Homeಮುಖಪುಟಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಪ್ರಧಾನಿ ಮೋದಿಯವರು ನವೆಂಬರ್‌ 5ರಂದು ಉತ್ತರಖಾಂಡ್‌ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕೇದಾರನಾಥ ದೇವಾಲಯ ಪುರೋಹಿತರ ಪ್ರತಿಭಟನೆಯ ಬಿಸಿಯನ್ನು ಎದುರಿಸಬೇಕಾಗಿದೆ.

- Advertisement -
- Advertisement -

ನವೆಂಬರ್‌ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಕೇದಾರನಾಥಕ್ಕೆ ಭೇಟಿ ನೀಡಲಿದ್ದು, ಪ್ರಧಾನಿಯವರನ್ನು ಭೇಟಿ ಮಾಡಲು ಅವಕಾಶ ನೀಡದಿದ್ದರೆ ವೇದಿಕೆ ಪ್ರತಿಭಟನೆ ಮಾಡಲಾಗುವುದು ಎಂದು ತೀರ್ಥ ಪುರೋಹಿತರು (ಯಾತ್ರಾ ಪುರೋಹಿತರು) ಎಚ್ಚರಿಸಿದ್ದಾರೆ.

ಉತ್ತರಖಾಂಡ್‌ ಚಾರ್ ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ಬೋರ್ಡ್‌ ರಚಿಸಿ ಅದರ ಅಡಿಯಲ್ಲಿ ದೇವಾಲಯಗಳನ್ನು ಹಿಡಿತಕ್ಕೆ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿ, ಪ್ರಧಾನಿಯವರ ಭೇಟಿಯನ್ನು ಬಹಿಷ್ಕರಿಸಲು ಪುರೋಹಿತರು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿಯವರು ಅಂದು ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಭೆ ಅನಾವರಣ ಮಾಡಲಿದ್ದಾರೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಗಳಿಗೆ ಚಾಲನೆ ನೀಡಲಿದ್ದಾರೆ.

“ಚಾರ್‌ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ರದ್ದುಗೊಳಿಸಲು ಆಗ್ರಹಿಸಿ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲು ಪದೇ ಪದೇ ಕೋರಲಾಗುತ್ತಿದೆ. ಆದರೆ ಅದಕ್ಕೆ ಮೋದಿಯವರು ಅವಕಾಶ ನೀಡುತ್ತಿಲ್ಲ” ಎಂದು ಪುರೋಹಿತರು ಬೇಸರ ವ್ಯಕ್ತಪಡಿಸಿದ್ದಾರೆ.

ಚಾರ್‌ಧಾಮ್‌ ಕಾಯಿದೆಯು ನಮ್ಮ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ, ಮಂಡಳಿಯ ವ್ಯಾಪ್ತಿಯಲ್ಲಿರುವ ದೇವಾಲಯದ ಆವರಣಗಳಲ್ಲಿನ ನಮ್ಮ ಆಸ್ತಿಗಳ ಮಾಲೀಕತ್ವವನ್ನು ಕಸಿದುಕೊಂಡಿದೆ. ಹೀಗಾಗಿ ಮೋದಿ ವಿರುದ್ಧ ನಮ್ಮ ದನಿಯನ್ನು ಎತ್ತಿದ್ದೇವೆ ಎಂದು ಬದ್ರಿನಾಥದ ಪುರೋಹಿತ ಹಾಗೂ ಚಾರ್‌ಧಾಮ್‌ ತೀರ್ಥ ಪುರೋಹಿತ್‌ ಹಕ್‌ಹುತುಕ್‌ ಮಹಾ ಪಂಚಾಯತ್‌‌ ಅಧ್ಯಕ್ಷ ಕೆ.ಕೆ.ಕೋಟಿಯಾಲ್‌‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

“ಪ್ರಧಾನಿ ಭೇಟಿಗೆ ಮುನ್ನ ರಾಜ್ಯ ಸರ್ಕಾರವು ಬೋರ್ಡ್ ಅನ್ನು ರದ್ದುಪಡಿಸುತ್ತದೆ ಎಂದು ಚಾರ್ ಧಾಮ್ ತೀರ್ಥ ಪುರೋಹಿತರು ನಂಬಿದ್ದೇವೆ. ಇಲ್ಲದಿದ್ದರೆ ನಾವು ಕೇದಾರನಾಥದಲ್ಲಿ ಪ್ರತಿಭಟನೆಗೆ ಸಿದ್ಧರಿದ್ದೇವೆ” ಎಂದು ಕೋಟಿಯಾಲ್‌ ಎಚ್ಚರಿಕೆ ನೀಡಿದ್ದಾರೆ.

“ಪ್ರತಿಭಟನೆ ಕೇವಲ ಘೋಷಣೆಗಳಿಗೆ ಸೀಮಿತವಾಗುವುದಿಲ್ಲ, ಪ್ರಧಾನಿ ಲ್ಯಾಡ್‌ ಆಗಲು ಬಿಡುವುದಿಲ್ಲ. ನಾವು ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ. ಅವರ ಭೇಟಿಯನ್ನು ವಿರೋಧಿಸಿ ಕಪ್ಪು ಬಾವುಟ ತೋರಿಸಿ ಬಂದ್‌ಗೆ ಕರೆ ನೀಡುತ್ತೇವೆ” ಎಂದು ಸ್ಥಳೀಯ ಪುರೋಹಿತರ ಸಂಘವಾಗಿರುವ ಕೇದಾರನಾಥ ಸಭಾದ ಅಧ್ಯಕ್ಷ ವಿನೋದ್ ಶುಕ್ಲಾ ಹೇಳಿದ್ದಾರೆ.

ಅಕ್ಟೋಬರ್ 11ರ ಸಭೆಯ ನಂತರ ಬೋರ್ಡ್ ಅನ್ನು ರದ್ದುಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೀಡಿದ್ದರು. ಅಕ್ಟೋಬರ್ 30ರವರೆಗೆ ಪ್ರತಿಭಟನೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ನವೆಂಬರ್ 1ರಿಂದ ನಾವು ನಮ್ಮ ಪ್ರತಿಭಟನೆಯನ್ನು ಪುನಾರಂಭಿಸುತ್ತಿದ್ದೇವೆ” ಎಂದಿದ್ದಾರೆ ಶುಕ್ಲಾ.

ಮತ್ತೊಬ್ಬ ಅರ್ಚಕ, ಚಾರ್ ಧಾಮ್ ಮಹಾ ಪಂಚಾಯತ್‌ನ ಸಂಚಾಲಕ ಮತ್ತು ಗಂಗೋತ್ರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುರೇಶ್ ಸೆಂವಾಲ್ ಪ್ರತಿಕ್ರಿಯಿಸಿ, “ಚಾರ್ ಧಾಮ್ ದೇವಾಸ್ಥಾನಂ ಆಡಳಿತ ಮಂಡಳಿ ಕಾಯಿದೆಯು ಒಂದು ಕರಾಳ ಕಾನೂನು” ಎಂದಿದ್ದಾರೆ.

ಇದನ್ನೂ ಓದಿರಿ: ಸತತ ನಾಲ್ಕನೇ ದಿನವೂ ಪೆಟ್ರೊಲ್‌, ಡೀಸೆಲ್‌ ಬೆಲೆ ಏರಿಕೆ

“ಚಾರ್ ಧಾಮ್ ದೇವಾಲಯಗಳ ಪುರೋಹಿತರು ಕೇದಾರನಾಥದಲ್ಲಿ ಪ್ರಧಾನಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇತರ ಧರ್ಮಗಳಿಗೆ ಕಾನೂನು ಇಲ್ಲದಿರುವಾಗ ಕೇವಲ ಹಿಂದೂ ದೇವಾಲಯಗಳ ಮೇಲೆ ಸರ್ಕಾರ ಏಕೆ ಹೀಗೆ ಮಾಡುತ್ತಿದೆ? ಅವರು ತಮ್ಮ ವ್ಯಾಪ್ತಿಯಲ್ಲಿರುವ ಯಾವುದೇ ಮಸೀದಿ ಅಥವಾ ಚರ್ಚ್‌ಗಳನ್ನು ತೆಗೆದುಕೊಂಡಿಲ್ಲ” ಎಂದು ಸುರೇಶ್ ಸೆಂವಾಲ್‌ ಹೇಳಿದ್ದಾರೆ.

ಏನಿದು ವಿವಾದ?

2019ರ ಡಿಸೆಂಬರ್‌ನಲ್ಲಿ ಉತ್ತರಖಾಂಡ್‌ ಸರ್ಕಾರವು ಉತ್ತರ ಖಾಂಡ್‌ ಚಾರ್‌ ಧಮ್‌ ಶ್ರೈನ್‌ ಮ್ಯಾನೇಜ್‌ಮೆಂಟ್ ಮಸೂದೆಯನ್ನು ಮಂಡಿಸಿತು. ಈ ಮಸೂದೆಯು ಶಾಸನ ಸಭೆಯಲ್ಲಿ ಅಂಗೀಕಾರವಾಗಿ ಉತ್ತರಖಾಂಡ್‌ ಚಾರ್‌ ಧಮ್‌ ದೇವಸ್ಥಾನಮ್‌‌ ಮ್ಯಾನೇಜ್‌ಮೆಂಟ್‌ ಆಕ್ಟ್‌- 2019 ಜಾರಿಗೊಳಿಸಿ, 2020 ಜನವರಿ 15ರಂದು ಗೆಜೆಟ್‌ ನೋಟಿಫಿಕೇಷನ್‌ ಕೂಡ ಮಾಡಲಾಯಿತು.

ಈ ಬೋರ್ಡ್‌‌ನಲ್ಲಿ ಮುಖ್ಯಮಂತ್ರಿ ಅಧ್ಯಕ್ಷರಾಗಿರುತ್ತಾರೆ. ರಾಜ್ಯದ ಸಂಸ್ಕೃತಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಇತರ ಪದಾಧಿಕಾರಿಗಳೊಂದಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಈ ಮಂಡಲಿ ರಚನೆಯಾದಾಗಿನಿಂದಲೂ ಪುರೋಹಿತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬದ್ರಿ ಕೇದಾರನಾಥ ದೇವಾಲಯ ಸಮಿತಿ ಮುಖ್ಯಸ್ಥ ಮನೋಹರ್ ಕಾಂತ್ ಧ್ಯಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಳೆದ ಜುಲೈನಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಅಕ್ಟೋಬರ್ 25ರಂದು ಧ್ಯಾನಿ ಸಮಿತಿಯು ಮಧ್ಯಂತರ ವರದಿಯನ್ನು ಸಿಎಂಗೆ ಸಲ್ಲಿಸಿತು.

ಪ್ರಸ್ತುತ, ಉತ್ತರಾಖಂಡ್ ಚಾರ್ ಧಾಮ್ ದೇವಸ್ತಾನಂ ಮಂಡಳಿಯು ರಾಜ್ಯದ 51 ದೇವಾಲಯಗಳ ವ್ಯವಹಾರಗಳನ್ನು ನಿರ್ವಹಿಸುವ ನಿಯಂತ್ರಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಇವುಗಳಲ್ಲಿ ಗಂಗೋತ್ರಿ, ಯಮುನೋತ್ರಿ, ಬದರಿನಾಥ, ಕೇದಾರನಾಥ ಮತ್ತು 47 ಇತರ ದೇವಾಲಯಗಳು ಸೇರಿವೆ.

ಎಲ್ಲಾ ಚಾರ್ ಧಾಮ್ ದೇಗುಲಗಳು ಮತ್ತು ಅವುಗಳ ಸಂಯೋಜಿತ ದೇವಾಲಯಗಳ ಅರ್ಚಕರು, ಪುರೋಹಿತರು ಅತಿದೊಡ್ಡ ಮಧ್ಯಸ್ಥಗಾರರಾಗಿದ್ದಾರೆ. ಆದರೆ ದೇವಸ್ಥಾನಂ ಬೋರ್ಡ್ ಕಾನೂನನ್ನು ರೂಪಿಸುವ ಮೊದಲು ಉತ್ತರಾಖಂಡ ಸರ್ಕಾರವು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಪುರೋಹಿತರು ಆರೋಪಿಸಿದ್ದಾರೆ.

“ಎಲ್ಲಾ ನಾಲ್ಕು ಚಾರ್ ಧಾಮ್ ದೇಗುಲಗಳಲ್ಲಿ ಮತ್ತು ಅವರಿಗೆ ಸಂಯೋಜಿತವಾಗಿರುವ ದೇವಾಲಯಗಳಲ್ಲಿ ತೀರ್ಥಯಾತ್ರೆ ಪುರೋಹಿತರು ಮಾತ್ರ ತಮ್ಮ ಹಕ್ಕನ್ನು ಹೊಂದಿದ್ದಾರೆ. ಸರ್ಕಾರ ಕಾನೂನು ರೂಪಿಸುವ ಮುನ್ನ ಅವರ ಸಲಹೆ ಕೇಳಬೇಕಿತ್ತು. ಆದರೆ ಕೇಳಲಿಲ್ಲ. ಚಾರ್ ಧಾಮ್ ಅರ್ಚಕರ ಭೂಮಿ ಹಕ್ಕನ್ನು ಕಸಿದುಕೊಂಡು ಅವರ ಆಸ್ತಿಯನ್ನು ದೇವಸ್ಥಾನಂ. ಮಂಡಳಿಯ ಸ್ವಾಧೀನದಲ್ಲಿಡಲು ಉದ್ದೇಶಿಸಲಾಗಿದೆ” ಎಂದು ಗಂಗೋತ್ರಿ ದೇವಸ್ಥಾನ ಸಮಿತಿಯ ವಕ್ತಾರ ರಜನಿಕಾಂತ್ ಸೆಮ್ವಾಲ್ ಹೇಳಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...