Homeಮುಖಪುಟಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ...

ಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ…

- Advertisement -
- Advertisement -

ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್.ಟಿ.ಐ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಅದಕ್ಕೆ ಬಹುಮತವೂ ಲಭಿಸಿದೆ. ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಈ ಕುರಿತು ಪ್ರಮುಖರು ಏನು ಹೇಳಿದ್ದಾರೆ ನೊಡೋಣ ಬನ್ನಿ.

ಅವರು ತಮ್ಮ ವಿದೇಶ ಪ್ರವಾಸಗಳಲ್ಲಿ ತಮ್ಮ ಕ್ರೋನಿ ಸ್ನೇಹಿತರಿಗೆ ಮಾಡಿಕೊಟ್ಟ ವ್ಯಾಪಾರದ ಒಪ್ಪಂದಗಳ ಮಾಹಿತಿಯನ್ನು ಮರೆಮಾಚುತ್ತಾರೆ. ಯಾವ ಸಾರ್ವಜನಿಕ ವಲಯದ ಸಂಸ್ಥೆಗಳು ಹಿಂಬಾಗಿಲಿನಿಂದ ಗಣಿಗಾರಿಕೆ ಒಪ್ಪಂದಗಳನ್ನು ಯಾವ ಮಿತ್ರರಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಅವರು ಮರೆಮಾಚುತ್ತಾರೆ. ಅವರು ರಫೇಲ್ ಒಪ್ಪಂದದ ಮಾಹಿತಿಯನ್ನು, ವಿಶೇಷವಾಗಿ ಆಫ್‌ಸೆಟ್ ಒಪ್ಪಂದಗಳನ್ನು ಅದಾನಿಗೆ ಕೊಡುವುದನ್ನು ಮರೆಮಾಚುತ್ತಾರೆ. ಹಾಗಾಗಿ ಅವರು ಆರ್‌ಟಿಐಯನ್ನು ಕೊಲ್ಲಲು ಪ್ರಯತ್ನಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ – ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟಿನ ಹಿರಿಯ ವಕೀಲರು.

ಮಾಹಿತಿ ಹಕ್ಕು ಕಾಯ್ದೆಯನ್ನು ಮಟ್ಟಹಾಕಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಯತ್ನ ಬಹಳ ಗಂಭೀರ ವಿಷಯವಾಗಿದೆ. ಇದು ಯುಪಿಎ ಅವಧಿಯಲ್ಲಿ ತಂದ ಪ್ರಮುಖ ಶಾಸನಗಳಲ್ಲಿ ಒಂದಾಗಿದೆ. ಇದು ನಮ್ಮ ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಹಕಾರಿಯಾಗಿದೆ. ಕಳೆದ ಒಂದು ದಶಕದಲ್ಲಿ ಸುಮಾರು 60 ಲಕ್ಷ ಜನರು ಇದರ ಲಾಭ ಪಡೆದಿದ್ದಾರೆ. – ಅಶೋಕ್ ಗೆಹ್ಲೋಟ್, ರಾಜಸ್ಥಾನದ ಮುಖ್ಯಮಂತ್ರಿ.

ಆರ್‌ಟಿಐ ಕಾಯ್ದೆಯು ಅಪರಿಮಿತ ಭ್ರಷ್ಟಾಚಾರ ಮತ್ತು ದುರಾಡಳಿತದ ಅಧಿಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂಬುದಕ್ಕೆ 80 ಕ್ಕೂ ಹೆಚ್ಚು ಆರ್‌ಟಿಐ ಕಾರ್ಯಕರ್ತರ ಹತ್ಯೆಯೇ ಸಾಕ್ಷಿಯಾಗಿದೆ! ಪ್ರಸ್ತಾವಿತ ತಿದ್ದುಪಡಿಗಳು ಮಾಹಿತಿ ಆಯೋಗಗಳ ಸ್ವಾತಂತ್ರ್ಯವನ್ನು ತೀವ್ರವಾಗಿ ದುರ್ಬಲಗೊಳಿಸುತ್ತವೆ. ಹಾಗಾಗಿ ಅದನ್ನು ತೀವ್ರವಾಗಿ ವಿರೋಧಿಸಬೇಕು – ಅತಿಶಿ ಮರ್ಲೀನಾ, ಆಮ್ ಆದ್ಮಿ ಪಕ್ಷ ದೆಹಲಿ.

ಬಹಳಷ್ಟು ಮೋದಿ ಅಭಿಮಾನಿಗಳು ಈಗ ಎಚ್ಚರವಾಗಿ ಕೇಂದ್ರ ಸರ್ಕಾರದ ಆರ್.ಟಿ.ಐ ಕಾಯ್ದೆಗೆ ತಂದ ತಿದ್ದುಪಡಿಗಳನ್ನು ವಿರೋಧಿಸುತ್ತಿದ್ದಾರೆ. ಕಳೆದು ಐದು ವರ್ಷಗಳಲ್ಲಿ ಈ ಸರ್ಕಾರವು ಹೇಗೆ ಸ್ವತಂತ್ರ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂಬುದರ ಬಗ್ಗೆ ನಾನು ಸೇರಿದಂತೆ ನಮ್ಮ ಥರ ಯೋಚಿಸುವವರು ದನಿ ಎತ್ತಿದೆವು. ಆಗ ಈ ಮೋದಿ ಅಭಿಮಾನಿಗಳು ನಮ್ಮನ್ನು ಟ್ರೋಲ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸಮಯ ಮೀರಿ ಹೋಗಿದೆ. ವಿರೋಧವು ಮುಗಿದಿದೆ – ಧೃವ್ ರಾಠೀ, ಖ್ಯಾತ ಯೂಟ್ಯೂಬರ್, ಯುವ ಚಿಂತಕ.

ಮೋದಿ ಲೋಕಪಾಲ್ ರನ್ನು ಕೊಂದರು.
ಮೋದಿ ವಿಶಲ್ ಬ್ಲೋವರ್ಸ್ ಕಾಯ್ದೆಯನ್ನು ಕೊಂದರು
ಮೋದಿ ಈಗ ಆರ್‌ಟಿಐ ಕಾಯ್ದೆಯನ್ನು ಸಹ ಕೊಂದಿದ್ದಾರೆ

ಭಾರತದಲ್ಲಿ ಭ್ರಷ್ಟಾಚಾರ ಮತ್ತು ಕ್ರೋನಿ ಬಂಡವಾಳಶಾಹಿಗೆ ಮೋದಿ ಅತಿದೊಡ್ಡ ಸಹಾಯಕರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಸಂದೇಹವಿದೆಯೇ? – ಶ್ರೀವತ್ಸ, ಸಾಮಾಜಿಕ ಕಾರ್ಯಕರ್ತ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...