Homeಮುಖಪುಟಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ...

ಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ…

- Advertisement -
- Advertisement -

ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್.ಟಿ.ಐ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಅದಕ್ಕೆ ಬಹುಮತವೂ ಲಭಿಸಿದೆ. ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಈ ಕುರಿತು ಪ್ರಮುಖರು ಏನು ಹೇಳಿದ್ದಾರೆ ನೊಡೋಣ ಬನ್ನಿ.

ಅವರು ತಮ್ಮ ವಿದೇಶ ಪ್ರವಾಸಗಳಲ್ಲಿ ತಮ್ಮ ಕ್ರೋನಿ ಸ್ನೇಹಿತರಿಗೆ ಮಾಡಿಕೊಟ್ಟ ವ್ಯಾಪಾರದ ಒಪ್ಪಂದಗಳ ಮಾಹಿತಿಯನ್ನು ಮರೆಮಾಚುತ್ತಾರೆ. ಯಾವ ಸಾರ್ವಜನಿಕ ವಲಯದ ಸಂಸ್ಥೆಗಳು ಹಿಂಬಾಗಿಲಿನಿಂದ ಗಣಿಗಾರಿಕೆ ಒಪ್ಪಂದಗಳನ್ನು ಯಾವ ಮಿತ್ರರಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಅವರು ಮರೆಮಾಚುತ್ತಾರೆ. ಅವರು ರಫೇಲ್ ಒಪ್ಪಂದದ ಮಾಹಿತಿಯನ್ನು, ವಿಶೇಷವಾಗಿ ಆಫ್‌ಸೆಟ್ ಒಪ್ಪಂದಗಳನ್ನು ಅದಾನಿಗೆ ಕೊಡುವುದನ್ನು ಮರೆಮಾಚುತ್ತಾರೆ. ಹಾಗಾಗಿ ಅವರು ಆರ್‌ಟಿಐಯನ್ನು ಕೊಲ್ಲಲು ಪ್ರಯತ್ನಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ – ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟಿನ ಹಿರಿಯ ವಕೀಲರು.

ಮಾಹಿತಿ ಹಕ್ಕು ಕಾಯ್ದೆಯನ್ನು ಮಟ್ಟಹಾಕಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಯತ್ನ ಬಹಳ ಗಂಭೀರ ವಿಷಯವಾಗಿದೆ. ಇದು ಯುಪಿಎ ಅವಧಿಯಲ್ಲಿ ತಂದ ಪ್ರಮುಖ ಶಾಸನಗಳಲ್ಲಿ ಒಂದಾಗಿದೆ. ಇದು ನಮ್ಮ ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಹಕಾರಿಯಾಗಿದೆ. ಕಳೆದ ಒಂದು ದಶಕದಲ್ಲಿ ಸುಮಾರು 60 ಲಕ್ಷ ಜನರು ಇದರ ಲಾಭ ಪಡೆದಿದ್ದಾರೆ. – ಅಶೋಕ್ ಗೆಹ್ಲೋಟ್, ರಾಜಸ್ಥಾನದ ಮುಖ್ಯಮಂತ್ರಿ.

ಆರ್‌ಟಿಐ ಕಾಯ್ದೆಯು ಅಪರಿಮಿತ ಭ್ರಷ್ಟಾಚಾರ ಮತ್ತು ದುರಾಡಳಿತದ ಅಧಿಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂಬುದಕ್ಕೆ 80 ಕ್ಕೂ ಹೆಚ್ಚು ಆರ್‌ಟಿಐ ಕಾರ್ಯಕರ್ತರ ಹತ್ಯೆಯೇ ಸಾಕ್ಷಿಯಾಗಿದೆ! ಪ್ರಸ್ತಾವಿತ ತಿದ್ದುಪಡಿಗಳು ಮಾಹಿತಿ ಆಯೋಗಗಳ ಸ್ವಾತಂತ್ರ್ಯವನ್ನು ತೀವ್ರವಾಗಿ ದುರ್ಬಲಗೊಳಿಸುತ್ತವೆ. ಹಾಗಾಗಿ ಅದನ್ನು ತೀವ್ರವಾಗಿ ವಿರೋಧಿಸಬೇಕು – ಅತಿಶಿ ಮರ್ಲೀನಾ, ಆಮ್ ಆದ್ಮಿ ಪಕ್ಷ ದೆಹಲಿ.

ಬಹಳಷ್ಟು ಮೋದಿ ಅಭಿಮಾನಿಗಳು ಈಗ ಎಚ್ಚರವಾಗಿ ಕೇಂದ್ರ ಸರ್ಕಾರದ ಆರ್.ಟಿ.ಐ ಕಾಯ್ದೆಗೆ ತಂದ ತಿದ್ದುಪಡಿಗಳನ್ನು ವಿರೋಧಿಸುತ್ತಿದ್ದಾರೆ. ಕಳೆದು ಐದು ವರ್ಷಗಳಲ್ಲಿ ಈ ಸರ್ಕಾರವು ಹೇಗೆ ಸ್ವತಂತ್ರ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂಬುದರ ಬಗ್ಗೆ ನಾನು ಸೇರಿದಂತೆ ನಮ್ಮ ಥರ ಯೋಚಿಸುವವರು ದನಿ ಎತ್ತಿದೆವು. ಆಗ ಈ ಮೋದಿ ಅಭಿಮಾನಿಗಳು ನಮ್ಮನ್ನು ಟ್ರೋಲ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸಮಯ ಮೀರಿ ಹೋಗಿದೆ. ವಿರೋಧವು ಮುಗಿದಿದೆ – ಧೃವ್ ರಾಠೀ, ಖ್ಯಾತ ಯೂಟ್ಯೂಬರ್, ಯುವ ಚಿಂತಕ.

ಮೋದಿ ಲೋಕಪಾಲ್ ರನ್ನು ಕೊಂದರು.
ಮೋದಿ ವಿಶಲ್ ಬ್ಲೋವರ್ಸ್ ಕಾಯ್ದೆಯನ್ನು ಕೊಂದರು
ಮೋದಿ ಈಗ ಆರ್‌ಟಿಐ ಕಾಯ್ದೆಯನ್ನು ಸಹ ಕೊಂದಿದ್ದಾರೆ

ಭಾರತದಲ್ಲಿ ಭ್ರಷ್ಟಾಚಾರ ಮತ್ತು ಕ್ರೋನಿ ಬಂಡವಾಳಶಾಹಿಗೆ ಮೋದಿ ಅತಿದೊಡ್ಡ ಸಹಾಯಕರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಸಂದೇಹವಿದೆಯೇ? – ಶ್ರೀವತ್ಸ, ಸಾಮಾಜಿಕ ಕಾರ್ಯಕರ್ತ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...