Homeಕರ್ನಾಟಕಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷಕ್ಕೂ ಅಧಿಕ ನಕಲಿ ಮತದಾರರನ್ನು ಸೃಷ್ಟಿಸಲಾಗಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಧ್ವನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾನಯ್ಯ, ಕೇಂದ್ರ ಬಿಜೆಪಿ ಮತ್ತು ಪ್ತಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು ಎನ್ನುವುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ” ಎಂದಿದ್ದಾರೆ.

“ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ” ಎಂದು ಹೇಳಿದ್ದಾರೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್‌ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರುವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ರೀತಿಯಲ್ಲಿ ಚುನಾವಣಾ ಅಕ್ರಮ ಎಸಗಲಾಗಿದೆ” ಎಂದು ವಿವರಣೆ ನೀಡಿದ್ದಾರೆ.

“ಒಟ್ಟು 11,965 ಮಂದಿ ನಕಲಿ ಮತದಾರರು ಈ ಕ್ಷೇತ್ರದಲ್ಲಿ ಮತಚಲಾವಣೆ ಮಾಡಿದ್ದಾರೆ. ಒಬ್ಬನೇ ಮತದಾರ ನಾಲ್ಕಾರು ಮತಗಟ್ಟೆಗಳಲ್ಲಿ ಮತ ಚಲಾಯಿಸಿರುವುದು, ಒಬ್ಬನೇ ಮತದಾರ ಈ ಕ್ಷೇತ್ರದ ಜೊತೆ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕೂಡ ಮತ ಚಲಾವಣೆ ಮಾಡಿರುವುದು. ಹೀಗೆ ಮತದಾನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

“ಒಟ್ಟು 40,009 ಮಂದಿ ನಕಲಿ ವಿಳಾಸ ಹೊಂದಿರುವ ಮತದಾರರನ್ನು ಈ ಕ್ಷೇತ್ರದಲ್ಲಿ ಪತ್ತೆ ಮಾಡಲಾಗಿದೆ. ಮನೆಯ ನಂಬರ್‌ ‘0’ ಎಂದು ನಮೂದಾಗಿರುವ ಸಾವಿರಾರು ವಿಳಾಸವೇ ಇಲ್ಲದ ಮತದಾರರು, ತಂದೆ ಮತ್ತು ಪತಿಯ ಹೆಸರು ಇರುವ ಜಾಗದಲ್ಲಿ ಅರ್ಥವೇ ಇಲ್ಲದಂತೆ ಮನಸೋಇಚ್ಛೆ ಇಂಗ್ಲೀಷ್‌ ಅಕ್ಷರಗಳನ್ನು ನಮೂದಿಸಿರುವುದು ಮತ್ತು ಅಸ್ತಿತ್ವದಲ್ಲಿ ಇಲ್ಲದ ವಿಳಾಸಗಳನ್ನು ನೀಡಿರುವುದು. ಹೀಗೆ ನಕಲಿ ವಿಳಾಸ ನೀಡಿ ಮತಗಳ್ಳತನ ನಡೆಸಲಾಗಿದೆ” ಎಂದು ಗಂಭೀರ ಲೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

“ಒಟ್ಟು 10,452 ಮಂದಿ ಮತದಾರರು ಎಲ್ಲರೂ ಒಟ್ಟಿಗೆ ಬೆರಳೆಣಿಕೆಯಷ್ಟು ಸಂಖ್ಯೆಯ ವಿಳಾಸದಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ. ಸಿಂಗಲ್‌ ಬೆಡ್‌ ರೂಂ ಮನೆಯ ವಿಳಾಸ ನೀಡಿ 80 ಜನ ಮತದಾರರ ಗುರುತಿನ ಚೀಟಿ ಪಡೆದಿದ್ದಾರೆ. 68 ಮಂದಿ ಮತದಾರರ ಗುರುತಿನ ಚೀಟಿಯಲ್ಲಿ ಒಂದು ಖಾಸಗಿ ಕ್ಲಬ್‌ ನ ವಿಳಾಸವಿದೆ. ಈ ಬಗ್ಗೆ ಅಲ್ಲಿ ವಿಚಾರಣೆ ನಡೆಸಿದಾಗ ಗುರುತಿನ ಚೀಟಿ ಹೊಂದಿರುವ ಯಾರೊಬ್ಬರೂ ಅಲ್ಲಿ ವಾಸವಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಒಟ್ಟು ಈ ಕ್ಷೇತ್ರದಲ್ಲಿ 4,132 ಮಂದಿಯ ಗುರುತಿನ ಚೀಟಿಯಲ್ಲಿ ಫೋಟೋಗಳೇ ಲಭ್ಯವಿಲ್ಲ ಅಥವಾ ಫೋಟೋಗಳನ್ನು ಗುರುತಿಸಲು ಸಾಧ್ಯವಾಗದಂತೆ ಅತ್ಯಂತ ಚಿಕ್ಕದಾಗಿ ನಮೂದಿಸಲಾಗಿದೆ. ಅಂದರೆ ಗುರುತೇ ಹಿಡಿಯಲಾಗದವರು ಕೂಡ ಮತದಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದಿದ್ದಾರೆ.

“ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ 33,692 ಮಂದಿಯ ವಯಸ್ಸು 60 ರಿಂದ 90 ವರ್ಷಕ್ಕೂ ಮೇಲ್ಪಟ್ಟಿದೆ. ಹೊಸ ಅಥವಾ ಯುವ ಮತದಾರರು ನರೇಂದ್ರ ಮೋದಿಗೆ ಮತ ನೀಡುತ್ತಾರೆ ಎಂಬ ಮಾತನ್ನು ಆಗಾಗ್ಗೆ ಬಿಜೆಪಿಯವರೇ ಹೇಳುತ್ತಿರುತ್ತಾರೆ. ವಾಸ್ತವದಲ್ಲಿ 98 ವರ್ಷ, 89 ವರ್ಷದ ವಯೋವೃದ್ಧರು ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡಿರುವುದು ಈ ಹಗರಣದ ಆಳ, ಅಗಲವನ್ನು ತೋರಿಸುತ್ತದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ರಾಹುಲ್‌ ಗಾಂಧಿ ಅವರು ಕೇಳಿದ ಮತದಾರರ ಎಲೆಕ್ಟ್ರಾನಿಕ್ ಮಾಹಿತಿ ಮತ್ತು ಸಿಸಿ ಟಿವಿ ದಾಖಲೆಗಳನ್ನು ನೀಡಿ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಂಡಿದ್ದರೆ ಈ ಹಗರಣವನ್ನು ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸಲು ಸಾಧ್ಯವಿತ್ತು. ಮಾಹಿತಿ ಮುಚ್ಚಿಡುವ ಏಕೈಕ ಉದ್ದೇಶದೊಂದಿಗೆ ಚುನಾವಣಾ ಆಯೋಗವು ತನ್ನ ನಿಯಮಗಳನ್ನು ಮನಸ್ಸಿಗೆ ಬಂದಂತೆ ತಿದ್ದುಪಡಿ ಮಾಡಿಕೊಂಡಿದೆ. ಇದು ಮಹದೇವಪುರ ಕ್ಷೇತ್ರಕ್ಕೆ ಸೀಮಿತವಾದ ಹಗರಣವಲ್ಲ, ಇಡೀ ದೇಶದಲ್ಲೇ ಇದೇ ಮಾದರಿಯ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಉಳಿದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...