Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...