅಂತಿಮ ಹಂತಗಳನ್ನು ಪೂರ್ಣಗೊಳಿಸಬೇಕಾಗಿದೆ. ಈ ಬಗ್ಗೆ ಎರಡೂ ಕಡೆಯವರು ಸಂಪರ್ಕದಲ್ಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಹಸ್ತಾಂತರದಲ್ಲಿ ವಿನಂತಿಗಳಿವೆ. ಆದರೆ ಯಾವುದು ಎಂದು ಹೆಸರಿಸುವುದರಿಂದ ವಿದೇಶಾಂಗ ಕಾರ್ಯದರ್ಶಿ ನುಣುಚಿಕೊಂಡರು.

ಏತನ್ಮಧ್ಯೆ, ಎರಡೂ ರಾಷ್ಟ್ರಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸಹಕಾರವನ್ನು ಬಲಪಡಿಸಲು ಒಪ್ಪಿಕೊಂಡವು ಮತ್ತು ವ್ಯಾಪಾರ, ಇಂಧನ, ರಕ್ಷಣೆ ಮತ್ತು ಇತರ ಕ್ಷೇತ್ರಗಳಲ್ಲಿ ಬಹು ಒಪ್ಪಂದಗಳಿಗೆ ಸಹಿ ಹಾಕಿದವು.

ದೆಹಲಿ | ಜಾಮಿಯಾ ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ, 14 ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...