Homeಮುಖಪುಟನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

ನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

- Advertisement -
- Advertisement -

ನೆನ್ನೆ (ಆಗಸ್ಟ್ 23ರಂದು) ಪ್ರಧಾನಿ ನರೇಂದ್ರ ಮೋದಿ ತಾವು ನವಿಲುಗಳೊಂದಿಗೆ ಅನ್ಯೋನ್ಯವಾಗಿರುವ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದರು. ಆಗಿನಿಂದಲೂ ಅದರ ಕುರಿತ ಪರ-ವಿರೋಧದ ಚರ್ಚೆಗಳು ಸಾಮಾಜಿಕ ಮಾದ್ಯಮಗಳಲ್ಲಿ ಜೋರಾಗಿವೆ.

ಮೋದಿ ತಮ್ಮ ಅನಿಸಿಕೆಯನ್ನು ಬರೆದು, ತಮ್ಮ ಟ್ವಿಟರ್ ಖಾತೆಯಿಂದಲೇ ನವಿಲುಗಳೊಂದಿಗೆ ವೀಡಿಯೋವೊಂದನ್ನು ಹಂಚಿಕೊಂಡಿದ್ದರು.

ಈ ಟ್ವೀಟ್ ಸುಮಾರು 21 ಲಕ್ಷ ವೀಕ್ಷಣೆ, 2 ಲಕ್ಷದಷ್ಟು ಲೈಕ್ಸ್ ಮತ್ತು 54 ಸಾವಿರ ರೀಟ್ವೀಟ್ ಗಳನ್ನು ಗಳಿಸಿದೆ.

ಇದಕ್ಕೆ ಪ್ರತಿಯಾಗಿ ಅದ್ವೈದ್ ಎನ್ನುವವರು ಆ ದಿನವೇ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಹಿಟ್ಲರ್‌ನ ಚಿತ್ರವೊಂದನ್ನು ಹಂಚಿಕೊಂಡರು. ಇದೇ ಚಿತ್ರವನ್ನು ನೂರಾರು ಜನ ಹಂಚಿಕೊಳ್ಳುವ ಮೂಲಕ ಹಿಟ್ಲರ್‌ಗೆ ಮೋದಿಯನ್ನು ಹೋಲಿಸಿದ್ದಾರೆ.

ಈ ಚಿತ್ರದಲ್ಲಿ ಸರ್ವಾಧಿಕಾರಿ ಹಿಟ್ಲರ್ ಜಿಂಕೆಮರಿಯೊಂದಕ್ಕೆ ಏನನ್ನೋ ತಿನಿಸುತ್ತಿದ್ದಾನೆ. ಇದರಿಂದ ಪ್ರಾಣಿಯೊಂದಿಗೆ ಆತನ ಅನ್ಯೋನ್ಯತೆ ಎದ್ದು ಕಾಣುತ್ತದೆ. ಆದರೆ ಇದನ್ನು ಮೋದಿಯವರ ವಿಡಿಯೋಗೆ ಹೋಲಿಸಿ ಹಲವರು ರೀಟ್ವೀಟ್ ಮಾಡಿದ್ದಾರೆ.

ಈ ವೀಡಿಯೋ ಕುರಿತು ಚಿಂತಕರಾದ ಶಿವಸುಂದರ್ ಅವರು ಕವಿತೆಯೊಂದನ್ನು ಬರೆದಿದ್ದಾರೆ. ಸಧ್ಯ ಫೇಸ್ ಬುಕ್ ನಲ್ಲಿ ಈ ಕವಿತೆ ಹರಿದಾಡುತ್ತಿದೆ.

ಮೋದಿಯವರು ಹಂಚಿಕೊಂಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಕೆಲವರು, ನವಿಲನ್ನು ಬಳಸಿಕೊಂಡಿರುವುದು ಕಾನೂನುಬಾಹಿರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಇಂಥಾ ಸಂದರ್ಭದಲ್ಲಿ ಈ ರೀತಿಯ ವೀಡಿಯೋ ಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರ ವಿಡಿಯೋಗಿಂತ ಈ ವಿಡಿಯೋ ಎಷ್ಟೋ ವಾಸಿ ಎಂದು ಪತ್ರಕರ್ತ ರವಿ ನಾಯರ್ ಟ್ವೀಟ್ ಮಾಡಿದ್ದಾರೆ.

ರೋಮ್‌ನ ಚಕ್ರವರ್ತಿಯನ್ನು ನೆನಪಿಸುತ್ತಿರುವ ನವಿಲು ಎಂಬುದಾಗಿ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್’ಡೌನ್ ಸಮಯದಲ್ಲಿ ನಿಗಿನಿಗಿ ಸುಡುವ ಡಾಂಬರು ರಸ್ತೆಗಳ ಮೇಲೆ ನೂರಾರು ಕಿಲೋಮೀಟರ್ ನಡೆದ ಬಡವರ ಬೊಬ್ಬೆಯೊಡೆದ ಅಂಗಾಲುಗಳ ಗಾಯವಿನ್ನೂ ಹಸಿಯಾಗಿದೆ. ನಿನ್ನ ಕಾಲ ಕೆಳಗೆ ಚೆಲ್ಲಿರುವ ಒಂದಷ್ಟು ಪೆಬಲ್ ಸ್ಟೋನ್’ಗಳನ್ನು ಕೈ ಸಾಲ ಕೊಡು ದೊರೆಯೇ. ಆದಾಗ ಸೋಪಿನಲ್ಲಿ ತೊಳೆದು ಮರಳಿಸುತ್ತೇನೆ ಎಂದು ಯುವ ಬರಹಗಾರ ದಯಾನಂದ್ ಟಿ.ಕೆ ಬರೆದಿದ್ದಾರೆ.

ನಮ್ಮಂತ ಸಾಮನ್ಯ ಪ್ರಜೆಗಳು ಕೂಡ ಮನೆಯಲ್ಲಿ ನವಿಲು ಸಾಕಬಹುದಾ? ಹೋಗಲಿ ನವಿಲಿಗೆ ಆಹಾರ ನೀಡಬಹುದಾ? ಇಲ್ಲ ಅದು ಕೇವಲ ನಟ ಭಯಂಕರರಿಗೆ ಮಾತ್ರ ಅವಕಾಶ ಇರೋದ? ಯಾರಾದ್ರೂ ಅರಣ್ಯ ಇಲಾಖೆ/ ಕಾನೂನುಗಳ ಅರಿವು ಇರೋರು ತಿಳಿಸಿ ಕೊಡ್ತೀರಾ? ಅವಕಾಶ ಇದ್ದರೆ ನಾನು ನಾಲ್ಕೈದು ಸಾಕಬೇಕು ಅನಿಸ್ತಿದೆ ಎಂದು ಪ್ರತಾಪ್ ಕಣಗಲ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...