Homeಮುಖಪುಟ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

#spinelessmodi ಮತ್ತು #DiaperSuryaExposed ಹ್ಯಾಶ್‌‌ಟ್ಯಾಗ್‌ಗಳ ಜೊತೆಗೆ #TejasviSuryaExposed, #ArrestBJPMLASatish , #BBMP_MustApologise ಮುಂತಾದ ಹ್ಯಾಶ್‌ಟ್ಯಾಗ್‌ಗಳೂ ಟ್ರೆಂಡ್ ಆಗಿದೆ.

- Advertisement -
- Advertisement -

ದೇಶದಲ್ಲಿರುವ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಅತೀ ದೊಡ್ಡ ಐಟಿಸೆಲ್ ನೆಟ್‌ವರ್ಕ್ ಬಿಜೆಪಿಗಿದೆ. ಇದಾಗಿಯೂ ಕಳೆದೊಂದು ದಿನದಿಂದ ನೆಟ್ಟಿಗರು ಬಿಜೆಪಿ ವಿರುದ್ದ ಮುಗಿಬಿದ್ದಿದ್ದಾರೆ. #spinelessmodi , #TejasviSuryaExposed , #DiaperSuryaExposed , #ArrestBJPMLASatish , #BBMP_MustApologise ಎಂಬ ಹ್ಯಾಶ್ ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆ ಸರಿಯಾದ ಆರೋಗ್ಯ ಸೌಲಭ್ಯ ಸಿಗದೆ ಜನರು ಬೀದಿ ಬೀದಿಗಳಲ್ಲಿ ನರಳಾಡುತ್ತಿರುವುದು ವರದಿಯಾಗಿದೆ. ಆಡಳಿತ ಪಕ್ಷವಾದ ಬಿಜೆಪಿಯು ಸೋಂಕನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದ್ದಿದ್ದು ಸಾಮಾನ್ಯ ಜನರ ನಡುವೆ ಅಸಹನೆ ಹಚ್ಚುತ್ತಿದೆ. ಇದರಿಂದಾಗಿ ಜನರು ತಮ್ಮ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಜನರು ತಮ್ಮ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿರುವುದರಿಂದ ಮುಜುಗರಕ್ಕೀಡಾಗಿದ್ದ ಯುಪಿ ಸರ್ಕಾರವು, ಸಮಸ್ಯೆ ಬರೆದ ಯುವಕನ ಮೇಲೆ ಎಫ್‌ಐಆರ್‌ ದಾಖಲು ಮಾಡಿ ಎಚ್ಚರಿಕೆ ಕೂಡಾ ರವಾನಿಸಿತ್ತು. ಆದರೆ ಸುಪ್ರೀಂಕೋರ್ಟ್ ಅದರ ವಿರುದ್ದ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದು, ಸಮಸ್ಯೆ ಬರೆಯುವವರಿಗೆ ತೊಂದರೆ ಮಾಡದಂತೆ ಹೇಳಿತ್ತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ಕೊರೊನಾ ಎರಡನೆ ಅಲೆ ಬರಲಿದೆ ಎಂದು ಹಲವಾರು ತಜ್ಞರು ಈ ಮೊದಲೆ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮುಳುಗಿತ್ತು. ಇದೀಗ ದೇಶದಾದ್ಯಂತ ಜನರು ತೀವ್ರ ಸಂಕಷ್ಟದಲ್ಲಿದ್ದು ಪ್ರಧಾನಿ ಮೋದಿಯ ನಿಷ್ಕ್ರೀಯತೆಯನ್ನು ಪ್ರಶ್ನಿಸಿದ್ದು, ‘ಬೆನ್ನೆಲುಬಿಲ್ಲದ ಮೋದಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾರಮ್ ರಾಜು ಅವರು, “ಮೋದಿಗೆ ಯಾಕೆ ‘ಬೆನ್ನೆಲುಬಿಲ್ಲ’ ಎಂದರೆ, ಕೊರೊನಾವನ್ನು ಅವರು ಸರಿಯಾಗಿ ನಿರ್ವಹಣೆ ಮಾಡದೆ ಸಾವಿರಾರು ಜನರು ಆಮ್ಲಜನಕ, ಔಷಧಿ ಮತ್ತು ಇತರ ಆರೋಗ್ಯ ಸೌಲಭ್ಯದ ಕೊರತೆಯಿಂದಾಗಿ ಸಾಯುತ್ತಿದ್ದಾರೆ. ಆದರೆ ಅವರು ತಮ್ಮ ಹೊಸ ಮನೆ, ಸೆಂಟ್ರಲ್ ವಿಸ್ಟಾಕ್ಕಾಗಿ ಸಾವಿರಾರು ಕೋಟಿಗಳನ್ನು ಖರ್ಚು ಮಾಡುತ್ತಿದ್ದಾರೆ. ಶೇಮ್‌’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಸಯಿದ್ ಜಿಬ್ರಾನ್ ಅವರು, “ನಾನು ಮೋದಿಗೆ ಬೆಂಬಲಿಸುತ್ತೇನೆ, ಯಾಕೆಂದರೆ ಅವರು ಅವರದೇ ಜನರನ್ನು ಕೊಲ್ಲುತ್ತಿದ್ದಾರೆ. ಒಂದು ಕ್ಷಣ ಯುಪಿಯಲ್ಲಿ ಮೃತಪಟ್ಟ ಜನರನ್ನು ನೋಡಿ. ಹಾಗೆ ಹೋಗುತ್ತಿರಿ ಮೋದಿ” ಎಂದು ಕಾರ್ಟೂನ್ ಒಂದರ ಚಿತ್ರವನ್ನು ಟ್ವೀಟ್ ಮಾಡಿ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬೆಂಗಳೂರು ‘ಬೆಡ್‌ಬ್ಲಾಕ್‌’ ಪ್ರಕರಣದಲ್ಲಿ ಅನಾವಶ್ಯಕವಾಗಿ ಮುಸ್ಲಿಮರ ಹೆಸರನ್ನು ಮುನ್ನಲೆಗೆ ತಂದು ಕೋಮುವಾದಿಕರಣ ಮಾಡುವ ಪ್ರಯತ್ನಪಟ್ಟ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರ ರಾಜೀನಾಮೆ ಕೇಳಿ #TejasviSuryaExposed, #DiaperSuryaExposed, ಕೂಡಾ ಟ್ರೆಂಡ್ ಆಗುತ್ತಿದೆ.

ಅವರು ಸ್ವತಃ ಬೆಡ್‌ಬ್ಲಾಕ್‌ ದಂಧೆಯ ಪ್ರಮುಖ ಆರೋಪಿಯೆಂದು ‘ವಿಜಯ ಕರ್ನಾಟಕ’ ವರದಿಯಲ್ಲಿ ಹೇಳಲಾಗಿರುವ ಆರೋಪಿ ಶಾಸಕ ಸತೀಶ್ ರೆಡ್ಡಿ ಅವರೊಂದಿಗೆ ಬೆಂಗಳೂರಿನ ವಾರ್‌ರೂಂ ಒಂದಕ್ಕೆ ದಾಳಿ ಮಾಡಿದ್ದರು. ಅಲ್ಲಿ ಅವರು ಹಗರಣದ ದಾರಿ ತಪ್ಪಿಸಲು ಬೇಕಾಗಿ ಹಗರಣಕ್ಕೆ ಕೋಮು ಬಣ್ಣ ಹಚ್ಚಿದ್ದರು. ಇದರಿಂದಾಗಿ ಬಿಬಿಎಂಪಿ 17 ಜನ ಸಿಬ್ಬಂದಿಯನ್ನು ‘ಮುಸ್ಲಿಂ’ ಎಂಬ ಕಾರಣಕ್ಕೆ ಕೆಲಸದಿಂದ ವಜಾ ಮಾಡಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಇದರ ವಿರುದ್ದ ಕೂಡಾ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಬಿಬಿಎಂಪಿ ಈ ಪ್ರಕರಣದಲ್ಲಿ ಕ್ಷಮೆ ಕೇಳಬೇಕು ಎಂದು #BBMP_MustApologise ಆಗ್ರಹಿಸಿದ್ದಾರೆ. ಜೊತೆಗೆ ಬೆಡ್‌ಬ್ಲಾಕ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಶಾಸಕ ಸತೀಶ್ ರೆಡ್ಡಿಯನ್ನು ಬಂಧಿಸಬೇಕು #ArrestBJPMLASatish ಎಂದು ಕೂಡಾ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಡಾ. ರಿಹಾನ ಅವರು, “ತೇಜಸ್ವಿ ಸೂರ್ಯ ನಿಮ್ಮ ಆಪ್ತ ಸತೀಶ್ ರೆಡ್ಡಿ ಈ ಇಡೀ ಬೆಡ್‌ಸ್ಕ್ಯಾಮ್‌ನ ಹಿಂದೆ ಇದ್ದಾರೆ. ಅಮಾಯಕರನ್ನು ದೂಷಿಸಿರುವ ನೀವು, ಆದ ಪ್ರಮಾದಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಬಿಬಿಎಂಪಿ ಕೂಡಾ ಬಿಜೆಪಿ ಗೂಂಡಾಗಳ ಅಣತಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು” ಎಂದು ಆಕ್ರಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ‘ಸರಕಾರಾತ್ಮಕ’ ಆಗಿಯಲ್ಲ

ಇಮ್ರಾನ್‌ ಖಾನ್ ಅವರು, “ತೇಜಸ್ವಿ ಸೂರ್ಯ ಅವರು ಕೋಮುವಾದಿ ಭಯೋತ್ಪಾದಕ. ಬಿಬಿಎಂಪಿ ಕಮಿಷನರ್‌ ಅವರನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಯಶ್ವಂತ್ ನೇತಾಜಿ ಅವರು, “ತೇಜಸ್ವಿ ಸೂರ್ಯ ಬಿಜೆಪಿಯ ಕೋಮುವಾದಿ ಏಜೆಂಟ್” ಎಂದು ಕೊರೊನಾಗಿಂತ ಅಪಾಯಕಾರಿ ಎಂದು ಬರೆದಿರುವ ತೇಜಸ್ವಿ ಸೂರ್ಯ ಚಿತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು : ಸಿಎಂ ಸಿದ್ದರಾಮಯ್ಯ

ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ...

ವೆನೆಜುವೆಲಾ ಮೇಲೆ ಅಮೆರಿಕ ದಾಳಿಗೆ ಖಂಡನೆ : ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಭಾರತದ ಎಡಪಕ್ಷಗಳು

ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ಆಕ್ರಮಣವನ್ನು ಭಾರತದ ಎಡಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಬಂಧನವನ್ನು ‘ಅಪಹರಣ’ ಎಂದು ಹೇಳಿದೆ. ಹಾಗೆಯೇ, ಅಮೆರಿಕದ...

ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವು: ವರದಿ

ಶನಿವಾರ ನಡೆದ ದಾಳಿಯಲ್ಲಿ ವೆನೆಜುವೆಲಾದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನೆಜುವೆಲಾದ ಹಿರಿಯ ಅಧಿಕಾರಿಯೊಬ್ಬರು ನ್ಯೂಯಾರ್ಕ್ ಟೈಮ್ಸ್‌ಗೆ ತಿಳಿಸಿದ್ದಾರೆ, ಅವರಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ನಾಗರಿಕರು ಸೇರಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ...

ಅತ್ಯಾಚಾರ-ಕೊಲೆ ಅಪರಾಧಿ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ 40 ದಿನಗಳ ಪೆರೋಲ್

ಇಬ್ಬರು ಸಾಧ್ವಿಯರ ಮೇಲಿನ ಅತ್ಯಾಚಾರ ಮತ್ತು ಪತ್ರಕರ್ತನ ಹತ್ಯೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಮತ್ತೊಮ್ಮೆ 40 ದಿನಗಳ ಪೆರೋಲ್ ಮಂಜೂರಾಗಿದೆ....

ವೆನೆಜುವೆಲಾ ಮೇಲೆ ಅಮೆರಿಕಾ ದಾಳಿ: ಕಳವಳ ವ್ಯಕ್ತಪಡಿಸಿದ ಭಾರತ: ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಕರೆ

ನವದೆಹಲಿ: ಅಮೆರಿಕವು ತೈಲ ಸಮೃದ್ಧ ದೇಶದ ಮೇಲೆ ದಾಳಿ ಮಾಡಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಮಿಲಿಟರಿ ಕಾರ್ಯಾಚರಣೆಯಲ್ಲಿ ಅಪಹರಿಸಿದ ನಂತರ, ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು "ತೀವ್ರ ಕಳವಳಕಾರಿ...

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್...

ರ‍್ಯಾಗಿಂಗ್‌ಗೆ ದಲಿತ ವಿದ್ಯಾರ್ಥಿನಿ ಬಲಿ: ‘ಜಾತಿ ಮತ್ತು ಲಿಂಗ ಆಧಾರಿತ ಸಾಂಸ್ಥಿಕ ಹಿಂಸಾಚಾರದ ಗಂಭೀರ ನಿದರ್ಶನ’ ಎಂದ ಮಾನವ ಹಕ್ಕುಗಳ ಸಂಘಟನೆ

ಹಿಮಾಚಲ ಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ 19 ವರ್ಷದ ದಲಿತ ವಿದ್ಯಾರ್ಥಿನಿಯ ಸಾವಿನ ನಂತರ, ದಲಿತ ಹಕ್ಕುಗಳ ಸಂಘಟನೆಗಳು ಶುಕ್ರವಾರ ಮೂವರು ಹಿರಿಯ ವಿದ್ಯಾರ್ಥಿಗಳು ಮತ್ತು ಕಾಲೇಜು ಪ್ರಾಧ್ಯಾಪಕರನ್ನು ಬಂಧಿಸಬೇಕು ಮತ್ತು ಅಧಿಕಾರಿಗಳು ಅದಕ್ಕೆ...

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ಗಾಝಾ ಮೇಲೆ ವಿಧಿಸಲಾಗಿದ್ದ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸಿದ ಫ್ಲೋಟಿಲ್ಲಾ ಹಡಗುಗಳನ್ನು ತಡೆದ ನಂತರ, ಅವುಗಳಲ್ಲಿದ್ದ ಜಗತ್ತಿನ ವಿವಿಧ ಭಾಗಗಳ ಹಲವು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿದೆ. ಈ ಬಂಧಿತರ ಮೇಲೆ ಇಸ್ರೇಲಿ...

‘ನನಗೆ, ನನ್ನ ಕುಟುಂಬಕ್ಕೆ ‘ಝಡ್‌’ ಶ್ರೇಣಿ ಭದ್ರತೆ ಒದಗಿಸಿ’: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನಾರ್ದನ ರೆಡ್ಡಿ ಪತ್ರ 

ಕೊಪ್ಪಳ: ಬಳ್ಳಾರಿಯಲ್ಲಿ ತಮ್ಮ ಮೇಲೆ "ಪೂರ್ವ ಯೋಜಿತ ಹತ್ಯೆ ಯತ್ನ" ನಡೆದಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಗೃಹ ಸಚಿವ...

ಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

​ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವೊಂದನ್ನು ದಾಖಲಿಸುವ ವೇಳೆ ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ, ಪೊಲೀಸರು ತಮಗೆ ಇಷ್ಟ ಬಂದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ...