Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...