Homeಮುಖಪುಟನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

ನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

- Advertisement -
- Advertisement -

ನೆನ್ನೆ (ಆಗಸ್ಟ್ 23ರಂದು) ಪ್ರಧಾನಿ ನರೇಂದ್ರ ಮೋದಿ ತಾವು ನವಿಲುಗಳೊಂದಿಗೆ ಅನ್ಯೋನ್ಯವಾಗಿರುವ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದರು. ಆಗಿನಿಂದಲೂ ಅದರ ಕುರಿತ ಪರ-ವಿರೋಧದ ಚರ್ಚೆಗಳು ಸಾಮಾಜಿಕ ಮಾದ್ಯಮಗಳಲ್ಲಿ ಜೋರಾಗಿವೆ.

ಮೋದಿ ತಮ್ಮ ಅನಿಸಿಕೆಯನ್ನು ಬರೆದು, ತಮ್ಮ ಟ್ವಿಟರ್ ಖಾತೆಯಿಂದಲೇ ನವಿಲುಗಳೊಂದಿಗೆ ವೀಡಿಯೋವೊಂದನ್ನು ಹಂಚಿಕೊಂಡಿದ್ದರು.

ಈ ಟ್ವೀಟ್ ಸುಮಾರು 21 ಲಕ್ಷ ವೀಕ್ಷಣೆ, 2 ಲಕ್ಷದಷ್ಟು ಲೈಕ್ಸ್ ಮತ್ತು 54 ಸಾವಿರ ರೀಟ್ವೀಟ್ ಗಳನ್ನು ಗಳಿಸಿದೆ.

ಇದಕ್ಕೆ ಪ್ರತಿಯಾಗಿ ಅದ್ವೈದ್ ಎನ್ನುವವರು ಆ ದಿನವೇ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಹಿಟ್ಲರ್‌ನ ಚಿತ್ರವೊಂದನ್ನು ಹಂಚಿಕೊಂಡರು. ಇದೇ ಚಿತ್ರವನ್ನು ನೂರಾರು ಜನ ಹಂಚಿಕೊಳ್ಳುವ ಮೂಲಕ ಹಿಟ್ಲರ್‌ಗೆ ಮೋದಿಯನ್ನು ಹೋಲಿಸಿದ್ದಾರೆ.

ಈ ಚಿತ್ರದಲ್ಲಿ ಸರ್ವಾಧಿಕಾರಿ ಹಿಟ್ಲರ್ ಜಿಂಕೆಮರಿಯೊಂದಕ್ಕೆ ಏನನ್ನೋ ತಿನಿಸುತ್ತಿದ್ದಾನೆ. ಇದರಿಂದ ಪ್ರಾಣಿಯೊಂದಿಗೆ ಆತನ ಅನ್ಯೋನ್ಯತೆ ಎದ್ದು ಕಾಣುತ್ತದೆ. ಆದರೆ ಇದನ್ನು ಮೋದಿಯವರ ವಿಡಿಯೋಗೆ ಹೋಲಿಸಿ ಹಲವರು ರೀಟ್ವೀಟ್ ಮಾಡಿದ್ದಾರೆ.

ಈ ವೀಡಿಯೋ ಕುರಿತು ಚಿಂತಕರಾದ ಶಿವಸುಂದರ್ ಅವರು ಕವಿತೆಯೊಂದನ್ನು ಬರೆದಿದ್ದಾರೆ. ಸಧ್ಯ ಫೇಸ್ ಬುಕ್ ನಲ್ಲಿ ಈ ಕವಿತೆ ಹರಿದಾಡುತ್ತಿದೆ.

ಮೋದಿಯವರು ಹಂಚಿಕೊಂಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಕೆಲವರು, ನವಿಲನ್ನು ಬಳಸಿಕೊಂಡಿರುವುದು ಕಾನೂನುಬಾಹಿರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಇಂಥಾ ಸಂದರ್ಭದಲ್ಲಿ ಈ ರೀತಿಯ ವೀಡಿಯೋ ಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರ ವಿಡಿಯೋಗಿಂತ ಈ ವಿಡಿಯೋ ಎಷ್ಟೋ ವಾಸಿ ಎಂದು ಪತ್ರಕರ್ತ ರವಿ ನಾಯರ್ ಟ್ವೀಟ್ ಮಾಡಿದ್ದಾರೆ.

ರೋಮ್‌ನ ಚಕ್ರವರ್ತಿಯನ್ನು ನೆನಪಿಸುತ್ತಿರುವ ನವಿಲು ಎಂಬುದಾಗಿ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್’ಡೌನ್ ಸಮಯದಲ್ಲಿ ನಿಗಿನಿಗಿ ಸುಡುವ ಡಾಂಬರು ರಸ್ತೆಗಳ ಮೇಲೆ ನೂರಾರು ಕಿಲೋಮೀಟರ್ ನಡೆದ ಬಡವರ ಬೊಬ್ಬೆಯೊಡೆದ ಅಂಗಾಲುಗಳ ಗಾಯವಿನ್ನೂ ಹಸಿಯಾಗಿದೆ. ನಿನ್ನ ಕಾಲ ಕೆಳಗೆ ಚೆಲ್ಲಿರುವ ಒಂದಷ್ಟು ಪೆಬಲ್ ಸ್ಟೋನ್’ಗಳನ್ನು ಕೈ ಸಾಲ ಕೊಡು ದೊರೆಯೇ. ಆದಾಗ ಸೋಪಿನಲ್ಲಿ ತೊಳೆದು ಮರಳಿಸುತ್ತೇನೆ ಎಂದು ಯುವ ಬರಹಗಾರ ದಯಾನಂದ್ ಟಿ.ಕೆ ಬರೆದಿದ್ದಾರೆ.

ನಮ್ಮಂತ ಸಾಮನ್ಯ ಪ್ರಜೆಗಳು ಕೂಡ ಮನೆಯಲ್ಲಿ ನವಿಲು ಸಾಕಬಹುದಾ? ಹೋಗಲಿ ನವಿಲಿಗೆ ಆಹಾರ ನೀಡಬಹುದಾ? ಇಲ್ಲ ಅದು ಕೇವಲ ನಟ ಭಯಂಕರರಿಗೆ ಮಾತ್ರ ಅವಕಾಶ ಇರೋದ? ಯಾರಾದ್ರೂ ಅರಣ್ಯ ಇಲಾಖೆ/ ಕಾನೂನುಗಳ ಅರಿವು ಇರೋರು ತಿಳಿಸಿ ಕೊಡ್ತೀರಾ? ಅವಕಾಶ ಇದ್ದರೆ ನಾನು ನಾಲ್ಕೈದು ಸಾಕಬೇಕು ಅನಿಸ್ತಿದೆ ಎಂದು ಪ್ರತಾಪ್ ಕಣಗಲ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...