Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...