Homeಮುಖಪುಟ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

#spinelessmodi ಮತ್ತು #DiaperSuryaExposed ಹ್ಯಾಶ್‌‌ಟ್ಯಾಗ್‌ಗಳ ಜೊತೆಗೆ #TejasviSuryaExposed, #ArrestBJPMLASatish , #BBMP_MustApologise ಮುಂತಾದ ಹ್ಯಾಶ್‌ಟ್ಯಾಗ್‌ಗಳೂ ಟ್ರೆಂಡ್ ಆಗಿದೆ.

- Advertisement -
- Advertisement -

ದೇಶದಲ್ಲಿರುವ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಅತೀ ದೊಡ್ಡ ಐಟಿಸೆಲ್ ನೆಟ್‌ವರ್ಕ್ ಬಿಜೆಪಿಗಿದೆ. ಇದಾಗಿಯೂ ಕಳೆದೊಂದು ದಿನದಿಂದ ನೆಟ್ಟಿಗರು ಬಿಜೆಪಿ ವಿರುದ್ದ ಮುಗಿಬಿದ್ದಿದ್ದಾರೆ. #spinelessmodi , #TejasviSuryaExposed , #DiaperSuryaExposed , #ArrestBJPMLASatish , #BBMP_MustApologise ಎಂಬ ಹ್ಯಾಶ್ ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆ ಸರಿಯಾದ ಆರೋಗ್ಯ ಸೌಲಭ್ಯ ಸಿಗದೆ ಜನರು ಬೀದಿ ಬೀದಿಗಳಲ್ಲಿ ನರಳಾಡುತ್ತಿರುವುದು ವರದಿಯಾಗಿದೆ. ಆಡಳಿತ ಪಕ್ಷವಾದ ಬಿಜೆಪಿಯು ಸೋಂಕನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದ್ದಿದ್ದು ಸಾಮಾನ್ಯ ಜನರ ನಡುವೆ ಅಸಹನೆ ಹಚ್ಚುತ್ತಿದೆ. ಇದರಿಂದಾಗಿ ಜನರು ತಮ್ಮ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಜನರು ತಮ್ಮ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿರುವುದರಿಂದ ಮುಜುಗರಕ್ಕೀಡಾಗಿದ್ದ ಯುಪಿ ಸರ್ಕಾರವು, ಸಮಸ್ಯೆ ಬರೆದ ಯುವಕನ ಮೇಲೆ ಎಫ್‌ಐಆರ್‌ ದಾಖಲು ಮಾಡಿ ಎಚ್ಚರಿಕೆ ಕೂಡಾ ರವಾನಿಸಿತ್ತು. ಆದರೆ ಸುಪ್ರೀಂಕೋರ್ಟ್ ಅದರ ವಿರುದ್ದ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದು, ಸಮಸ್ಯೆ ಬರೆಯುವವರಿಗೆ ತೊಂದರೆ ಮಾಡದಂತೆ ಹೇಳಿತ್ತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ಕೊರೊನಾ ಎರಡನೆ ಅಲೆ ಬರಲಿದೆ ಎಂದು ಹಲವಾರು ತಜ್ಞರು ಈ ಮೊದಲೆ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮುಳುಗಿತ್ತು. ಇದೀಗ ದೇಶದಾದ್ಯಂತ ಜನರು ತೀವ್ರ ಸಂಕಷ್ಟದಲ್ಲಿದ್ದು ಪ್ರಧಾನಿ ಮೋದಿಯ ನಿಷ್ಕ್ರೀಯತೆಯನ್ನು ಪ್ರಶ್ನಿಸಿದ್ದು, ‘ಬೆನ್ನೆಲುಬಿಲ್ಲದ ಮೋದಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾರಮ್ ರಾಜು ಅವರು, “ಮೋದಿಗೆ ಯಾಕೆ ‘ಬೆನ್ನೆಲುಬಿಲ್ಲ’ ಎಂದರೆ, ಕೊರೊನಾವನ್ನು ಅವರು ಸರಿಯಾಗಿ ನಿರ್ವಹಣೆ ಮಾಡದೆ ಸಾವಿರಾರು ಜನರು ಆಮ್ಲಜನಕ, ಔಷಧಿ ಮತ್ತು ಇತರ ಆರೋಗ್ಯ ಸೌಲಭ್ಯದ ಕೊರತೆಯಿಂದಾಗಿ ಸಾಯುತ್ತಿದ್ದಾರೆ. ಆದರೆ ಅವರು ತಮ್ಮ ಹೊಸ ಮನೆ, ಸೆಂಟ್ರಲ್ ವಿಸ್ಟಾಕ್ಕಾಗಿ ಸಾವಿರಾರು ಕೋಟಿಗಳನ್ನು ಖರ್ಚು ಮಾಡುತ್ತಿದ್ದಾರೆ. ಶೇಮ್‌’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಸಯಿದ್ ಜಿಬ್ರಾನ್ ಅವರು, “ನಾನು ಮೋದಿಗೆ ಬೆಂಬಲಿಸುತ್ತೇನೆ, ಯಾಕೆಂದರೆ ಅವರು ಅವರದೇ ಜನರನ್ನು ಕೊಲ್ಲುತ್ತಿದ್ದಾರೆ. ಒಂದು ಕ್ಷಣ ಯುಪಿಯಲ್ಲಿ ಮೃತಪಟ್ಟ ಜನರನ್ನು ನೋಡಿ. ಹಾಗೆ ಹೋಗುತ್ತಿರಿ ಮೋದಿ” ಎಂದು ಕಾರ್ಟೂನ್ ಒಂದರ ಚಿತ್ರವನ್ನು ಟ್ವೀಟ್ ಮಾಡಿ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬೆಂಗಳೂರು ‘ಬೆಡ್‌ಬ್ಲಾಕ್‌’ ಪ್ರಕರಣದಲ್ಲಿ ಅನಾವಶ್ಯಕವಾಗಿ ಮುಸ್ಲಿಮರ ಹೆಸರನ್ನು ಮುನ್ನಲೆಗೆ ತಂದು ಕೋಮುವಾದಿಕರಣ ಮಾಡುವ ಪ್ರಯತ್ನಪಟ್ಟ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರ ರಾಜೀನಾಮೆ ಕೇಳಿ #TejasviSuryaExposed, #DiaperSuryaExposed, ಕೂಡಾ ಟ್ರೆಂಡ್ ಆಗುತ್ತಿದೆ.

ಅವರು ಸ್ವತಃ ಬೆಡ್‌ಬ್ಲಾಕ್‌ ದಂಧೆಯ ಪ್ರಮುಖ ಆರೋಪಿಯೆಂದು ‘ವಿಜಯ ಕರ್ನಾಟಕ’ ವರದಿಯಲ್ಲಿ ಹೇಳಲಾಗಿರುವ ಆರೋಪಿ ಶಾಸಕ ಸತೀಶ್ ರೆಡ್ಡಿ ಅವರೊಂದಿಗೆ ಬೆಂಗಳೂರಿನ ವಾರ್‌ರೂಂ ಒಂದಕ್ಕೆ ದಾಳಿ ಮಾಡಿದ್ದರು. ಅಲ್ಲಿ ಅವರು ಹಗರಣದ ದಾರಿ ತಪ್ಪಿಸಲು ಬೇಕಾಗಿ ಹಗರಣಕ್ಕೆ ಕೋಮು ಬಣ್ಣ ಹಚ್ಚಿದ್ದರು. ಇದರಿಂದಾಗಿ ಬಿಬಿಎಂಪಿ 17 ಜನ ಸಿಬ್ಬಂದಿಯನ್ನು ‘ಮುಸ್ಲಿಂ’ ಎಂಬ ಕಾರಣಕ್ಕೆ ಕೆಲಸದಿಂದ ವಜಾ ಮಾಡಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಇದರ ವಿರುದ್ದ ಕೂಡಾ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಬಿಬಿಎಂಪಿ ಈ ಪ್ರಕರಣದಲ್ಲಿ ಕ್ಷಮೆ ಕೇಳಬೇಕು ಎಂದು #BBMP_MustApologise ಆಗ್ರಹಿಸಿದ್ದಾರೆ. ಜೊತೆಗೆ ಬೆಡ್‌ಬ್ಲಾಕ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಶಾಸಕ ಸತೀಶ್ ರೆಡ್ಡಿಯನ್ನು ಬಂಧಿಸಬೇಕು #ArrestBJPMLASatish ಎಂದು ಕೂಡಾ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಡಾ. ರಿಹಾನ ಅವರು, “ತೇಜಸ್ವಿ ಸೂರ್ಯ ನಿಮ್ಮ ಆಪ್ತ ಸತೀಶ್ ರೆಡ್ಡಿ ಈ ಇಡೀ ಬೆಡ್‌ಸ್ಕ್ಯಾಮ್‌ನ ಹಿಂದೆ ಇದ್ದಾರೆ. ಅಮಾಯಕರನ್ನು ದೂಷಿಸಿರುವ ನೀವು, ಆದ ಪ್ರಮಾದಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಬಿಬಿಎಂಪಿ ಕೂಡಾ ಬಿಜೆಪಿ ಗೂಂಡಾಗಳ ಅಣತಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು” ಎಂದು ಆಕ್ರಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ‘ಸರಕಾರಾತ್ಮಕ’ ಆಗಿಯಲ್ಲ

ಇಮ್ರಾನ್‌ ಖಾನ್ ಅವರು, “ತೇಜಸ್ವಿ ಸೂರ್ಯ ಅವರು ಕೋಮುವಾದಿ ಭಯೋತ್ಪಾದಕ. ಬಿಬಿಎಂಪಿ ಕಮಿಷನರ್‌ ಅವರನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಯಶ್ವಂತ್ ನೇತಾಜಿ ಅವರು, “ತೇಜಸ್ವಿ ಸೂರ್ಯ ಬಿಜೆಪಿಯ ಕೋಮುವಾದಿ ಏಜೆಂಟ್” ಎಂದು ಕೊರೊನಾಗಿಂತ ಅಪಾಯಕಾರಿ ಎಂದು ಬರೆದಿರುವ ತೇಜಸ್ವಿ ಸೂರ್ಯ ಚಿತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...