Homeಮುಖಪುಟನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

ನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

- Advertisement -
- Advertisement -

ನೆನ್ನೆ (ಆಗಸ್ಟ್ 23ರಂದು) ಪ್ರಧಾನಿ ನರೇಂದ್ರ ಮೋದಿ ತಾವು ನವಿಲುಗಳೊಂದಿಗೆ ಅನ್ಯೋನ್ಯವಾಗಿರುವ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದರು. ಆಗಿನಿಂದಲೂ ಅದರ ಕುರಿತ ಪರ-ವಿರೋಧದ ಚರ್ಚೆಗಳು ಸಾಮಾಜಿಕ ಮಾದ್ಯಮಗಳಲ್ಲಿ ಜೋರಾಗಿವೆ.

ಮೋದಿ ತಮ್ಮ ಅನಿಸಿಕೆಯನ್ನು ಬರೆದು, ತಮ್ಮ ಟ್ವಿಟರ್ ಖಾತೆಯಿಂದಲೇ ನವಿಲುಗಳೊಂದಿಗೆ ವೀಡಿಯೋವೊಂದನ್ನು ಹಂಚಿಕೊಂಡಿದ್ದರು.

ಈ ಟ್ವೀಟ್ ಸುಮಾರು 21 ಲಕ್ಷ ವೀಕ್ಷಣೆ, 2 ಲಕ್ಷದಷ್ಟು ಲೈಕ್ಸ್ ಮತ್ತು 54 ಸಾವಿರ ರೀಟ್ವೀಟ್ ಗಳನ್ನು ಗಳಿಸಿದೆ.

ಇದಕ್ಕೆ ಪ್ರತಿಯಾಗಿ ಅದ್ವೈದ್ ಎನ್ನುವವರು ಆ ದಿನವೇ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಹಿಟ್ಲರ್‌ನ ಚಿತ್ರವೊಂದನ್ನು ಹಂಚಿಕೊಂಡರು. ಇದೇ ಚಿತ್ರವನ್ನು ನೂರಾರು ಜನ ಹಂಚಿಕೊಳ್ಳುವ ಮೂಲಕ ಹಿಟ್ಲರ್‌ಗೆ ಮೋದಿಯನ್ನು ಹೋಲಿಸಿದ್ದಾರೆ.

ಈ ಚಿತ್ರದಲ್ಲಿ ಸರ್ವಾಧಿಕಾರಿ ಹಿಟ್ಲರ್ ಜಿಂಕೆಮರಿಯೊಂದಕ್ಕೆ ಏನನ್ನೋ ತಿನಿಸುತ್ತಿದ್ದಾನೆ. ಇದರಿಂದ ಪ್ರಾಣಿಯೊಂದಿಗೆ ಆತನ ಅನ್ಯೋನ್ಯತೆ ಎದ್ದು ಕಾಣುತ್ತದೆ. ಆದರೆ ಇದನ್ನು ಮೋದಿಯವರ ವಿಡಿಯೋಗೆ ಹೋಲಿಸಿ ಹಲವರು ರೀಟ್ವೀಟ್ ಮಾಡಿದ್ದಾರೆ.

ಈ ವೀಡಿಯೋ ಕುರಿತು ಚಿಂತಕರಾದ ಶಿವಸುಂದರ್ ಅವರು ಕವಿತೆಯೊಂದನ್ನು ಬರೆದಿದ್ದಾರೆ. ಸಧ್ಯ ಫೇಸ್ ಬುಕ್ ನಲ್ಲಿ ಈ ಕವಿತೆ ಹರಿದಾಡುತ್ತಿದೆ.

ಮೋದಿಯವರು ಹಂಚಿಕೊಂಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಕೆಲವರು, ನವಿಲನ್ನು ಬಳಸಿಕೊಂಡಿರುವುದು ಕಾನೂನುಬಾಹಿರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಇಂಥಾ ಸಂದರ್ಭದಲ್ಲಿ ಈ ರೀತಿಯ ವೀಡಿಯೋ ಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರ ವಿಡಿಯೋಗಿಂತ ಈ ವಿಡಿಯೋ ಎಷ್ಟೋ ವಾಸಿ ಎಂದು ಪತ್ರಕರ್ತ ರವಿ ನಾಯರ್ ಟ್ವೀಟ್ ಮಾಡಿದ್ದಾರೆ.

ರೋಮ್‌ನ ಚಕ್ರವರ್ತಿಯನ್ನು ನೆನಪಿಸುತ್ತಿರುವ ನವಿಲು ಎಂಬುದಾಗಿ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್’ಡೌನ್ ಸಮಯದಲ್ಲಿ ನಿಗಿನಿಗಿ ಸುಡುವ ಡಾಂಬರು ರಸ್ತೆಗಳ ಮೇಲೆ ನೂರಾರು ಕಿಲೋಮೀಟರ್ ನಡೆದ ಬಡವರ ಬೊಬ್ಬೆಯೊಡೆದ ಅಂಗಾಲುಗಳ ಗಾಯವಿನ್ನೂ ಹಸಿಯಾಗಿದೆ. ನಿನ್ನ ಕಾಲ ಕೆಳಗೆ ಚೆಲ್ಲಿರುವ ಒಂದಷ್ಟು ಪೆಬಲ್ ಸ್ಟೋನ್’ಗಳನ್ನು ಕೈ ಸಾಲ ಕೊಡು ದೊರೆಯೇ. ಆದಾಗ ಸೋಪಿನಲ್ಲಿ ತೊಳೆದು ಮರಳಿಸುತ್ತೇನೆ ಎಂದು ಯುವ ಬರಹಗಾರ ದಯಾನಂದ್ ಟಿ.ಕೆ ಬರೆದಿದ್ದಾರೆ.

ನಮ್ಮಂತ ಸಾಮನ್ಯ ಪ್ರಜೆಗಳು ಕೂಡ ಮನೆಯಲ್ಲಿ ನವಿಲು ಸಾಕಬಹುದಾ? ಹೋಗಲಿ ನವಿಲಿಗೆ ಆಹಾರ ನೀಡಬಹುದಾ? ಇಲ್ಲ ಅದು ಕೇವಲ ನಟ ಭಯಂಕರರಿಗೆ ಮಾತ್ರ ಅವಕಾಶ ಇರೋದ? ಯಾರಾದ್ರೂ ಅರಣ್ಯ ಇಲಾಖೆ/ ಕಾನೂನುಗಳ ಅರಿವು ಇರೋರು ತಿಳಿಸಿ ಕೊಡ್ತೀರಾ? ಅವಕಾಶ ಇದ್ದರೆ ನಾನು ನಾಲ್ಕೈದು ಸಾಕಬೇಕು ಅನಿಸ್ತಿದೆ ಎಂದು ಪ್ರತಾಪ್ ಕಣಗಲ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...