Homeಕರ್ನಾಟಕಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷಕ್ಕೂ ಅಧಿಕ ನಕಲಿ ಮತದಾರರನ್ನು ಸೃಷ್ಟಿಸಲಾಗಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಧ್ವನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾನಯ್ಯ, ಕೇಂದ್ರ ಬಿಜೆಪಿ ಮತ್ತು ಪ್ತಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು ಎನ್ನುವುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ” ಎಂದಿದ್ದಾರೆ.

“ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ” ಎಂದು ಹೇಳಿದ್ದಾರೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್‌ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರುವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ರೀತಿಯಲ್ಲಿ ಚುನಾವಣಾ ಅಕ್ರಮ ಎಸಗಲಾಗಿದೆ” ಎಂದು ವಿವರಣೆ ನೀಡಿದ್ದಾರೆ.

“ಒಟ್ಟು 11,965 ಮಂದಿ ನಕಲಿ ಮತದಾರರು ಈ ಕ್ಷೇತ್ರದಲ್ಲಿ ಮತಚಲಾವಣೆ ಮಾಡಿದ್ದಾರೆ. ಒಬ್ಬನೇ ಮತದಾರ ನಾಲ್ಕಾರು ಮತಗಟ್ಟೆಗಳಲ್ಲಿ ಮತ ಚಲಾಯಿಸಿರುವುದು, ಒಬ್ಬನೇ ಮತದಾರ ಈ ಕ್ಷೇತ್ರದ ಜೊತೆ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕೂಡ ಮತ ಚಲಾವಣೆ ಮಾಡಿರುವುದು. ಹೀಗೆ ಮತದಾನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

“ಒಟ್ಟು 40,009 ಮಂದಿ ನಕಲಿ ವಿಳಾಸ ಹೊಂದಿರುವ ಮತದಾರರನ್ನು ಈ ಕ್ಷೇತ್ರದಲ್ಲಿ ಪತ್ತೆ ಮಾಡಲಾಗಿದೆ. ಮನೆಯ ನಂಬರ್‌ ‘0’ ಎಂದು ನಮೂದಾಗಿರುವ ಸಾವಿರಾರು ವಿಳಾಸವೇ ಇಲ್ಲದ ಮತದಾರರು, ತಂದೆ ಮತ್ತು ಪತಿಯ ಹೆಸರು ಇರುವ ಜಾಗದಲ್ಲಿ ಅರ್ಥವೇ ಇಲ್ಲದಂತೆ ಮನಸೋಇಚ್ಛೆ ಇಂಗ್ಲೀಷ್‌ ಅಕ್ಷರಗಳನ್ನು ನಮೂದಿಸಿರುವುದು ಮತ್ತು ಅಸ್ತಿತ್ವದಲ್ಲಿ ಇಲ್ಲದ ವಿಳಾಸಗಳನ್ನು ನೀಡಿರುವುದು. ಹೀಗೆ ನಕಲಿ ವಿಳಾಸ ನೀಡಿ ಮತಗಳ್ಳತನ ನಡೆಸಲಾಗಿದೆ” ಎಂದು ಗಂಭೀರ ಲೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

“ಒಟ್ಟು 10,452 ಮಂದಿ ಮತದಾರರು ಎಲ್ಲರೂ ಒಟ್ಟಿಗೆ ಬೆರಳೆಣಿಕೆಯಷ್ಟು ಸಂಖ್ಯೆಯ ವಿಳಾಸದಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ. ಸಿಂಗಲ್‌ ಬೆಡ್‌ ರೂಂ ಮನೆಯ ವಿಳಾಸ ನೀಡಿ 80 ಜನ ಮತದಾರರ ಗುರುತಿನ ಚೀಟಿ ಪಡೆದಿದ್ದಾರೆ. 68 ಮಂದಿ ಮತದಾರರ ಗುರುತಿನ ಚೀಟಿಯಲ್ಲಿ ಒಂದು ಖಾಸಗಿ ಕ್ಲಬ್‌ ನ ವಿಳಾಸವಿದೆ. ಈ ಬಗ್ಗೆ ಅಲ್ಲಿ ವಿಚಾರಣೆ ನಡೆಸಿದಾಗ ಗುರುತಿನ ಚೀಟಿ ಹೊಂದಿರುವ ಯಾರೊಬ್ಬರೂ ಅಲ್ಲಿ ವಾಸವಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಒಟ್ಟು ಈ ಕ್ಷೇತ್ರದಲ್ಲಿ 4,132 ಮಂದಿಯ ಗುರುತಿನ ಚೀಟಿಯಲ್ಲಿ ಫೋಟೋಗಳೇ ಲಭ್ಯವಿಲ್ಲ ಅಥವಾ ಫೋಟೋಗಳನ್ನು ಗುರುತಿಸಲು ಸಾಧ್ಯವಾಗದಂತೆ ಅತ್ಯಂತ ಚಿಕ್ಕದಾಗಿ ನಮೂದಿಸಲಾಗಿದೆ. ಅಂದರೆ ಗುರುತೇ ಹಿಡಿಯಲಾಗದವರು ಕೂಡ ಮತದಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದಿದ್ದಾರೆ.

“ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ 33,692 ಮಂದಿಯ ವಯಸ್ಸು 60 ರಿಂದ 90 ವರ್ಷಕ್ಕೂ ಮೇಲ್ಪಟ್ಟಿದೆ. ಹೊಸ ಅಥವಾ ಯುವ ಮತದಾರರು ನರೇಂದ್ರ ಮೋದಿಗೆ ಮತ ನೀಡುತ್ತಾರೆ ಎಂಬ ಮಾತನ್ನು ಆಗಾಗ್ಗೆ ಬಿಜೆಪಿಯವರೇ ಹೇಳುತ್ತಿರುತ್ತಾರೆ. ವಾಸ್ತವದಲ್ಲಿ 98 ವರ್ಷ, 89 ವರ್ಷದ ವಯೋವೃದ್ಧರು ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡಿರುವುದು ಈ ಹಗರಣದ ಆಳ, ಅಗಲವನ್ನು ತೋರಿಸುತ್ತದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ರಾಹುಲ್‌ ಗಾಂಧಿ ಅವರು ಕೇಳಿದ ಮತದಾರರ ಎಲೆಕ್ಟ್ರಾನಿಕ್ ಮಾಹಿತಿ ಮತ್ತು ಸಿಸಿ ಟಿವಿ ದಾಖಲೆಗಳನ್ನು ನೀಡಿ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಂಡಿದ್ದರೆ ಈ ಹಗರಣವನ್ನು ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸಲು ಸಾಧ್ಯವಿತ್ತು. ಮಾಹಿತಿ ಮುಚ್ಚಿಡುವ ಏಕೈಕ ಉದ್ದೇಶದೊಂದಿಗೆ ಚುನಾವಣಾ ಆಯೋಗವು ತನ್ನ ನಿಯಮಗಳನ್ನು ಮನಸ್ಸಿಗೆ ಬಂದಂತೆ ತಿದ್ದುಪಡಿ ಮಾಡಿಕೊಂಡಿದೆ. ಇದು ಮಹದೇವಪುರ ಕ್ಷೇತ್ರಕ್ಕೆ ಸೀಮಿತವಾದ ಹಗರಣವಲ್ಲ, ಇಡೀ ದೇಶದಲ್ಲೇ ಇದೇ ಮಾದರಿಯ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಉಳಿದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...