Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...