Homeಅಂಕಣಗಳುಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

- Advertisement -
- Advertisement -

ಸದ್ಯದ ಬಿಜೆಪಿ ಪಾರ್ಟಿಯೊಳಗೆ ರೌಡಿಗಳ ನೂಕುನುಗ್ಗಲು ನೋಡಿದ ಪ್ರತಾಪ ಸಿಮ್ಮ, ರೌಡಿಗಳು ಹೆದರಿ ಬಿಜೆಪಿಯೊಳಕ್ಕೆ ಬರಲುಕಾರಣ ನಮ್ಮ ಮೋದಿಯವರೇ ಎಂದರಂತಲ್ಲಾ; ಮೋದಿ ಉಗ್ರರನ್ನೇ ಅಟ್ಟಾಡಿಸಿಕೊಂಡು ಲಾಠಿ ಬೀಸುತ್ತಿದ್ದಾರೆ, ಆ ಲಾಠಿಗೆ ಸಿಕ್ಕ ಉಗ್ರರ ಕೆನ್ನೆ ಸಿಗಿದು ಹಲ್ಲು ಮುರಿದಿವೆ, ಕಣ್ಣು ಗೋಲಿಯಂತೆ ಆಕಾಶಕ್ಕೆ ಹಾರಿವೆ, ಕಿವಿ ತೂತುಬಿದ್ದು ಕೋಳ ತೊಡಿಸುವಂತಾಗಿವೆ; ಇದನ್ನ ನೋಡಿದ ಕೇಳಿದ ಊರ ರೌಡಿಗಳು, ಸದ್ಯಕ್ಕೆ ನಮ್ಮ ಅಂಗಾಂಗಗಳು ಆರೋಗ್ಯವಾಗಿರಬೇಕಾದರೆ, ಇದ್ದಂತೆಯೇ ಇರಬೇಕಾದರೆ ಮೋದಿ ಪಾರ್ಟಿಗೆ ಹೋಗಿ ಜೈಕಾರ ಹಾಕುವುದು ಬಿಟ್ಟು ಬೇರೆ ದಾರಿಯೇ ಕಾಣುತ್ತಿಲ್ಲ ಆದ್ದರಿಂದ ಬಿಜೆಪಿ ದಾರಿಯೇ ನಮಗೆ ಸೂಕ್ತವೆಂದು ತೀರ್ಮಾನಿಸಿದ್ದಾರೆ ಎಂದರಂತಲ್ಲಾ. ಇದಕ್ಕೆ ಒಂದು ಕಾರಣ ಸೇರಿಸುವುದಾದರೇ ಮೋದಿ ಸರಕಾರದ ಸಮಯದಲ್ಲಿ ಸಾವಿರಾರು ಮುಸ್ಲಿಮರನ್ನು ಸದೆಬಡಿದವರು ದೊಡ್ಡದೊಡ್ಡ ಹುದ್ದೆಗೆ ಏರಿದರು; ಇನ್ನು ಅವರ ಪಾರ್ಟಿಯ ರಾಜಕಾರಣಿಯೊಬ್ಬ ಕೇಸೊಂದರಲ್ಲಿ ಗಡಿಪಾರಾಗಿ ಕೊನೆಗೆ ಗೃಹಮಂತ್ರಿಯಾಗಿ ತನಗಾಗದವರ ಪಟ್ಟಿ ತಯಾರಿಸುತ್ತ ಕುಳಿತಿದ್ದಾರಂತಲ್ಲ. ಇಂತಹ ಜನ ಮುಂದೆ ಏನಾದರೂ ಮಾಡಬಲ್ಲರಾದ್ದರಿಂದ, ಆಡಳಿತ ನಡೆಸುತ್ತಿರುವ ಪಾರ್ಟಿಗೆ ಹೋಗಿ ಅಡಗಿಕೊಳ್ಳುವುದು ಸೂಕ್ತ ಎಂದು ಆಲೋಚಿಸುತ್ತಿರುವಾಗ ಫೈಟರ್ ರವಿ ಎಂಬಾತ ನಾಗಮಂಗಲದ ಕಡೆ ಹೊರಟನಂತಲ್ಲಾ, ಥೂತ್ತೇರಿ.

*****

ಈ ನಾಗಮಂಗಲಕ್ಕೂ ರಾಜಕಾರಣ ಕುಖ್ಯಾತಿಗೂ ಒಂದು ಇತಿಹಾಸವಿದೆ. ಈ ಹಿಂದೆ ಇಲ್ಲಿ ಶಾಸಕ, ಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ಹೆಚ್.ಟಿ ಕೃಷ್ಣಪ್ಪನವರು, ಹಿಂದೆ ಬಂದರೆ ಒದೆಯದ ಮುಂದೆ ಬಂದರೆ ಹಾಯದ ಗೋವಿನ ರೀತಿಯ ವ್ಯಕ್ತಿ; ಇದನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿದ್ದ ಮತ್ತು ವಕೀಲರಾಗಿದ್ದ ಇವರು ರಾಜಕಾರಣಕ್ಕೆ ಬಂದಿದ್ದು ಕೊಲೆಗಾರ ಅಪರಾಧಿಗಳನ್ನು ಬಿಡಿಸಿದ ಕಾರಣಕ್ಕೆ. ಗುಳುಕಾಯಿ ಹೊಸಳ್ಳಿ ಜನ ಶಾನುಭೋಗರನ್ನೇ ಕೊಲೆ ಮಾಡಿ ಜೈಲಿಗೆ ಹೋದರು. ಅವರನ್ನೆಲ್ಲಾ ನಿರಪರಾಧಿಗಳೆಂದು ತಾಂತ್ರಿಕ ಕಾರಣಗಳ ಮುಖಾಂತರ ಖುಲಾಸೆಗೊಳಿಸಿದರು. ಕೊಲೆಗಾರರನ್ನು ಬಿಡಿಸಿದ ವ್ಯಕ್ತಿ ನಮ್ಮನ್ನ ರಕ್ಷಿಸುತ್ತಾನೆಂದು ಭಾವಿಸಿದ ಜನ ಚುನಾವಣೆಯಲ್ಲಿ ಗೆಲ್ಲಿಸಿ ಶಾಸಕನನ್ನಾಗಿ ಮಾಡಿದರು. ಇವರ ನಂತರ ಬಂದ ಶಿವರಾಮೇಗೌಡ, ಗಂಗಾಧರಮೂರ್ತಿಯ ಕೊಲೆ ಕೇಸಿನಲ್ಲಿ ಸಿಲುಕಿ ಅಂತೂ ಆರೋಪಮುಕ್ತರಾಗಿ ಬಚಾವಾದರು. ಇವರ ನಂತರ ಬಂದ ಚಲುವರಾಯಸ್ವಾಮಿ ಬಳಿಯಿದ್ದ ಕೆಲ ರೌಡಿಗಳು ನಿಷ್ಠಾವಂತ ನಾಯಿಗಳಂತೆ ಬಾಲ ಅಲ್ಲಾಡಿಸಿದರೆ ಹೊರತು ಯಾರ ಮೇಲೂ ದಾಳಿ ಮಾಡಲಿಲ್ಲ. ಇವರ ನಂತರ ಬಂದ ಸುರೇಶ್‌ಗೌಡ ಹೆಚ್‌ಎಎಲ್‌ನ ವಸತಿ ನಿರ್ಮಾಣದ ಸೊಸೈಟಿ ಹಣದ ಅವ್ಯವಹಾರದ ಜೊತೆಗೆ ರೌಡಿಗಳಿಂದಲೂ ಹಣ ಪಡೆದು ಅದನ್ನು ಹಿಂದಿರುಗಿಸದೇ ಇರುವುದರಿಂದ ಆತನನ್ನ ಸೋಲಿಸಲೆಂದೇ ಫೈಟರ್ ರವಿ ಎಂಬ ರೌಡಿ ಬಂದು ಇಡೀ ತಾಲೂಕಿನ ತುಂಬ ಕಟೌಟ್ ಹಾಕಿದ್ದನಂತಲ್ಲಾ. ಏನು ಮಾಡಿದರೂ ರೌಡಿಯಂತೆ ಕಾಣದೆ ಮಠದ ಮೃತ ಸ್ವಾಮಿಯಂತೆ ಕಾಣುತ್ತಿದ್ದಾನೆ ಎಂದು ಜನ ನಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಹಿಂದೆ ಹೆಚ್ಚು ಯುದ್ಧಗಳಾಗುತ್ತಿದ್ದವು; ದೈಹಿಕವಾಗಿ ಭಲಾಢ್ಯವಾಗಿದ್ದ ಮತ್ತು ತೋಳು ತಿಮಿರಿನ ಜನ ಸೈನ್ಯಕ್ಕೆ ಸೇರಿ ಹತರಾಗುತ್ತಿದ್ದರು. ಅವರ ಹೆಂಡತಿಯರು ಅನಿವಾರ್ಯವಾಗಿ ಸಮಸ್ಯೆಗಳಿಗೆ ತುತ್ತಾಗುತ್ತಿದ್ದರು. ಇವರೆಲ್ಲಾ ಹೆಚ್ಚಿನ ಸಂಖ್ಯೆಯಲ್ಲಿ ಶೋಷಿತ ಸಮುದಾಯಗಳ ಜನ. ಸ್ವಾತಂತ್ರ್ಯಾನಂತರ ರಾಜಗುರುಗಳು ನಿರ್ನಾಮವಾಗಿ ಸೈನಿಕರು ಇಲ್ಲವಾದ ಕಾರಣ ಆ ಮನಸ್ಥಿತಿಯವರು ಊರುಗಳಲ್ಲೇ ರೌಡಿಗಳಾದರು; ಅವರು ಆ ತರಹ ಆಗಲು ಒಂದು ಸಣ್ಣ ಕಾರಣ ಸಾಕು, ಮುಂದೆ ಪೊಲೀಸರೇ ಬೆಳೆಸಿ ಭೂಗತಲೋಕ ಸೇರಿಸುತ್ತಾರೆ. ಈ ಭೂಗತ ಲೋಕದ ಕೃತ್ಯಗಳು ಭಯಾನಕ. ರೌಡಿಗಳ ಆಯಸ್ಸು ಮುಗಿದು ಸತ್ತ ಉದಾಹರಣೆ ವಿರಳ. ಭೂಗತ ಲೋಕದ ರಾಜ-ಡಾನ್ ದೈತ್ಯ ದೇಹಿಯಾಗಿರುತ್ತಾನೆ. ಜಯರಾಜ್, ಬಲರಾಮ್, ಫಯಾಜ್, ಕೊತ್ವಾಲ, ಶಿವರಾಂ, ಸುನಿಲ್ ಇತ್ಯಾದಿ ವ್ಯಕ್ತಿಗಳ ಆಕಾರ ನೋಡಿದರೆ ನಿಮಗೆ ತಿಳಿಯುತ್ತದೆ. ಆದರೆ ದೇಹಾಕೃತಿಯಲ್ಲ ದುರ್ಬಲವಾಗಿದ್ದ ಮುತ್ತಪ್ಪ ರೈ ಬುದ್ಧಿವಂತಿಕೆ ಉಪಯೋಗಿಸಿ ಭೂಗತಲೋಕಕ್ಕೆ ಪಿಸ್ತೂಲು ತಂದ ವ್ಯಕ್ತಿ. ಅದನ್ನ ಆತನೇ ಉಪಯೋಗಿಸಬೇಕಿಲ್ಲ; ಕಾಸುಕೊಟ್ಟು ನಿರ್ದೇಶನ ನೀಡಿದರೆ ಸಾಕು; ಯಾವ ಹುಡುಗನಾದರೂ ಆ ಕೆಲಸ ಮಾಡಿ ತಲೆಮರೆಸಿಕೊಳ್ಳಬಲ್ಲ. ಇಂತಹ ಕೆಲಸವನ್ನ ದುಬಾಯಿಯಲ್ಲಿ ಕುಳಿತು ಮಾಡಿ ಯಾವ ಕೇಸುಗಳನ್ನು ಕಡಿಮೆ ಅಂಟಿಸಿಕೊಂಡು ಬದುಕಿದವನು ಈ ಮುತ್ತಪ್ಪ ರೈ. ಅಂತಹ ರೈಗೂ ನಾಗಮಂಗಲದ ಕಡೆ ಚಿಲ್ಲರೆ ರಾಜಕಾರಣಿಯೊಬ್ಬ ಕೋಟ್ಯಂತರ ರೂಪಾಯಿಗಳ ನಾಮ ಎಳೆದು, ನಾಳೆ ಕೊಡುತ್ತೇನೆ ನಾಡಿದ್ದು ಗ್ಯಾರಂಟಿ ಎಂದು ಹೇಳುತ್ತಿರುವಾಗಲೇ ಮುತ್ತಪ್ಪ ರೈ ದೇಹ ತ್ಯಜಿಸಿದ. ಅಂತಹ ಮುತ್ತಪ್ಪನಿಗೆ ಮಣ್ಣು ತಿನ್ನಿಸಿದವರು ಈ ನಾಗಮಂಗಲದ ಮಣ್ಣಿನವನು ಅನ್ನುವುದಾದರೆ ಇನ್ನ ಬಿಜೆಪಿ ರೌಡಿಗಳು ಇಲ್ಲಿ ಉದ್ಧಾರವಾಗುವುದುಂಟೆ, ಥೂತ್ತೇರಿ.

*****

ಬೆಂಗಳೂರಿಂದ ಎರಡೂವರೆ ಗಂಟೆ ಪ್ರಯಾಣದಷ್ಟು ದೂರವಿರುವ ನಾಗಮಂಗಲ ಕೆಲ ರೌಡಿಗಳಿಗೆ ಸುರಕ್ಷಿತ ಜಾಗ. ದರೋಡೆ ಕೇಸೊಂದರಿಂದ ಪರಾರಿಯಾಗಿ ಎಲ್ಲಿ ಅಡಗಿಕೊಳ್ಳಬೇಕೆಂದು ರೌಡಿಗಳೆಲ್ಲಾ ಚರ್ಚಿಸುತ್ತಿರುವಾಗ ಇವರಿಗೆ ಕಾಫಿ, ಸಿಗರೇಟು ತಂದುಕೊಡುತ್ತಿದ್ದ ಹುಡುಗನೊಬ್ಬ ,”ಸಾರ್ ನಾಗಮಂಗಲದತ್ರ ಇರೋ ನಮ್ಮೂರಲ್ಲಿರಿ, ಅಲ್ಲಿಗೆ ಯಾರೂ ಬರಕ್ಕಾಗಲ್ಲ” ಎಂದ. ಮರು ಮಾತನಾಡದ ರೌಡಿಗಳು ಆ ಮುಗ್ದ ಹುಡುಗನ ಹಿಂದೆ ಬಂದು ಅವನ ಮನೆಯೊಳಗೆ ಇಸ್ಪಿಟ್ ಆಡುತ್ತ, ಮಾಂಸ ಮದ್ಯದ ಅಮಲಲ್ಲಿ ತೇಲಾಡುತ್ತಿರುವಾಗ ಹುಡುಗನ ಅಪ್ಪ “ಮಗ ಯಾರ್ಲ ಇವುರು” ಅಂದ. “ಇವುರ್‍ಯೆಲ್ಲ ಬೆಂಗಳೂರು ರೌಡಿಗಳು ಕಣಪ್ಪ, ಯಾವ ಕ್ಯಲಸ ಮಾಡಕ್ಕೂ ಹೇಸದಿಲ್ಲ. ಅದೇನೊ ಮಾಡಿ ಇಲ್ಲಿ ಬಂದವುರೆ ಯಾರಿಗೂ ಹೇಳಬ್ಯಾಡ” ಅಂದ. ಕೂಡಲೇ ಆ ಅಪ್ಪ ರೌಡಿಯೊಬ್ಬನ ಜುಬ್ಬ ಹಾಕಿಕೊಂಡ; ಅದಾಗಲೇ ರೌಡಿಗಳೇ ಕೊಟ್ಟ ವಿಸ್ಕಿ ಕುಡಿದಿದ್ದರಿಂದ, ಊರಮುಂದಿನ ಕಟ್ಟೆಮೇಲೆ ಕುಳಿತು “ಅದ್ಯಾವನನ್ನ ಮಗ ಬತ್ತಿರೋ ಬರ್ಲಿ, ಏನಂತ ತಿಳಕಂಡಿದ್ದಿರಿ ಈ ನನ್ನ? ಬಂದು ಮುಟ್ಟಿ ನೋಡಿ ನಿಮ್ಮ ಕತೆ ಏನಾಯ್ತದೆ ಅಂತ ಗೊತ್ತಾಯ್ತದೆ. ಯಂಥಾ ಜನ ತಂದು ನನ್ನ ಮನಿಲಿ ಮಡಿಕಂಡಿದ್ದಿನಿ ಗೊತ್ತೆ? ಕೊಲೆ ಮಾಡಿ ಜಯಿಸಿಗಂಡೋರು ನನ್ನ ಮನೇಲಿ ಇಸ್ಪೀಟ್ ಆಡ್ತಾ ಅವುರೆ ಗೊತ್ತೆ” ಎಂದು ಅವಾಜ್ ಹಾಕಿದ. ಆತನ ಎದುರು ಜನ ಸೇರತೊಡಗಿದರು. ಇತ್ತ ರೌಡಿಗಳು ಹಿತ್ತಲ ಬಾಗಿಲಿಂದ ಎದ್ದುಬಿದ್ದು ಓಡತೊಡಗಿದರು! ಎಂದಿನಂತೆ ಊರ ಜನಕ್ಕೆ ಆ ಕೊಚ್ಚಿಕೊಂಡ ವ್ಯಕ್ತಿ ಮತ್ತೊಂದು ಸುಳ್ಳು ಹೇಳಿದಂತಾಯ್ತು. ಈಗ ಅಂತಹ ಸ್ಥಿತಿಯಿಲ್ಲ. ಫೈಟರ್ ರವಿ ಕಾರಣಕ್ಕೆ ಬೆಂಗಳೂರು ಕೆಲ ಪುಡಿರೌಡಿಗಳು ಬಂದು ಇಲ್ಲಿನ ತೋಟ ತುಡಿಕೆಯಲ್ಲಿ ಬೇಯುತ್ತಿರುವ ಬಾಡಿಗಾಗಿ ಕಾಯಬಹುದು. ಅಂತೂ ಬಿಜೆಪಿ ಪಾಪದಕೊಡ ರೌಡಿಗಳಿಂದ ತುಂಬತೊಡಗಿದೆಯಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...