Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....