Homeಅಂಕಣಗಳುಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

- Advertisement -
- Advertisement -

ಸದ್ಯದ ಬಿಜೆಪಿ ಪಾರ್ಟಿಯೊಳಗೆ ರೌಡಿಗಳ ನೂಕುನುಗ್ಗಲು ನೋಡಿದ ಪ್ರತಾಪ ಸಿಮ್ಮ, ರೌಡಿಗಳು ಹೆದರಿ ಬಿಜೆಪಿಯೊಳಕ್ಕೆ ಬರಲುಕಾರಣ ನಮ್ಮ ಮೋದಿಯವರೇ ಎಂದರಂತಲ್ಲಾ; ಮೋದಿ ಉಗ್ರರನ್ನೇ ಅಟ್ಟಾಡಿಸಿಕೊಂಡು ಲಾಠಿ ಬೀಸುತ್ತಿದ್ದಾರೆ, ಆ ಲಾಠಿಗೆ ಸಿಕ್ಕ ಉಗ್ರರ ಕೆನ್ನೆ ಸಿಗಿದು ಹಲ್ಲು ಮುರಿದಿವೆ, ಕಣ್ಣು ಗೋಲಿಯಂತೆ ಆಕಾಶಕ್ಕೆ ಹಾರಿವೆ, ಕಿವಿ ತೂತುಬಿದ್ದು ಕೋಳ ತೊಡಿಸುವಂತಾಗಿವೆ; ಇದನ್ನ ನೋಡಿದ ಕೇಳಿದ ಊರ ರೌಡಿಗಳು, ಸದ್ಯಕ್ಕೆ ನಮ್ಮ ಅಂಗಾಂಗಗಳು ಆರೋಗ್ಯವಾಗಿರಬೇಕಾದರೆ, ಇದ್ದಂತೆಯೇ ಇರಬೇಕಾದರೆ ಮೋದಿ ಪಾರ್ಟಿಗೆ ಹೋಗಿ ಜೈಕಾರ ಹಾಕುವುದು ಬಿಟ್ಟು ಬೇರೆ ದಾರಿಯೇ ಕಾಣುತ್ತಿಲ್ಲ ಆದ್ದರಿಂದ ಬಿಜೆಪಿ ದಾರಿಯೇ ನಮಗೆ ಸೂಕ್ತವೆಂದು ತೀರ್ಮಾನಿಸಿದ್ದಾರೆ ಎಂದರಂತಲ್ಲಾ. ಇದಕ್ಕೆ ಒಂದು ಕಾರಣ ಸೇರಿಸುವುದಾದರೇ ಮೋದಿ ಸರಕಾರದ ಸಮಯದಲ್ಲಿ ಸಾವಿರಾರು ಮುಸ್ಲಿಮರನ್ನು ಸದೆಬಡಿದವರು ದೊಡ್ಡದೊಡ್ಡ ಹುದ್ದೆಗೆ ಏರಿದರು; ಇನ್ನು ಅವರ ಪಾರ್ಟಿಯ ರಾಜಕಾರಣಿಯೊಬ್ಬ ಕೇಸೊಂದರಲ್ಲಿ ಗಡಿಪಾರಾಗಿ ಕೊನೆಗೆ ಗೃಹಮಂತ್ರಿಯಾಗಿ ತನಗಾಗದವರ ಪಟ್ಟಿ ತಯಾರಿಸುತ್ತ ಕುಳಿತಿದ್ದಾರಂತಲ್ಲ. ಇಂತಹ ಜನ ಮುಂದೆ ಏನಾದರೂ ಮಾಡಬಲ್ಲರಾದ್ದರಿಂದ, ಆಡಳಿತ ನಡೆಸುತ್ತಿರುವ ಪಾರ್ಟಿಗೆ ಹೋಗಿ ಅಡಗಿಕೊಳ್ಳುವುದು ಸೂಕ್ತ ಎಂದು ಆಲೋಚಿಸುತ್ತಿರುವಾಗ ಫೈಟರ್ ರವಿ ಎಂಬಾತ ನಾಗಮಂಗಲದ ಕಡೆ ಹೊರಟನಂತಲ್ಲಾ, ಥೂತ್ತೇರಿ.

*****

ಈ ನಾಗಮಂಗಲಕ್ಕೂ ರಾಜಕಾರಣ ಕುಖ್ಯಾತಿಗೂ ಒಂದು ಇತಿಹಾಸವಿದೆ. ಈ ಹಿಂದೆ ಇಲ್ಲಿ ಶಾಸಕ, ಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ಹೆಚ್.ಟಿ ಕೃಷ್ಣಪ್ಪನವರು, ಹಿಂದೆ ಬಂದರೆ ಒದೆಯದ ಮುಂದೆ ಬಂದರೆ ಹಾಯದ ಗೋವಿನ ರೀತಿಯ ವ್ಯಕ್ತಿ; ಇದನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿದ್ದ ಮತ್ತು ವಕೀಲರಾಗಿದ್ದ ಇವರು ರಾಜಕಾರಣಕ್ಕೆ ಬಂದಿದ್ದು ಕೊಲೆಗಾರ ಅಪರಾಧಿಗಳನ್ನು ಬಿಡಿಸಿದ ಕಾರಣಕ್ಕೆ. ಗುಳುಕಾಯಿ ಹೊಸಳ್ಳಿ ಜನ ಶಾನುಭೋಗರನ್ನೇ ಕೊಲೆ ಮಾಡಿ ಜೈಲಿಗೆ ಹೋದರು. ಅವರನ್ನೆಲ್ಲಾ ನಿರಪರಾಧಿಗಳೆಂದು ತಾಂತ್ರಿಕ ಕಾರಣಗಳ ಮುಖಾಂತರ ಖುಲಾಸೆಗೊಳಿಸಿದರು. ಕೊಲೆಗಾರರನ್ನು ಬಿಡಿಸಿದ ವ್ಯಕ್ತಿ ನಮ್ಮನ್ನ ರಕ್ಷಿಸುತ್ತಾನೆಂದು ಭಾವಿಸಿದ ಜನ ಚುನಾವಣೆಯಲ್ಲಿ ಗೆಲ್ಲಿಸಿ ಶಾಸಕನನ್ನಾಗಿ ಮಾಡಿದರು. ಇವರ ನಂತರ ಬಂದ ಶಿವರಾಮೇಗೌಡ, ಗಂಗಾಧರಮೂರ್ತಿಯ ಕೊಲೆ ಕೇಸಿನಲ್ಲಿ ಸಿಲುಕಿ ಅಂತೂ ಆರೋಪಮುಕ್ತರಾಗಿ ಬಚಾವಾದರು. ಇವರ ನಂತರ ಬಂದ ಚಲುವರಾಯಸ್ವಾಮಿ ಬಳಿಯಿದ್ದ ಕೆಲ ರೌಡಿಗಳು ನಿಷ್ಠಾವಂತ ನಾಯಿಗಳಂತೆ ಬಾಲ ಅಲ್ಲಾಡಿಸಿದರೆ ಹೊರತು ಯಾರ ಮೇಲೂ ದಾಳಿ ಮಾಡಲಿಲ್ಲ. ಇವರ ನಂತರ ಬಂದ ಸುರೇಶ್‌ಗೌಡ ಹೆಚ್‌ಎಎಲ್‌ನ ವಸತಿ ನಿರ್ಮಾಣದ ಸೊಸೈಟಿ ಹಣದ ಅವ್ಯವಹಾರದ ಜೊತೆಗೆ ರೌಡಿಗಳಿಂದಲೂ ಹಣ ಪಡೆದು ಅದನ್ನು ಹಿಂದಿರುಗಿಸದೇ ಇರುವುದರಿಂದ ಆತನನ್ನ ಸೋಲಿಸಲೆಂದೇ ಫೈಟರ್ ರವಿ ಎಂಬ ರೌಡಿ ಬಂದು ಇಡೀ ತಾಲೂಕಿನ ತುಂಬ ಕಟೌಟ್ ಹಾಕಿದ್ದನಂತಲ್ಲಾ. ಏನು ಮಾಡಿದರೂ ರೌಡಿಯಂತೆ ಕಾಣದೆ ಮಠದ ಮೃತ ಸ್ವಾಮಿಯಂತೆ ಕಾಣುತ್ತಿದ್ದಾನೆ ಎಂದು ಜನ ನಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಹಿಂದೆ ಹೆಚ್ಚು ಯುದ್ಧಗಳಾಗುತ್ತಿದ್ದವು; ದೈಹಿಕವಾಗಿ ಭಲಾಢ್ಯವಾಗಿದ್ದ ಮತ್ತು ತೋಳು ತಿಮಿರಿನ ಜನ ಸೈನ್ಯಕ್ಕೆ ಸೇರಿ ಹತರಾಗುತ್ತಿದ್ದರು. ಅವರ ಹೆಂಡತಿಯರು ಅನಿವಾರ್ಯವಾಗಿ ಸಮಸ್ಯೆಗಳಿಗೆ ತುತ್ತಾಗುತ್ತಿದ್ದರು. ಇವರೆಲ್ಲಾ ಹೆಚ್ಚಿನ ಸಂಖ್ಯೆಯಲ್ಲಿ ಶೋಷಿತ ಸಮುದಾಯಗಳ ಜನ. ಸ್ವಾತಂತ್ರ್ಯಾನಂತರ ರಾಜಗುರುಗಳು ನಿರ್ನಾಮವಾಗಿ ಸೈನಿಕರು ಇಲ್ಲವಾದ ಕಾರಣ ಆ ಮನಸ್ಥಿತಿಯವರು ಊರುಗಳಲ್ಲೇ ರೌಡಿಗಳಾದರು; ಅವರು ಆ ತರಹ ಆಗಲು ಒಂದು ಸಣ್ಣ ಕಾರಣ ಸಾಕು, ಮುಂದೆ ಪೊಲೀಸರೇ ಬೆಳೆಸಿ ಭೂಗತಲೋಕ ಸೇರಿಸುತ್ತಾರೆ. ಈ ಭೂಗತ ಲೋಕದ ಕೃತ್ಯಗಳು ಭಯಾನಕ. ರೌಡಿಗಳ ಆಯಸ್ಸು ಮುಗಿದು ಸತ್ತ ಉದಾಹರಣೆ ವಿರಳ. ಭೂಗತ ಲೋಕದ ರಾಜ-ಡಾನ್ ದೈತ್ಯ ದೇಹಿಯಾಗಿರುತ್ತಾನೆ. ಜಯರಾಜ್, ಬಲರಾಮ್, ಫಯಾಜ್, ಕೊತ್ವಾಲ, ಶಿವರಾಂ, ಸುನಿಲ್ ಇತ್ಯಾದಿ ವ್ಯಕ್ತಿಗಳ ಆಕಾರ ನೋಡಿದರೆ ನಿಮಗೆ ತಿಳಿಯುತ್ತದೆ. ಆದರೆ ದೇಹಾಕೃತಿಯಲ್ಲ ದುರ್ಬಲವಾಗಿದ್ದ ಮುತ್ತಪ್ಪ ರೈ ಬುದ್ಧಿವಂತಿಕೆ ಉಪಯೋಗಿಸಿ ಭೂಗತಲೋಕಕ್ಕೆ ಪಿಸ್ತೂಲು ತಂದ ವ್ಯಕ್ತಿ. ಅದನ್ನ ಆತನೇ ಉಪಯೋಗಿಸಬೇಕಿಲ್ಲ; ಕಾಸುಕೊಟ್ಟು ನಿರ್ದೇಶನ ನೀಡಿದರೆ ಸಾಕು; ಯಾವ ಹುಡುಗನಾದರೂ ಆ ಕೆಲಸ ಮಾಡಿ ತಲೆಮರೆಸಿಕೊಳ್ಳಬಲ್ಲ. ಇಂತಹ ಕೆಲಸವನ್ನ ದುಬಾಯಿಯಲ್ಲಿ ಕುಳಿತು ಮಾಡಿ ಯಾವ ಕೇಸುಗಳನ್ನು ಕಡಿಮೆ ಅಂಟಿಸಿಕೊಂಡು ಬದುಕಿದವನು ಈ ಮುತ್ತಪ್ಪ ರೈ. ಅಂತಹ ರೈಗೂ ನಾಗಮಂಗಲದ ಕಡೆ ಚಿಲ್ಲರೆ ರಾಜಕಾರಣಿಯೊಬ್ಬ ಕೋಟ್ಯಂತರ ರೂಪಾಯಿಗಳ ನಾಮ ಎಳೆದು, ನಾಳೆ ಕೊಡುತ್ತೇನೆ ನಾಡಿದ್ದು ಗ್ಯಾರಂಟಿ ಎಂದು ಹೇಳುತ್ತಿರುವಾಗಲೇ ಮುತ್ತಪ್ಪ ರೈ ದೇಹ ತ್ಯಜಿಸಿದ. ಅಂತಹ ಮುತ್ತಪ್ಪನಿಗೆ ಮಣ್ಣು ತಿನ್ನಿಸಿದವರು ಈ ನಾಗಮಂಗಲದ ಮಣ್ಣಿನವನು ಅನ್ನುವುದಾದರೆ ಇನ್ನ ಬಿಜೆಪಿ ರೌಡಿಗಳು ಇಲ್ಲಿ ಉದ್ಧಾರವಾಗುವುದುಂಟೆ, ಥೂತ್ತೇರಿ.

*****

ಬೆಂಗಳೂರಿಂದ ಎರಡೂವರೆ ಗಂಟೆ ಪ್ರಯಾಣದಷ್ಟು ದೂರವಿರುವ ನಾಗಮಂಗಲ ಕೆಲ ರೌಡಿಗಳಿಗೆ ಸುರಕ್ಷಿತ ಜಾಗ. ದರೋಡೆ ಕೇಸೊಂದರಿಂದ ಪರಾರಿಯಾಗಿ ಎಲ್ಲಿ ಅಡಗಿಕೊಳ್ಳಬೇಕೆಂದು ರೌಡಿಗಳೆಲ್ಲಾ ಚರ್ಚಿಸುತ್ತಿರುವಾಗ ಇವರಿಗೆ ಕಾಫಿ, ಸಿಗರೇಟು ತಂದುಕೊಡುತ್ತಿದ್ದ ಹುಡುಗನೊಬ್ಬ ,”ಸಾರ್ ನಾಗಮಂಗಲದತ್ರ ಇರೋ ನಮ್ಮೂರಲ್ಲಿರಿ, ಅಲ್ಲಿಗೆ ಯಾರೂ ಬರಕ್ಕಾಗಲ್ಲ” ಎಂದ. ಮರು ಮಾತನಾಡದ ರೌಡಿಗಳು ಆ ಮುಗ್ದ ಹುಡುಗನ ಹಿಂದೆ ಬಂದು ಅವನ ಮನೆಯೊಳಗೆ ಇಸ್ಪಿಟ್ ಆಡುತ್ತ, ಮಾಂಸ ಮದ್ಯದ ಅಮಲಲ್ಲಿ ತೇಲಾಡುತ್ತಿರುವಾಗ ಹುಡುಗನ ಅಪ್ಪ “ಮಗ ಯಾರ್ಲ ಇವುರು” ಅಂದ. “ಇವುರ್‍ಯೆಲ್ಲ ಬೆಂಗಳೂರು ರೌಡಿಗಳು ಕಣಪ್ಪ, ಯಾವ ಕ್ಯಲಸ ಮಾಡಕ್ಕೂ ಹೇಸದಿಲ್ಲ. ಅದೇನೊ ಮಾಡಿ ಇಲ್ಲಿ ಬಂದವುರೆ ಯಾರಿಗೂ ಹೇಳಬ್ಯಾಡ” ಅಂದ. ಕೂಡಲೇ ಆ ಅಪ್ಪ ರೌಡಿಯೊಬ್ಬನ ಜುಬ್ಬ ಹಾಕಿಕೊಂಡ; ಅದಾಗಲೇ ರೌಡಿಗಳೇ ಕೊಟ್ಟ ವಿಸ್ಕಿ ಕುಡಿದಿದ್ದರಿಂದ, ಊರಮುಂದಿನ ಕಟ್ಟೆಮೇಲೆ ಕುಳಿತು “ಅದ್ಯಾವನನ್ನ ಮಗ ಬತ್ತಿರೋ ಬರ್ಲಿ, ಏನಂತ ತಿಳಕಂಡಿದ್ದಿರಿ ಈ ನನ್ನ? ಬಂದು ಮುಟ್ಟಿ ನೋಡಿ ನಿಮ್ಮ ಕತೆ ಏನಾಯ್ತದೆ ಅಂತ ಗೊತ್ತಾಯ್ತದೆ. ಯಂಥಾ ಜನ ತಂದು ನನ್ನ ಮನಿಲಿ ಮಡಿಕಂಡಿದ್ದಿನಿ ಗೊತ್ತೆ? ಕೊಲೆ ಮಾಡಿ ಜಯಿಸಿಗಂಡೋರು ನನ್ನ ಮನೇಲಿ ಇಸ್ಪೀಟ್ ಆಡ್ತಾ ಅವುರೆ ಗೊತ್ತೆ” ಎಂದು ಅವಾಜ್ ಹಾಕಿದ. ಆತನ ಎದುರು ಜನ ಸೇರತೊಡಗಿದರು. ಇತ್ತ ರೌಡಿಗಳು ಹಿತ್ತಲ ಬಾಗಿಲಿಂದ ಎದ್ದುಬಿದ್ದು ಓಡತೊಡಗಿದರು! ಎಂದಿನಂತೆ ಊರ ಜನಕ್ಕೆ ಆ ಕೊಚ್ಚಿಕೊಂಡ ವ್ಯಕ್ತಿ ಮತ್ತೊಂದು ಸುಳ್ಳು ಹೇಳಿದಂತಾಯ್ತು. ಈಗ ಅಂತಹ ಸ್ಥಿತಿಯಿಲ್ಲ. ಫೈಟರ್ ರವಿ ಕಾರಣಕ್ಕೆ ಬೆಂಗಳೂರು ಕೆಲ ಪುಡಿರೌಡಿಗಳು ಬಂದು ಇಲ್ಲಿನ ತೋಟ ತುಡಿಕೆಯಲ್ಲಿ ಬೇಯುತ್ತಿರುವ ಬಾಡಿಗಾಗಿ ಕಾಯಬಹುದು. ಅಂತೂ ಬಿಜೆಪಿ ಪಾಪದಕೊಡ ರೌಡಿಗಳಿಂದ ತುಂಬತೊಡಗಿದೆಯಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...