Homeಮುಖಪುಟನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

ನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

- Advertisement -
- Advertisement -

ನೆನ್ನೆ (ಆಗಸ್ಟ್ 23ರಂದು) ಪ್ರಧಾನಿ ನರೇಂದ್ರ ಮೋದಿ ತಾವು ನವಿಲುಗಳೊಂದಿಗೆ ಅನ್ಯೋನ್ಯವಾಗಿರುವ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದರು. ಆಗಿನಿಂದಲೂ ಅದರ ಕುರಿತ ಪರ-ವಿರೋಧದ ಚರ್ಚೆಗಳು ಸಾಮಾಜಿಕ ಮಾದ್ಯಮಗಳಲ್ಲಿ ಜೋರಾಗಿವೆ.

ಮೋದಿ ತಮ್ಮ ಅನಿಸಿಕೆಯನ್ನು ಬರೆದು, ತಮ್ಮ ಟ್ವಿಟರ್ ಖಾತೆಯಿಂದಲೇ ನವಿಲುಗಳೊಂದಿಗೆ ವೀಡಿಯೋವೊಂದನ್ನು ಹಂಚಿಕೊಂಡಿದ್ದರು.

ಈ ಟ್ವೀಟ್ ಸುಮಾರು 21 ಲಕ್ಷ ವೀಕ್ಷಣೆ, 2 ಲಕ್ಷದಷ್ಟು ಲೈಕ್ಸ್ ಮತ್ತು 54 ಸಾವಿರ ರೀಟ್ವೀಟ್ ಗಳನ್ನು ಗಳಿಸಿದೆ.

ಇದಕ್ಕೆ ಪ್ರತಿಯಾಗಿ ಅದ್ವೈದ್ ಎನ್ನುವವರು ಆ ದಿನವೇ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಹಿಟ್ಲರ್‌ನ ಚಿತ್ರವೊಂದನ್ನು ಹಂಚಿಕೊಂಡರು. ಇದೇ ಚಿತ್ರವನ್ನು ನೂರಾರು ಜನ ಹಂಚಿಕೊಳ್ಳುವ ಮೂಲಕ ಹಿಟ್ಲರ್‌ಗೆ ಮೋದಿಯನ್ನು ಹೋಲಿಸಿದ್ದಾರೆ.

ಈ ಚಿತ್ರದಲ್ಲಿ ಸರ್ವಾಧಿಕಾರಿ ಹಿಟ್ಲರ್ ಜಿಂಕೆಮರಿಯೊಂದಕ್ಕೆ ಏನನ್ನೋ ತಿನಿಸುತ್ತಿದ್ದಾನೆ. ಇದರಿಂದ ಪ್ರಾಣಿಯೊಂದಿಗೆ ಆತನ ಅನ್ಯೋನ್ಯತೆ ಎದ್ದು ಕಾಣುತ್ತದೆ. ಆದರೆ ಇದನ್ನು ಮೋದಿಯವರ ವಿಡಿಯೋಗೆ ಹೋಲಿಸಿ ಹಲವರು ರೀಟ್ವೀಟ್ ಮಾಡಿದ್ದಾರೆ.

ಈ ವೀಡಿಯೋ ಕುರಿತು ಚಿಂತಕರಾದ ಶಿವಸುಂದರ್ ಅವರು ಕವಿತೆಯೊಂದನ್ನು ಬರೆದಿದ್ದಾರೆ. ಸಧ್ಯ ಫೇಸ್ ಬುಕ್ ನಲ್ಲಿ ಈ ಕವಿತೆ ಹರಿದಾಡುತ್ತಿದೆ.

ಮೋದಿಯವರು ಹಂಚಿಕೊಂಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಕೆಲವರು, ನವಿಲನ್ನು ಬಳಸಿಕೊಂಡಿರುವುದು ಕಾನೂನುಬಾಹಿರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಇಂಥಾ ಸಂದರ್ಭದಲ್ಲಿ ಈ ರೀತಿಯ ವೀಡಿಯೋ ಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರ ವಿಡಿಯೋಗಿಂತ ಈ ವಿಡಿಯೋ ಎಷ್ಟೋ ವಾಸಿ ಎಂದು ಪತ್ರಕರ್ತ ರವಿ ನಾಯರ್ ಟ್ವೀಟ್ ಮಾಡಿದ್ದಾರೆ.

ರೋಮ್‌ನ ಚಕ್ರವರ್ತಿಯನ್ನು ನೆನಪಿಸುತ್ತಿರುವ ನವಿಲು ಎಂಬುದಾಗಿ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್’ಡೌನ್ ಸಮಯದಲ್ಲಿ ನಿಗಿನಿಗಿ ಸುಡುವ ಡಾಂಬರು ರಸ್ತೆಗಳ ಮೇಲೆ ನೂರಾರು ಕಿಲೋಮೀಟರ್ ನಡೆದ ಬಡವರ ಬೊಬ್ಬೆಯೊಡೆದ ಅಂಗಾಲುಗಳ ಗಾಯವಿನ್ನೂ ಹಸಿಯಾಗಿದೆ. ನಿನ್ನ ಕಾಲ ಕೆಳಗೆ ಚೆಲ್ಲಿರುವ ಒಂದಷ್ಟು ಪೆಬಲ್ ಸ್ಟೋನ್’ಗಳನ್ನು ಕೈ ಸಾಲ ಕೊಡು ದೊರೆಯೇ. ಆದಾಗ ಸೋಪಿನಲ್ಲಿ ತೊಳೆದು ಮರಳಿಸುತ್ತೇನೆ ಎಂದು ಯುವ ಬರಹಗಾರ ದಯಾನಂದ್ ಟಿ.ಕೆ ಬರೆದಿದ್ದಾರೆ.

ನಮ್ಮಂತ ಸಾಮನ್ಯ ಪ್ರಜೆಗಳು ಕೂಡ ಮನೆಯಲ್ಲಿ ನವಿಲು ಸಾಕಬಹುದಾ? ಹೋಗಲಿ ನವಿಲಿಗೆ ಆಹಾರ ನೀಡಬಹುದಾ? ಇಲ್ಲ ಅದು ಕೇವಲ ನಟ ಭಯಂಕರರಿಗೆ ಮಾತ್ರ ಅವಕಾಶ ಇರೋದ? ಯಾರಾದ್ರೂ ಅರಣ್ಯ ಇಲಾಖೆ/ ಕಾನೂನುಗಳ ಅರಿವು ಇರೋರು ತಿಳಿಸಿ ಕೊಡ್ತೀರಾ? ಅವಕಾಶ ಇದ್ದರೆ ನಾನು ನಾಲ್ಕೈದು ಸಾಕಬೇಕು ಅನಿಸ್ತಿದೆ ಎಂದು ಪ್ರತಾಪ್ ಕಣಗಲ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...