Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...