Homeಮುಖಪುಟಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ...

ಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ…

- Advertisement -
- Advertisement -

ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್.ಟಿ.ಐ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಅದಕ್ಕೆ ಬಹುಮತವೂ ಲಭಿಸಿದೆ. ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಈ ಕುರಿತು ಪ್ರಮುಖರು ಏನು ಹೇಳಿದ್ದಾರೆ ನೊಡೋಣ ಬನ್ನಿ.

ಅವರು ತಮ್ಮ ವಿದೇಶ ಪ್ರವಾಸಗಳಲ್ಲಿ ತಮ್ಮ ಕ್ರೋನಿ ಸ್ನೇಹಿತರಿಗೆ ಮಾಡಿಕೊಟ್ಟ ವ್ಯಾಪಾರದ ಒಪ್ಪಂದಗಳ ಮಾಹಿತಿಯನ್ನು ಮರೆಮಾಚುತ್ತಾರೆ. ಯಾವ ಸಾರ್ವಜನಿಕ ವಲಯದ ಸಂಸ್ಥೆಗಳು ಹಿಂಬಾಗಿಲಿನಿಂದ ಗಣಿಗಾರಿಕೆ ಒಪ್ಪಂದಗಳನ್ನು ಯಾವ ಮಿತ್ರರಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಅವರು ಮರೆಮಾಚುತ್ತಾರೆ. ಅವರು ರಫೇಲ್ ಒಪ್ಪಂದದ ಮಾಹಿತಿಯನ್ನು, ವಿಶೇಷವಾಗಿ ಆಫ್‌ಸೆಟ್ ಒಪ್ಪಂದಗಳನ್ನು ಅದಾನಿಗೆ ಕೊಡುವುದನ್ನು ಮರೆಮಾಚುತ್ತಾರೆ. ಹಾಗಾಗಿ ಅವರು ಆರ್‌ಟಿಐಯನ್ನು ಕೊಲ್ಲಲು ಪ್ರಯತ್ನಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ – ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟಿನ ಹಿರಿಯ ವಕೀಲರು.

ಮಾಹಿತಿ ಹಕ್ಕು ಕಾಯ್ದೆಯನ್ನು ಮಟ್ಟಹಾಕಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಯತ್ನ ಬಹಳ ಗಂಭೀರ ವಿಷಯವಾಗಿದೆ. ಇದು ಯುಪಿಎ ಅವಧಿಯಲ್ಲಿ ತಂದ ಪ್ರಮುಖ ಶಾಸನಗಳಲ್ಲಿ ಒಂದಾಗಿದೆ. ಇದು ನಮ್ಮ ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಹಕಾರಿಯಾಗಿದೆ. ಕಳೆದ ಒಂದು ದಶಕದಲ್ಲಿ ಸುಮಾರು 60 ಲಕ್ಷ ಜನರು ಇದರ ಲಾಭ ಪಡೆದಿದ್ದಾರೆ. – ಅಶೋಕ್ ಗೆಹ್ಲೋಟ್, ರಾಜಸ್ಥಾನದ ಮುಖ್ಯಮಂತ್ರಿ.

ಆರ್‌ಟಿಐ ಕಾಯ್ದೆಯು ಅಪರಿಮಿತ ಭ್ರಷ್ಟಾಚಾರ ಮತ್ತು ದುರಾಡಳಿತದ ಅಧಿಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂಬುದಕ್ಕೆ 80 ಕ್ಕೂ ಹೆಚ್ಚು ಆರ್‌ಟಿಐ ಕಾರ್ಯಕರ್ತರ ಹತ್ಯೆಯೇ ಸಾಕ್ಷಿಯಾಗಿದೆ! ಪ್ರಸ್ತಾವಿತ ತಿದ್ದುಪಡಿಗಳು ಮಾಹಿತಿ ಆಯೋಗಗಳ ಸ್ವಾತಂತ್ರ್ಯವನ್ನು ತೀವ್ರವಾಗಿ ದುರ್ಬಲಗೊಳಿಸುತ್ತವೆ. ಹಾಗಾಗಿ ಅದನ್ನು ತೀವ್ರವಾಗಿ ವಿರೋಧಿಸಬೇಕು – ಅತಿಶಿ ಮರ್ಲೀನಾ, ಆಮ್ ಆದ್ಮಿ ಪಕ್ಷ ದೆಹಲಿ.

ಬಹಳಷ್ಟು ಮೋದಿ ಅಭಿಮಾನಿಗಳು ಈಗ ಎಚ್ಚರವಾಗಿ ಕೇಂದ್ರ ಸರ್ಕಾರದ ಆರ್.ಟಿ.ಐ ಕಾಯ್ದೆಗೆ ತಂದ ತಿದ್ದುಪಡಿಗಳನ್ನು ವಿರೋಧಿಸುತ್ತಿದ್ದಾರೆ. ಕಳೆದು ಐದು ವರ್ಷಗಳಲ್ಲಿ ಈ ಸರ್ಕಾರವು ಹೇಗೆ ಸ್ವತಂತ್ರ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂಬುದರ ಬಗ್ಗೆ ನಾನು ಸೇರಿದಂತೆ ನಮ್ಮ ಥರ ಯೋಚಿಸುವವರು ದನಿ ಎತ್ತಿದೆವು. ಆಗ ಈ ಮೋದಿ ಅಭಿಮಾನಿಗಳು ನಮ್ಮನ್ನು ಟ್ರೋಲ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸಮಯ ಮೀರಿ ಹೋಗಿದೆ. ವಿರೋಧವು ಮುಗಿದಿದೆ – ಧೃವ್ ರಾಠೀ, ಖ್ಯಾತ ಯೂಟ್ಯೂಬರ್, ಯುವ ಚಿಂತಕ.

ಮೋದಿ ಲೋಕಪಾಲ್ ರನ್ನು ಕೊಂದರು.
ಮೋದಿ ವಿಶಲ್ ಬ್ಲೋವರ್ಸ್ ಕಾಯ್ದೆಯನ್ನು ಕೊಂದರು
ಮೋದಿ ಈಗ ಆರ್‌ಟಿಐ ಕಾಯ್ದೆಯನ್ನು ಸಹ ಕೊಂದಿದ್ದಾರೆ

ಭಾರತದಲ್ಲಿ ಭ್ರಷ್ಟಾಚಾರ ಮತ್ತು ಕ್ರೋನಿ ಬಂಡವಾಳಶಾಹಿಗೆ ಮೋದಿ ಅತಿದೊಡ್ಡ ಸಹಾಯಕರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಸಂದೇಹವಿದೆಯೇ? – ಶ್ರೀವತ್ಸ, ಸಾಮಾಜಿಕ ಕಾರ್ಯಕರ್ತ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...