Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...