Homeಕರ್ನಾಟಕಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷಕ್ಕೂ ಅಧಿಕ ನಕಲಿ ಮತದಾರರನ್ನು ಸೃಷ್ಟಿಸಲಾಗಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಧ್ವನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾನಯ್ಯ, ಕೇಂದ್ರ ಬಿಜೆಪಿ ಮತ್ತು ಪ್ತಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು ಎನ್ನುವುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ” ಎಂದಿದ್ದಾರೆ.

“ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ” ಎಂದು ಹೇಳಿದ್ದಾರೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್‌ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರುವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ರೀತಿಯಲ್ಲಿ ಚುನಾವಣಾ ಅಕ್ರಮ ಎಸಗಲಾಗಿದೆ” ಎಂದು ವಿವರಣೆ ನೀಡಿದ್ದಾರೆ.

“ಒಟ್ಟು 11,965 ಮಂದಿ ನಕಲಿ ಮತದಾರರು ಈ ಕ್ಷೇತ್ರದಲ್ಲಿ ಮತಚಲಾವಣೆ ಮಾಡಿದ್ದಾರೆ. ಒಬ್ಬನೇ ಮತದಾರ ನಾಲ್ಕಾರು ಮತಗಟ್ಟೆಗಳಲ್ಲಿ ಮತ ಚಲಾಯಿಸಿರುವುದು, ಒಬ್ಬನೇ ಮತದಾರ ಈ ಕ್ಷೇತ್ರದ ಜೊತೆ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕೂಡ ಮತ ಚಲಾವಣೆ ಮಾಡಿರುವುದು. ಹೀಗೆ ಮತದಾನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

“ಒಟ್ಟು 40,009 ಮಂದಿ ನಕಲಿ ವಿಳಾಸ ಹೊಂದಿರುವ ಮತದಾರರನ್ನು ಈ ಕ್ಷೇತ್ರದಲ್ಲಿ ಪತ್ತೆ ಮಾಡಲಾಗಿದೆ. ಮನೆಯ ನಂಬರ್‌ ‘0’ ಎಂದು ನಮೂದಾಗಿರುವ ಸಾವಿರಾರು ವಿಳಾಸವೇ ಇಲ್ಲದ ಮತದಾರರು, ತಂದೆ ಮತ್ತು ಪತಿಯ ಹೆಸರು ಇರುವ ಜಾಗದಲ್ಲಿ ಅರ್ಥವೇ ಇಲ್ಲದಂತೆ ಮನಸೋಇಚ್ಛೆ ಇಂಗ್ಲೀಷ್‌ ಅಕ್ಷರಗಳನ್ನು ನಮೂದಿಸಿರುವುದು ಮತ್ತು ಅಸ್ತಿತ್ವದಲ್ಲಿ ಇಲ್ಲದ ವಿಳಾಸಗಳನ್ನು ನೀಡಿರುವುದು. ಹೀಗೆ ನಕಲಿ ವಿಳಾಸ ನೀಡಿ ಮತಗಳ್ಳತನ ನಡೆಸಲಾಗಿದೆ” ಎಂದು ಗಂಭೀರ ಲೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

“ಒಟ್ಟು 10,452 ಮಂದಿ ಮತದಾರರು ಎಲ್ಲರೂ ಒಟ್ಟಿಗೆ ಬೆರಳೆಣಿಕೆಯಷ್ಟು ಸಂಖ್ಯೆಯ ವಿಳಾಸದಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ. ಸಿಂಗಲ್‌ ಬೆಡ್‌ ರೂಂ ಮನೆಯ ವಿಳಾಸ ನೀಡಿ 80 ಜನ ಮತದಾರರ ಗುರುತಿನ ಚೀಟಿ ಪಡೆದಿದ್ದಾರೆ. 68 ಮಂದಿ ಮತದಾರರ ಗುರುತಿನ ಚೀಟಿಯಲ್ಲಿ ಒಂದು ಖಾಸಗಿ ಕ್ಲಬ್‌ ನ ವಿಳಾಸವಿದೆ. ಈ ಬಗ್ಗೆ ಅಲ್ಲಿ ವಿಚಾರಣೆ ನಡೆಸಿದಾಗ ಗುರುತಿನ ಚೀಟಿ ಹೊಂದಿರುವ ಯಾರೊಬ್ಬರೂ ಅಲ್ಲಿ ವಾಸವಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಒಟ್ಟು ಈ ಕ್ಷೇತ್ರದಲ್ಲಿ 4,132 ಮಂದಿಯ ಗುರುತಿನ ಚೀಟಿಯಲ್ಲಿ ಫೋಟೋಗಳೇ ಲಭ್ಯವಿಲ್ಲ ಅಥವಾ ಫೋಟೋಗಳನ್ನು ಗುರುತಿಸಲು ಸಾಧ್ಯವಾಗದಂತೆ ಅತ್ಯಂತ ಚಿಕ್ಕದಾಗಿ ನಮೂದಿಸಲಾಗಿದೆ. ಅಂದರೆ ಗುರುತೇ ಹಿಡಿಯಲಾಗದವರು ಕೂಡ ಮತದಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದಿದ್ದಾರೆ.

“ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ 33,692 ಮಂದಿಯ ವಯಸ್ಸು 60 ರಿಂದ 90 ವರ್ಷಕ್ಕೂ ಮೇಲ್ಪಟ್ಟಿದೆ. ಹೊಸ ಅಥವಾ ಯುವ ಮತದಾರರು ನರೇಂದ್ರ ಮೋದಿಗೆ ಮತ ನೀಡುತ್ತಾರೆ ಎಂಬ ಮಾತನ್ನು ಆಗಾಗ್ಗೆ ಬಿಜೆಪಿಯವರೇ ಹೇಳುತ್ತಿರುತ್ತಾರೆ. ವಾಸ್ತವದಲ್ಲಿ 98 ವರ್ಷ, 89 ವರ್ಷದ ವಯೋವೃದ್ಧರು ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡಿರುವುದು ಈ ಹಗರಣದ ಆಳ, ಅಗಲವನ್ನು ತೋರಿಸುತ್ತದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ರಾಹುಲ್‌ ಗಾಂಧಿ ಅವರು ಕೇಳಿದ ಮತದಾರರ ಎಲೆಕ್ಟ್ರಾನಿಕ್ ಮಾಹಿತಿ ಮತ್ತು ಸಿಸಿ ಟಿವಿ ದಾಖಲೆಗಳನ್ನು ನೀಡಿ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಂಡಿದ್ದರೆ ಈ ಹಗರಣವನ್ನು ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸಲು ಸಾಧ್ಯವಿತ್ತು. ಮಾಹಿತಿ ಮುಚ್ಚಿಡುವ ಏಕೈಕ ಉದ್ದೇಶದೊಂದಿಗೆ ಚುನಾವಣಾ ಆಯೋಗವು ತನ್ನ ನಿಯಮಗಳನ್ನು ಮನಸ್ಸಿಗೆ ಬಂದಂತೆ ತಿದ್ದುಪಡಿ ಮಾಡಿಕೊಂಡಿದೆ. ಇದು ಮಹದೇವಪುರ ಕ್ಷೇತ್ರಕ್ಕೆ ಸೀಮಿತವಾದ ಹಗರಣವಲ್ಲ, ಇಡೀ ದೇಶದಲ್ಲೇ ಇದೇ ಮಾದರಿಯ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಉಳಿದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...