Homeಮುಖಪುಟಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಪ್ರಧಾನಿ ಮೋದಿಯವರು ನವೆಂಬರ್‌ 5ರಂದು ಉತ್ತರಖಾಂಡ್‌ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕೇದಾರನಾಥ ದೇವಾಲಯ ಪುರೋಹಿತರ ಪ್ರತಿಭಟನೆಯ ಬಿಸಿಯನ್ನು ಎದುರಿಸಬೇಕಾಗಿದೆ.

- Advertisement -
- Advertisement -

ನವೆಂಬರ್‌ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಕೇದಾರನಾಥಕ್ಕೆ ಭೇಟಿ ನೀಡಲಿದ್ದು, ಪ್ರಧಾನಿಯವರನ್ನು ಭೇಟಿ ಮಾಡಲು ಅವಕಾಶ ನೀಡದಿದ್ದರೆ ವೇದಿಕೆ ಪ್ರತಿಭಟನೆ ಮಾಡಲಾಗುವುದು ಎಂದು ತೀರ್ಥ ಪುರೋಹಿತರು (ಯಾತ್ರಾ ಪುರೋಹಿತರು) ಎಚ್ಚರಿಸಿದ್ದಾರೆ.

ಉತ್ತರಖಾಂಡ್‌ ಚಾರ್ ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ಬೋರ್ಡ್‌ ರಚಿಸಿ ಅದರ ಅಡಿಯಲ್ಲಿ ದೇವಾಲಯಗಳನ್ನು ಹಿಡಿತಕ್ಕೆ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿ, ಪ್ರಧಾನಿಯವರ ಭೇಟಿಯನ್ನು ಬಹಿಷ್ಕರಿಸಲು ಪುರೋಹಿತರು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿಯವರು ಅಂದು ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಭೆ ಅನಾವರಣ ಮಾಡಲಿದ್ದಾರೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಗಳಿಗೆ ಚಾಲನೆ ನೀಡಲಿದ್ದಾರೆ.

“ಚಾರ್‌ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ರದ್ದುಗೊಳಿಸಲು ಆಗ್ರಹಿಸಿ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲು ಪದೇ ಪದೇ ಕೋರಲಾಗುತ್ತಿದೆ. ಆದರೆ ಅದಕ್ಕೆ ಮೋದಿಯವರು ಅವಕಾಶ ನೀಡುತ್ತಿಲ್ಲ” ಎಂದು ಪುರೋಹಿತರು ಬೇಸರ ವ್ಯಕ್ತಪಡಿಸಿದ್ದಾರೆ.

ಚಾರ್‌ಧಾಮ್‌ ಕಾಯಿದೆಯು ನಮ್ಮ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ, ಮಂಡಳಿಯ ವ್ಯಾಪ್ತಿಯಲ್ಲಿರುವ ದೇವಾಲಯದ ಆವರಣಗಳಲ್ಲಿನ ನಮ್ಮ ಆಸ್ತಿಗಳ ಮಾಲೀಕತ್ವವನ್ನು ಕಸಿದುಕೊಂಡಿದೆ. ಹೀಗಾಗಿ ಮೋದಿ ವಿರುದ್ಧ ನಮ್ಮ ದನಿಯನ್ನು ಎತ್ತಿದ್ದೇವೆ ಎಂದು ಬದ್ರಿನಾಥದ ಪುರೋಹಿತ ಹಾಗೂ ಚಾರ್‌ಧಾಮ್‌ ತೀರ್ಥ ಪುರೋಹಿತ್‌ ಹಕ್‌ಹುತುಕ್‌ ಮಹಾ ಪಂಚಾಯತ್‌‌ ಅಧ್ಯಕ್ಷ ಕೆ.ಕೆ.ಕೋಟಿಯಾಲ್‌‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

“ಪ್ರಧಾನಿ ಭೇಟಿಗೆ ಮುನ್ನ ರಾಜ್ಯ ಸರ್ಕಾರವು ಬೋರ್ಡ್ ಅನ್ನು ರದ್ದುಪಡಿಸುತ್ತದೆ ಎಂದು ಚಾರ್ ಧಾಮ್ ತೀರ್ಥ ಪುರೋಹಿತರು ನಂಬಿದ್ದೇವೆ. ಇಲ್ಲದಿದ್ದರೆ ನಾವು ಕೇದಾರನಾಥದಲ್ಲಿ ಪ್ರತಿಭಟನೆಗೆ ಸಿದ್ಧರಿದ್ದೇವೆ” ಎಂದು ಕೋಟಿಯಾಲ್‌ ಎಚ್ಚರಿಕೆ ನೀಡಿದ್ದಾರೆ.

“ಪ್ರತಿಭಟನೆ ಕೇವಲ ಘೋಷಣೆಗಳಿಗೆ ಸೀಮಿತವಾಗುವುದಿಲ್ಲ, ಪ್ರಧಾನಿ ಲ್ಯಾಡ್‌ ಆಗಲು ಬಿಡುವುದಿಲ್ಲ. ನಾವು ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ. ಅವರ ಭೇಟಿಯನ್ನು ವಿರೋಧಿಸಿ ಕಪ್ಪು ಬಾವುಟ ತೋರಿಸಿ ಬಂದ್‌ಗೆ ಕರೆ ನೀಡುತ್ತೇವೆ” ಎಂದು ಸ್ಥಳೀಯ ಪುರೋಹಿತರ ಸಂಘವಾಗಿರುವ ಕೇದಾರನಾಥ ಸಭಾದ ಅಧ್ಯಕ್ಷ ವಿನೋದ್ ಶುಕ್ಲಾ ಹೇಳಿದ್ದಾರೆ.

ಅಕ್ಟೋಬರ್ 11ರ ಸಭೆಯ ನಂತರ ಬೋರ್ಡ್ ಅನ್ನು ರದ್ದುಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೀಡಿದ್ದರು. ಅಕ್ಟೋಬರ್ 30ರವರೆಗೆ ಪ್ರತಿಭಟನೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ನವೆಂಬರ್ 1ರಿಂದ ನಾವು ನಮ್ಮ ಪ್ರತಿಭಟನೆಯನ್ನು ಪುನಾರಂಭಿಸುತ್ತಿದ್ದೇವೆ” ಎಂದಿದ್ದಾರೆ ಶುಕ್ಲಾ.

ಮತ್ತೊಬ್ಬ ಅರ್ಚಕ, ಚಾರ್ ಧಾಮ್ ಮಹಾ ಪಂಚಾಯತ್‌ನ ಸಂಚಾಲಕ ಮತ್ತು ಗಂಗೋತ್ರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುರೇಶ್ ಸೆಂವಾಲ್ ಪ್ರತಿಕ್ರಿಯಿಸಿ, “ಚಾರ್ ಧಾಮ್ ದೇವಾಸ್ಥಾನಂ ಆಡಳಿತ ಮಂಡಳಿ ಕಾಯಿದೆಯು ಒಂದು ಕರಾಳ ಕಾನೂನು” ಎಂದಿದ್ದಾರೆ.

ಇದನ್ನೂ ಓದಿರಿ: ಸತತ ನಾಲ್ಕನೇ ದಿನವೂ ಪೆಟ್ರೊಲ್‌, ಡೀಸೆಲ್‌ ಬೆಲೆ ಏರಿಕೆ

“ಚಾರ್ ಧಾಮ್ ದೇವಾಲಯಗಳ ಪುರೋಹಿತರು ಕೇದಾರನಾಥದಲ್ಲಿ ಪ್ರಧಾನಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇತರ ಧರ್ಮಗಳಿಗೆ ಕಾನೂನು ಇಲ್ಲದಿರುವಾಗ ಕೇವಲ ಹಿಂದೂ ದೇವಾಲಯಗಳ ಮೇಲೆ ಸರ್ಕಾರ ಏಕೆ ಹೀಗೆ ಮಾಡುತ್ತಿದೆ? ಅವರು ತಮ್ಮ ವ್ಯಾಪ್ತಿಯಲ್ಲಿರುವ ಯಾವುದೇ ಮಸೀದಿ ಅಥವಾ ಚರ್ಚ್‌ಗಳನ್ನು ತೆಗೆದುಕೊಂಡಿಲ್ಲ” ಎಂದು ಸುರೇಶ್ ಸೆಂವಾಲ್‌ ಹೇಳಿದ್ದಾರೆ.

ಏನಿದು ವಿವಾದ?

2019ರ ಡಿಸೆಂಬರ್‌ನಲ್ಲಿ ಉತ್ತರಖಾಂಡ್‌ ಸರ್ಕಾರವು ಉತ್ತರ ಖಾಂಡ್‌ ಚಾರ್‌ ಧಮ್‌ ಶ್ರೈನ್‌ ಮ್ಯಾನೇಜ್‌ಮೆಂಟ್ ಮಸೂದೆಯನ್ನು ಮಂಡಿಸಿತು. ಈ ಮಸೂದೆಯು ಶಾಸನ ಸಭೆಯಲ್ಲಿ ಅಂಗೀಕಾರವಾಗಿ ಉತ್ತರಖಾಂಡ್‌ ಚಾರ್‌ ಧಮ್‌ ದೇವಸ್ಥಾನಮ್‌‌ ಮ್ಯಾನೇಜ್‌ಮೆಂಟ್‌ ಆಕ್ಟ್‌- 2019 ಜಾರಿಗೊಳಿಸಿ, 2020 ಜನವರಿ 15ರಂದು ಗೆಜೆಟ್‌ ನೋಟಿಫಿಕೇಷನ್‌ ಕೂಡ ಮಾಡಲಾಯಿತು.

ಈ ಬೋರ್ಡ್‌‌ನಲ್ಲಿ ಮುಖ್ಯಮಂತ್ರಿ ಅಧ್ಯಕ್ಷರಾಗಿರುತ್ತಾರೆ. ರಾಜ್ಯದ ಸಂಸ್ಕೃತಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಇತರ ಪದಾಧಿಕಾರಿಗಳೊಂದಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಈ ಮಂಡಲಿ ರಚನೆಯಾದಾಗಿನಿಂದಲೂ ಪುರೋಹಿತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬದ್ರಿ ಕೇದಾರನಾಥ ದೇವಾಲಯ ಸಮಿತಿ ಮುಖ್ಯಸ್ಥ ಮನೋಹರ್ ಕಾಂತ್ ಧ್ಯಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಳೆದ ಜುಲೈನಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಅಕ್ಟೋಬರ್ 25ರಂದು ಧ್ಯಾನಿ ಸಮಿತಿಯು ಮಧ್ಯಂತರ ವರದಿಯನ್ನು ಸಿಎಂಗೆ ಸಲ್ಲಿಸಿತು.

ಪ್ರಸ್ತುತ, ಉತ್ತರಾಖಂಡ್ ಚಾರ್ ಧಾಮ್ ದೇವಸ್ತಾನಂ ಮಂಡಳಿಯು ರಾಜ್ಯದ 51 ದೇವಾಲಯಗಳ ವ್ಯವಹಾರಗಳನ್ನು ನಿರ್ವಹಿಸುವ ನಿಯಂತ್ರಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಇವುಗಳಲ್ಲಿ ಗಂಗೋತ್ರಿ, ಯಮುನೋತ್ರಿ, ಬದರಿನಾಥ, ಕೇದಾರನಾಥ ಮತ್ತು 47 ಇತರ ದೇವಾಲಯಗಳು ಸೇರಿವೆ.

ಎಲ್ಲಾ ಚಾರ್ ಧಾಮ್ ದೇಗುಲಗಳು ಮತ್ತು ಅವುಗಳ ಸಂಯೋಜಿತ ದೇವಾಲಯಗಳ ಅರ್ಚಕರು, ಪುರೋಹಿತರು ಅತಿದೊಡ್ಡ ಮಧ್ಯಸ್ಥಗಾರರಾಗಿದ್ದಾರೆ. ಆದರೆ ದೇವಸ್ಥಾನಂ ಬೋರ್ಡ್ ಕಾನೂನನ್ನು ರೂಪಿಸುವ ಮೊದಲು ಉತ್ತರಾಖಂಡ ಸರ್ಕಾರವು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಪುರೋಹಿತರು ಆರೋಪಿಸಿದ್ದಾರೆ.

“ಎಲ್ಲಾ ನಾಲ್ಕು ಚಾರ್ ಧಾಮ್ ದೇಗುಲಗಳಲ್ಲಿ ಮತ್ತು ಅವರಿಗೆ ಸಂಯೋಜಿತವಾಗಿರುವ ದೇವಾಲಯಗಳಲ್ಲಿ ತೀರ್ಥಯಾತ್ರೆ ಪುರೋಹಿತರು ಮಾತ್ರ ತಮ್ಮ ಹಕ್ಕನ್ನು ಹೊಂದಿದ್ದಾರೆ. ಸರ್ಕಾರ ಕಾನೂನು ರೂಪಿಸುವ ಮುನ್ನ ಅವರ ಸಲಹೆ ಕೇಳಬೇಕಿತ್ತು. ಆದರೆ ಕೇಳಲಿಲ್ಲ. ಚಾರ್ ಧಾಮ್ ಅರ್ಚಕರ ಭೂಮಿ ಹಕ್ಕನ್ನು ಕಸಿದುಕೊಂಡು ಅವರ ಆಸ್ತಿಯನ್ನು ದೇವಸ್ಥಾನಂ. ಮಂಡಳಿಯ ಸ್ವಾಧೀನದಲ್ಲಿಡಲು ಉದ್ದೇಶಿಸಲಾಗಿದೆ” ಎಂದು ಗಂಗೋತ್ರಿ ದೇವಸ್ಥಾನ ಸಮಿತಿಯ ವಕ್ತಾರ ರಜನಿಕಾಂತ್ ಸೆಮ್ವಾಲ್ ಹೇಳಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...