Homeಮುಖಪುಟಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ...

ಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ…

- Advertisement -
- Advertisement -

ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್.ಟಿ.ಐ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಅದಕ್ಕೆ ಬಹುಮತವೂ ಲಭಿಸಿದೆ. ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಈ ಕುರಿತು ಪ್ರಮುಖರು ಏನು ಹೇಳಿದ್ದಾರೆ ನೊಡೋಣ ಬನ್ನಿ.

ಅವರು ತಮ್ಮ ವಿದೇಶ ಪ್ರವಾಸಗಳಲ್ಲಿ ತಮ್ಮ ಕ್ರೋನಿ ಸ್ನೇಹಿತರಿಗೆ ಮಾಡಿಕೊಟ್ಟ ವ್ಯಾಪಾರದ ಒಪ್ಪಂದಗಳ ಮಾಹಿತಿಯನ್ನು ಮರೆಮಾಚುತ್ತಾರೆ. ಯಾವ ಸಾರ್ವಜನಿಕ ವಲಯದ ಸಂಸ್ಥೆಗಳು ಹಿಂಬಾಗಿಲಿನಿಂದ ಗಣಿಗಾರಿಕೆ ಒಪ್ಪಂದಗಳನ್ನು ಯಾವ ಮಿತ್ರರಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಅವರು ಮರೆಮಾಚುತ್ತಾರೆ. ಅವರು ರಫೇಲ್ ಒಪ್ಪಂದದ ಮಾಹಿತಿಯನ್ನು, ವಿಶೇಷವಾಗಿ ಆಫ್‌ಸೆಟ್ ಒಪ್ಪಂದಗಳನ್ನು ಅದಾನಿಗೆ ಕೊಡುವುದನ್ನು ಮರೆಮಾಚುತ್ತಾರೆ. ಹಾಗಾಗಿ ಅವರು ಆರ್‌ಟಿಐಯನ್ನು ಕೊಲ್ಲಲು ಪ್ರಯತ್ನಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ – ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟಿನ ಹಿರಿಯ ವಕೀಲರು.

ಮಾಹಿತಿ ಹಕ್ಕು ಕಾಯ್ದೆಯನ್ನು ಮಟ್ಟಹಾಕಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಯತ್ನ ಬಹಳ ಗಂಭೀರ ವಿಷಯವಾಗಿದೆ. ಇದು ಯುಪಿಎ ಅವಧಿಯಲ್ಲಿ ತಂದ ಪ್ರಮುಖ ಶಾಸನಗಳಲ್ಲಿ ಒಂದಾಗಿದೆ. ಇದು ನಮ್ಮ ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಹಕಾರಿಯಾಗಿದೆ. ಕಳೆದ ಒಂದು ದಶಕದಲ್ಲಿ ಸುಮಾರು 60 ಲಕ್ಷ ಜನರು ಇದರ ಲಾಭ ಪಡೆದಿದ್ದಾರೆ. – ಅಶೋಕ್ ಗೆಹ್ಲೋಟ್, ರಾಜಸ್ಥಾನದ ಮುಖ್ಯಮಂತ್ರಿ.

ಆರ್‌ಟಿಐ ಕಾಯ್ದೆಯು ಅಪರಿಮಿತ ಭ್ರಷ್ಟಾಚಾರ ಮತ್ತು ದುರಾಡಳಿತದ ಅಧಿಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂಬುದಕ್ಕೆ 80 ಕ್ಕೂ ಹೆಚ್ಚು ಆರ್‌ಟಿಐ ಕಾರ್ಯಕರ್ತರ ಹತ್ಯೆಯೇ ಸಾಕ್ಷಿಯಾಗಿದೆ! ಪ್ರಸ್ತಾವಿತ ತಿದ್ದುಪಡಿಗಳು ಮಾಹಿತಿ ಆಯೋಗಗಳ ಸ್ವಾತಂತ್ರ್ಯವನ್ನು ತೀವ್ರವಾಗಿ ದುರ್ಬಲಗೊಳಿಸುತ್ತವೆ. ಹಾಗಾಗಿ ಅದನ್ನು ತೀವ್ರವಾಗಿ ವಿರೋಧಿಸಬೇಕು – ಅತಿಶಿ ಮರ್ಲೀನಾ, ಆಮ್ ಆದ್ಮಿ ಪಕ್ಷ ದೆಹಲಿ.

ಬಹಳಷ್ಟು ಮೋದಿ ಅಭಿಮಾನಿಗಳು ಈಗ ಎಚ್ಚರವಾಗಿ ಕೇಂದ್ರ ಸರ್ಕಾರದ ಆರ್.ಟಿ.ಐ ಕಾಯ್ದೆಗೆ ತಂದ ತಿದ್ದುಪಡಿಗಳನ್ನು ವಿರೋಧಿಸುತ್ತಿದ್ದಾರೆ. ಕಳೆದು ಐದು ವರ್ಷಗಳಲ್ಲಿ ಈ ಸರ್ಕಾರವು ಹೇಗೆ ಸ್ವತಂತ್ರ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂಬುದರ ಬಗ್ಗೆ ನಾನು ಸೇರಿದಂತೆ ನಮ್ಮ ಥರ ಯೋಚಿಸುವವರು ದನಿ ಎತ್ತಿದೆವು. ಆಗ ಈ ಮೋದಿ ಅಭಿಮಾನಿಗಳು ನಮ್ಮನ್ನು ಟ್ರೋಲ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸಮಯ ಮೀರಿ ಹೋಗಿದೆ. ವಿರೋಧವು ಮುಗಿದಿದೆ – ಧೃವ್ ರಾಠೀ, ಖ್ಯಾತ ಯೂಟ್ಯೂಬರ್, ಯುವ ಚಿಂತಕ.

ಮೋದಿ ಲೋಕಪಾಲ್ ರನ್ನು ಕೊಂದರು.
ಮೋದಿ ವಿಶಲ್ ಬ್ಲೋವರ್ಸ್ ಕಾಯ್ದೆಯನ್ನು ಕೊಂದರು
ಮೋದಿ ಈಗ ಆರ್‌ಟಿಐ ಕಾಯ್ದೆಯನ್ನು ಸಹ ಕೊಂದಿದ್ದಾರೆ

ಭಾರತದಲ್ಲಿ ಭ್ರಷ್ಟಾಚಾರ ಮತ್ತು ಕ್ರೋನಿ ಬಂಡವಾಳಶಾಹಿಗೆ ಮೋದಿ ಅತಿದೊಡ್ಡ ಸಹಾಯಕರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಸಂದೇಹವಿದೆಯೇ? – ಶ್ರೀವತ್ಸ, ಸಾಮಾಜಿಕ ಕಾರ್ಯಕರ್ತ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...