Homeಅಂತರಾಷ್ಟ್ರೀಯಮೋದಿ ಯುಎಸ್‌ ಭೇಟಿ - ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’

ಮೋದಿ ಯುಎಸ್‌ ಭೇಟಿ – ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’

- Advertisement -
- Advertisement -

ಪ್ರಧಾನಿ ಮೋದಿ ಅವರು ಮೂರು ದಿನದ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಶ್ವೇತಭವನದ ಓವಲ್ ಕಚೇರಿಯಲ್ಲಿ 20 ನಿಮಿಷಗಳ ಕಾಲ ಶುಕ್ರವಾರದಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಯಲ್ಲಿ ಉಭಯ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಬಗ್ಗೆ ನಾಯಕರಿಬ್ಬರು ಮಾತನಾಡಿದ್ದಾರೆ. ಆದರೆ ವಿಶೇಷವೇನೆಂದರೆ, ಇಬ್ಬರು ನಾಯಕರು ಪರ್ತಕರ್ತರಿಂದ ಯಾವುದೆ ಪ್ರಶ್ನೆಗಳನ್ನು ಎದುರುಗೊಳ್ಳಲಿಲ್ಲ ಹಾಗೂ ಇದನ್ನು ಮೊದಲೆ ತೀರ್ಮಾನಿಸಲಾಗಿತ್ತು ಎಂದು ದಿವೈರ್‌ ವರದಿ ಮಾಡಿದೆ.

ದಿ ವೈರ್‌ ತನ್ನ ವರದಿಯಲ್ಲಿ, “ಮಾಧ್ಯಮಗಳ ಮುಂದೆ ಶ್ವೇತಭವನದ ಓವಲ್ ಕಚೇರಿಯಲ್ಲಿ 20 ನಿಮಿಷಗಳ ಕಾಲ ಜಂಟಿ ಮಾತುಕತೆಯಿತ್ತು. ಮಾತುಕತೆಯ ಕೊನೆಯಲ್ಲಿ ಯಾವುದೇ ನಾಯಕರು ಯಾವುದೇ ಪ್ರಶ್ನೆಗಳನ್ನು ತೆಗೆದುಕೊಳ್ಳಲಿಲ್ಲ, ಇದನ್ನು ಮೊದಲೆ ತೀರ್ಮಾನಿಸಲಾಗಿತ್ತು” ಎಂದು ಹೇಳಿದೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

“ಪ್ರಧಾನಿ ಮೋದಿ ಅವರು, 2015 ರಲ್ಲಿ ಲಂಡನ್‌ನಲ್ಲಿ ಯುಕೆ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ಭೇಟಿಯಾದಾಗ ಪತ್ರಕರ್ತರು ಪ್ರಶ್ನಿಸಿದ್ದರು. ಅದರ ನಂತರ ಮೋದಿ ಯಾವುದೆ ಪತ್ರಿಕಾಗೋಷ್ಠಿಗೆ ಒಪ್ಪಿಕೊಂಡಿಲ್ಲ” ಎಂದು ದಿ ವೈರ್‌ ಹೇಳಿದೆ.

ಈ ಮಾತುಕತೆಗೂ ಮೊದಲು ಜೋ ಬಿಡೆನ್ ಅವರು, ಭಾರತೀಯ ಮಾಧ್ಯಮಗಳು ಅಮೆರಿಕನ್‌‌ ಪತ್ರಿಕೆಗಳಿಗಿಂತ ಉತ್ತಮ ನಡವಳಿಕೆ ಹೊಂದಿದೆ ಎಂದು ಹೇಳಿದ್ದಾರೆ.

ಮಾತುಕತೆಗೆ ಶುರು ಮಾಡುವುದಕ್ಕಿಂತ ಮುಂಚೆಯೆ ಶುಭಾಶಯ ವಿನಿಮಯ ಮಾಡಿಕೊಂಡ ಬಿಡನ್, “ಭಾರತೀಯ ಮಾಧ್ಯಮಗಳು ಅಮೆರಿಕನ್‌‌ ಪತ್ರಿಕೆಗಳಿಗಿಂತ ಉತ್ತಮವಾಗಿ ನಡೆದುಕೊಳ್ಳುತ್ತವೆ. ನಿಮ್ಮ ಅನುಮತಿಯೊಂದಿಗೆ ಹೇಳುವುದಾದರೆ… ನೀವು ಅವರಿಗೆ(ಮಾಧ್ಯಮ) ಉತ್ತರಿಸುವ ಅಗತ್ಯವೆ ಇರುವುದಿಲ್ಲ, ಯಾಕೆಂದರೆ ಅವರು ನಿಮಗೆ ಪ್ರಶ್ನೆಯೆ ಕೇಳುವುದಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...