Homeಮುಖಪುಟಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ...

ಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ…

- Advertisement -
- Advertisement -

ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್.ಟಿ.ಐ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಅದಕ್ಕೆ ಬಹುಮತವೂ ಲಭಿಸಿದೆ. ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಈ ಕುರಿತು ಪ್ರಮುಖರು ಏನು ಹೇಳಿದ್ದಾರೆ ನೊಡೋಣ ಬನ್ನಿ.

ಅವರು ತಮ್ಮ ವಿದೇಶ ಪ್ರವಾಸಗಳಲ್ಲಿ ತಮ್ಮ ಕ್ರೋನಿ ಸ್ನೇಹಿತರಿಗೆ ಮಾಡಿಕೊಟ್ಟ ವ್ಯಾಪಾರದ ಒಪ್ಪಂದಗಳ ಮಾಹಿತಿಯನ್ನು ಮರೆಮಾಚುತ್ತಾರೆ. ಯಾವ ಸಾರ್ವಜನಿಕ ವಲಯದ ಸಂಸ್ಥೆಗಳು ಹಿಂಬಾಗಿಲಿನಿಂದ ಗಣಿಗಾರಿಕೆ ಒಪ್ಪಂದಗಳನ್ನು ಯಾವ ಮಿತ್ರರಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಅವರು ಮರೆಮಾಚುತ್ತಾರೆ. ಅವರು ರಫೇಲ್ ಒಪ್ಪಂದದ ಮಾಹಿತಿಯನ್ನು, ವಿಶೇಷವಾಗಿ ಆಫ್‌ಸೆಟ್ ಒಪ್ಪಂದಗಳನ್ನು ಅದಾನಿಗೆ ಕೊಡುವುದನ್ನು ಮರೆಮಾಚುತ್ತಾರೆ. ಹಾಗಾಗಿ ಅವರು ಆರ್‌ಟಿಐಯನ್ನು ಕೊಲ್ಲಲು ಪ್ರಯತ್ನಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ – ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟಿನ ಹಿರಿಯ ವಕೀಲರು.

ಮಾಹಿತಿ ಹಕ್ಕು ಕಾಯ್ದೆಯನ್ನು ಮಟ್ಟಹಾಕಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಯತ್ನ ಬಹಳ ಗಂಭೀರ ವಿಷಯವಾಗಿದೆ. ಇದು ಯುಪಿಎ ಅವಧಿಯಲ್ಲಿ ತಂದ ಪ್ರಮುಖ ಶಾಸನಗಳಲ್ಲಿ ಒಂದಾಗಿದೆ. ಇದು ನಮ್ಮ ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಹಕಾರಿಯಾಗಿದೆ. ಕಳೆದ ಒಂದು ದಶಕದಲ್ಲಿ ಸುಮಾರು 60 ಲಕ್ಷ ಜನರು ಇದರ ಲಾಭ ಪಡೆದಿದ್ದಾರೆ. – ಅಶೋಕ್ ಗೆಹ್ಲೋಟ್, ರಾಜಸ್ಥಾನದ ಮುಖ್ಯಮಂತ್ರಿ.

ಆರ್‌ಟಿಐ ಕಾಯ್ದೆಯು ಅಪರಿಮಿತ ಭ್ರಷ್ಟಾಚಾರ ಮತ್ತು ದುರಾಡಳಿತದ ಅಧಿಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂಬುದಕ್ಕೆ 80 ಕ್ಕೂ ಹೆಚ್ಚು ಆರ್‌ಟಿಐ ಕಾರ್ಯಕರ್ತರ ಹತ್ಯೆಯೇ ಸಾಕ್ಷಿಯಾಗಿದೆ! ಪ್ರಸ್ತಾವಿತ ತಿದ್ದುಪಡಿಗಳು ಮಾಹಿತಿ ಆಯೋಗಗಳ ಸ್ವಾತಂತ್ರ್ಯವನ್ನು ತೀವ್ರವಾಗಿ ದುರ್ಬಲಗೊಳಿಸುತ್ತವೆ. ಹಾಗಾಗಿ ಅದನ್ನು ತೀವ್ರವಾಗಿ ವಿರೋಧಿಸಬೇಕು – ಅತಿಶಿ ಮರ್ಲೀನಾ, ಆಮ್ ಆದ್ಮಿ ಪಕ್ಷ ದೆಹಲಿ.

ಬಹಳಷ್ಟು ಮೋದಿ ಅಭಿಮಾನಿಗಳು ಈಗ ಎಚ್ಚರವಾಗಿ ಕೇಂದ್ರ ಸರ್ಕಾರದ ಆರ್.ಟಿ.ಐ ಕಾಯ್ದೆಗೆ ತಂದ ತಿದ್ದುಪಡಿಗಳನ್ನು ವಿರೋಧಿಸುತ್ತಿದ್ದಾರೆ. ಕಳೆದು ಐದು ವರ್ಷಗಳಲ್ಲಿ ಈ ಸರ್ಕಾರವು ಹೇಗೆ ಸ್ವತಂತ್ರ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂಬುದರ ಬಗ್ಗೆ ನಾನು ಸೇರಿದಂತೆ ನಮ್ಮ ಥರ ಯೋಚಿಸುವವರು ದನಿ ಎತ್ತಿದೆವು. ಆಗ ಈ ಮೋದಿ ಅಭಿಮಾನಿಗಳು ನಮ್ಮನ್ನು ಟ್ರೋಲ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸಮಯ ಮೀರಿ ಹೋಗಿದೆ. ವಿರೋಧವು ಮುಗಿದಿದೆ – ಧೃವ್ ರಾಠೀ, ಖ್ಯಾತ ಯೂಟ್ಯೂಬರ್, ಯುವ ಚಿಂತಕ.

ಮೋದಿ ಲೋಕಪಾಲ್ ರನ್ನು ಕೊಂದರು.
ಮೋದಿ ವಿಶಲ್ ಬ್ಲೋವರ್ಸ್ ಕಾಯ್ದೆಯನ್ನು ಕೊಂದರು
ಮೋದಿ ಈಗ ಆರ್‌ಟಿಐ ಕಾಯ್ದೆಯನ್ನು ಸಹ ಕೊಂದಿದ್ದಾರೆ

ಭಾರತದಲ್ಲಿ ಭ್ರಷ್ಟಾಚಾರ ಮತ್ತು ಕ್ರೋನಿ ಬಂಡವಾಳಶಾಹಿಗೆ ಮೋದಿ ಅತಿದೊಡ್ಡ ಸಹಾಯಕರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಸಂದೇಹವಿದೆಯೇ? – ಶ್ರೀವತ್ಸ, ಸಾಮಾಜಿಕ ಕಾರ್ಯಕರ್ತ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...