Homeಮುಖಪುಟಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ...

ಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ…

- Advertisement -
- Advertisement -

ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್.ಟಿ.ಐ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಅದಕ್ಕೆ ಬಹುಮತವೂ ಲಭಿಸಿದೆ. ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಈ ಕುರಿತು ಪ್ರಮುಖರು ಏನು ಹೇಳಿದ್ದಾರೆ ನೊಡೋಣ ಬನ್ನಿ.

ಅವರು ತಮ್ಮ ವಿದೇಶ ಪ್ರವಾಸಗಳಲ್ಲಿ ತಮ್ಮ ಕ್ರೋನಿ ಸ್ನೇಹಿತರಿಗೆ ಮಾಡಿಕೊಟ್ಟ ವ್ಯಾಪಾರದ ಒಪ್ಪಂದಗಳ ಮಾಹಿತಿಯನ್ನು ಮರೆಮಾಚುತ್ತಾರೆ. ಯಾವ ಸಾರ್ವಜನಿಕ ವಲಯದ ಸಂಸ್ಥೆಗಳು ಹಿಂಬಾಗಿಲಿನಿಂದ ಗಣಿಗಾರಿಕೆ ಒಪ್ಪಂದಗಳನ್ನು ಯಾವ ಮಿತ್ರರಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಅವರು ಮರೆಮಾಚುತ್ತಾರೆ. ಅವರು ರಫೇಲ್ ಒಪ್ಪಂದದ ಮಾಹಿತಿಯನ್ನು, ವಿಶೇಷವಾಗಿ ಆಫ್‌ಸೆಟ್ ಒಪ್ಪಂದಗಳನ್ನು ಅದಾನಿಗೆ ಕೊಡುವುದನ್ನು ಮರೆಮಾಚುತ್ತಾರೆ. ಹಾಗಾಗಿ ಅವರು ಆರ್‌ಟಿಐಯನ್ನು ಕೊಲ್ಲಲು ಪ್ರಯತ್ನಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ – ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟಿನ ಹಿರಿಯ ವಕೀಲರು.

ಮಾಹಿತಿ ಹಕ್ಕು ಕಾಯ್ದೆಯನ್ನು ಮಟ್ಟಹಾಕಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಯತ್ನ ಬಹಳ ಗಂಭೀರ ವಿಷಯವಾಗಿದೆ. ಇದು ಯುಪಿಎ ಅವಧಿಯಲ್ಲಿ ತಂದ ಪ್ರಮುಖ ಶಾಸನಗಳಲ್ಲಿ ಒಂದಾಗಿದೆ. ಇದು ನಮ್ಮ ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಹಕಾರಿಯಾಗಿದೆ. ಕಳೆದ ಒಂದು ದಶಕದಲ್ಲಿ ಸುಮಾರು 60 ಲಕ್ಷ ಜನರು ಇದರ ಲಾಭ ಪಡೆದಿದ್ದಾರೆ. – ಅಶೋಕ್ ಗೆಹ್ಲೋಟ್, ರಾಜಸ್ಥಾನದ ಮುಖ್ಯಮಂತ್ರಿ.

ಆರ್‌ಟಿಐ ಕಾಯ್ದೆಯು ಅಪರಿಮಿತ ಭ್ರಷ್ಟಾಚಾರ ಮತ್ತು ದುರಾಡಳಿತದ ಅಧಿಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂಬುದಕ್ಕೆ 80 ಕ್ಕೂ ಹೆಚ್ಚು ಆರ್‌ಟಿಐ ಕಾರ್ಯಕರ್ತರ ಹತ್ಯೆಯೇ ಸಾಕ್ಷಿಯಾಗಿದೆ! ಪ್ರಸ್ತಾವಿತ ತಿದ್ದುಪಡಿಗಳು ಮಾಹಿತಿ ಆಯೋಗಗಳ ಸ್ವಾತಂತ್ರ್ಯವನ್ನು ತೀವ್ರವಾಗಿ ದುರ್ಬಲಗೊಳಿಸುತ್ತವೆ. ಹಾಗಾಗಿ ಅದನ್ನು ತೀವ್ರವಾಗಿ ವಿರೋಧಿಸಬೇಕು – ಅತಿಶಿ ಮರ್ಲೀನಾ, ಆಮ್ ಆದ್ಮಿ ಪಕ್ಷ ದೆಹಲಿ.

ಬಹಳಷ್ಟು ಮೋದಿ ಅಭಿಮಾನಿಗಳು ಈಗ ಎಚ್ಚರವಾಗಿ ಕೇಂದ್ರ ಸರ್ಕಾರದ ಆರ್.ಟಿ.ಐ ಕಾಯ್ದೆಗೆ ತಂದ ತಿದ್ದುಪಡಿಗಳನ್ನು ವಿರೋಧಿಸುತ್ತಿದ್ದಾರೆ. ಕಳೆದು ಐದು ವರ್ಷಗಳಲ್ಲಿ ಈ ಸರ್ಕಾರವು ಹೇಗೆ ಸ್ವತಂತ್ರ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂಬುದರ ಬಗ್ಗೆ ನಾನು ಸೇರಿದಂತೆ ನಮ್ಮ ಥರ ಯೋಚಿಸುವವರು ದನಿ ಎತ್ತಿದೆವು. ಆಗ ಈ ಮೋದಿ ಅಭಿಮಾನಿಗಳು ನಮ್ಮನ್ನು ಟ್ರೋಲ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸಮಯ ಮೀರಿ ಹೋಗಿದೆ. ವಿರೋಧವು ಮುಗಿದಿದೆ – ಧೃವ್ ರಾಠೀ, ಖ್ಯಾತ ಯೂಟ್ಯೂಬರ್, ಯುವ ಚಿಂತಕ.

ಮೋದಿ ಲೋಕಪಾಲ್ ರನ್ನು ಕೊಂದರು.
ಮೋದಿ ವಿಶಲ್ ಬ್ಲೋವರ್ಸ್ ಕಾಯ್ದೆಯನ್ನು ಕೊಂದರು
ಮೋದಿ ಈಗ ಆರ್‌ಟಿಐ ಕಾಯ್ದೆಯನ್ನು ಸಹ ಕೊಂದಿದ್ದಾರೆ

ಭಾರತದಲ್ಲಿ ಭ್ರಷ್ಟಾಚಾರ ಮತ್ತು ಕ್ರೋನಿ ಬಂಡವಾಳಶಾಹಿಗೆ ಮೋದಿ ಅತಿದೊಡ್ಡ ಸಹಾಯಕರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಸಂದೇಹವಿದೆಯೇ? – ಶ್ರೀವತ್ಸ, ಸಾಮಾಜಿಕ ಕಾರ್ಯಕರ್ತ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...