Homeಮುಖಪುಟ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

#spinelessmodi ಮತ್ತು #DiaperSuryaExposed ಹ್ಯಾಶ್‌‌ಟ್ಯಾಗ್‌ಗಳ ಜೊತೆಗೆ #TejasviSuryaExposed, #ArrestBJPMLASatish , #BBMP_MustApologise ಮುಂತಾದ ಹ್ಯಾಶ್‌ಟ್ಯಾಗ್‌ಗಳೂ ಟ್ರೆಂಡ್ ಆಗಿದೆ.

- Advertisement -
- Advertisement -

ದೇಶದಲ್ಲಿರುವ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಅತೀ ದೊಡ್ಡ ಐಟಿಸೆಲ್ ನೆಟ್‌ವರ್ಕ್ ಬಿಜೆಪಿಗಿದೆ. ಇದಾಗಿಯೂ ಕಳೆದೊಂದು ದಿನದಿಂದ ನೆಟ್ಟಿಗರು ಬಿಜೆಪಿ ವಿರುದ್ದ ಮುಗಿಬಿದ್ದಿದ್ದಾರೆ. #spinelessmodi , #TejasviSuryaExposed , #DiaperSuryaExposed , #ArrestBJPMLASatish , #BBMP_MustApologise ಎಂಬ ಹ್ಯಾಶ್ ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆ ಸರಿಯಾದ ಆರೋಗ್ಯ ಸೌಲಭ್ಯ ಸಿಗದೆ ಜನರು ಬೀದಿ ಬೀದಿಗಳಲ್ಲಿ ನರಳಾಡುತ್ತಿರುವುದು ವರದಿಯಾಗಿದೆ. ಆಡಳಿತ ಪಕ್ಷವಾದ ಬಿಜೆಪಿಯು ಸೋಂಕನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದ್ದಿದ್ದು ಸಾಮಾನ್ಯ ಜನರ ನಡುವೆ ಅಸಹನೆ ಹಚ್ಚುತ್ತಿದೆ. ಇದರಿಂದಾಗಿ ಜನರು ತಮ್ಮ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಜನರು ತಮ್ಮ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿರುವುದರಿಂದ ಮುಜುಗರಕ್ಕೀಡಾಗಿದ್ದ ಯುಪಿ ಸರ್ಕಾರವು, ಸಮಸ್ಯೆ ಬರೆದ ಯುವಕನ ಮೇಲೆ ಎಫ್‌ಐಆರ್‌ ದಾಖಲು ಮಾಡಿ ಎಚ್ಚರಿಕೆ ಕೂಡಾ ರವಾನಿಸಿತ್ತು. ಆದರೆ ಸುಪ್ರೀಂಕೋರ್ಟ್ ಅದರ ವಿರುದ್ದ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದು, ಸಮಸ್ಯೆ ಬರೆಯುವವರಿಗೆ ತೊಂದರೆ ಮಾಡದಂತೆ ಹೇಳಿತ್ತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ಕೊರೊನಾ ಎರಡನೆ ಅಲೆ ಬರಲಿದೆ ಎಂದು ಹಲವಾರು ತಜ್ಞರು ಈ ಮೊದಲೆ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮುಳುಗಿತ್ತು. ಇದೀಗ ದೇಶದಾದ್ಯಂತ ಜನರು ತೀವ್ರ ಸಂಕಷ್ಟದಲ್ಲಿದ್ದು ಪ್ರಧಾನಿ ಮೋದಿಯ ನಿಷ್ಕ್ರೀಯತೆಯನ್ನು ಪ್ರಶ್ನಿಸಿದ್ದು, ‘ಬೆನ್ನೆಲುಬಿಲ್ಲದ ಮೋದಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾರಮ್ ರಾಜು ಅವರು, “ಮೋದಿಗೆ ಯಾಕೆ ‘ಬೆನ್ನೆಲುಬಿಲ್ಲ’ ಎಂದರೆ, ಕೊರೊನಾವನ್ನು ಅವರು ಸರಿಯಾಗಿ ನಿರ್ವಹಣೆ ಮಾಡದೆ ಸಾವಿರಾರು ಜನರು ಆಮ್ಲಜನಕ, ಔಷಧಿ ಮತ್ತು ಇತರ ಆರೋಗ್ಯ ಸೌಲಭ್ಯದ ಕೊರತೆಯಿಂದಾಗಿ ಸಾಯುತ್ತಿದ್ದಾರೆ. ಆದರೆ ಅವರು ತಮ್ಮ ಹೊಸ ಮನೆ, ಸೆಂಟ್ರಲ್ ವಿಸ್ಟಾಕ್ಕಾಗಿ ಸಾವಿರಾರು ಕೋಟಿಗಳನ್ನು ಖರ್ಚು ಮಾಡುತ್ತಿದ್ದಾರೆ. ಶೇಮ್‌’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಸಯಿದ್ ಜಿಬ್ರಾನ್ ಅವರು, “ನಾನು ಮೋದಿಗೆ ಬೆಂಬಲಿಸುತ್ತೇನೆ, ಯಾಕೆಂದರೆ ಅವರು ಅವರದೇ ಜನರನ್ನು ಕೊಲ್ಲುತ್ತಿದ್ದಾರೆ. ಒಂದು ಕ್ಷಣ ಯುಪಿಯಲ್ಲಿ ಮೃತಪಟ್ಟ ಜನರನ್ನು ನೋಡಿ. ಹಾಗೆ ಹೋಗುತ್ತಿರಿ ಮೋದಿ” ಎಂದು ಕಾರ್ಟೂನ್ ಒಂದರ ಚಿತ್ರವನ್ನು ಟ್ವೀಟ್ ಮಾಡಿ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬೆಂಗಳೂರು ‘ಬೆಡ್‌ಬ್ಲಾಕ್‌’ ಪ್ರಕರಣದಲ್ಲಿ ಅನಾವಶ್ಯಕವಾಗಿ ಮುಸ್ಲಿಮರ ಹೆಸರನ್ನು ಮುನ್ನಲೆಗೆ ತಂದು ಕೋಮುವಾದಿಕರಣ ಮಾಡುವ ಪ್ರಯತ್ನಪಟ್ಟ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರ ರಾಜೀನಾಮೆ ಕೇಳಿ #TejasviSuryaExposed, #DiaperSuryaExposed, ಕೂಡಾ ಟ್ರೆಂಡ್ ಆಗುತ್ತಿದೆ.

ಅವರು ಸ್ವತಃ ಬೆಡ್‌ಬ್ಲಾಕ್‌ ದಂಧೆಯ ಪ್ರಮುಖ ಆರೋಪಿಯೆಂದು ‘ವಿಜಯ ಕರ್ನಾಟಕ’ ವರದಿಯಲ್ಲಿ ಹೇಳಲಾಗಿರುವ ಆರೋಪಿ ಶಾಸಕ ಸತೀಶ್ ರೆಡ್ಡಿ ಅವರೊಂದಿಗೆ ಬೆಂಗಳೂರಿನ ವಾರ್‌ರೂಂ ಒಂದಕ್ಕೆ ದಾಳಿ ಮಾಡಿದ್ದರು. ಅಲ್ಲಿ ಅವರು ಹಗರಣದ ದಾರಿ ತಪ್ಪಿಸಲು ಬೇಕಾಗಿ ಹಗರಣಕ್ಕೆ ಕೋಮು ಬಣ್ಣ ಹಚ್ಚಿದ್ದರು. ಇದರಿಂದಾಗಿ ಬಿಬಿಎಂಪಿ 17 ಜನ ಸಿಬ್ಬಂದಿಯನ್ನು ‘ಮುಸ್ಲಿಂ’ ಎಂಬ ಕಾರಣಕ್ಕೆ ಕೆಲಸದಿಂದ ವಜಾ ಮಾಡಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಇದರ ವಿರುದ್ದ ಕೂಡಾ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಬಿಬಿಎಂಪಿ ಈ ಪ್ರಕರಣದಲ್ಲಿ ಕ್ಷಮೆ ಕೇಳಬೇಕು ಎಂದು #BBMP_MustApologise ಆಗ್ರಹಿಸಿದ್ದಾರೆ. ಜೊತೆಗೆ ಬೆಡ್‌ಬ್ಲಾಕ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಶಾಸಕ ಸತೀಶ್ ರೆಡ್ಡಿಯನ್ನು ಬಂಧಿಸಬೇಕು #ArrestBJPMLASatish ಎಂದು ಕೂಡಾ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಡಾ. ರಿಹಾನ ಅವರು, “ತೇಜಸ್ವಿ ಸೂರ್ಯ ನಿಮ್ಮ ಆಪ್ತ ಸತೀಶ್ ರೆಡ್ಡಿ ಈ ಇಡೀ ಬೆಡ್‌ಸ್ಕ್ಯಾಮ್‌ನ ಹಿಂದೆ ಇದ್ದಾರೆ. ಅಮಾಯಕರನ್ನು ದೂಷಿಸಿರುವ ನೀವು, ಆದ ಪ್ರಮಾದಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಬಿಬಿಎಂಪಿ ಕೂಡಾ ಬಿಜೆಪಿ ಗೂಂಡಾಗಳ ಅಣತಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು” ಎಂದು ಆಕ್ರಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ‘ಸರಕಾರಾತ್ಮಕ’ ಆಗಿಯಲ್ಲ

ಇಮ್ರಾನ್‌ ಖಾನ್ ಅವರು, “ತೇಜಸ್ವಿ ಸೂರ್ಯ ಅವರು ಕೋಮುವಾದಿ ಭಯೋತ್ಪಾದಕ. ಬಿಬಿಎಂಪಿ ಕಮಿಷನರ್‌ ಅವರನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಯಶ್ವಂತ್ ನೇತಾಜಿ ಅವರು, “ತೇಜಸ್ವಿ ಸೂರ್ಯ ಬಿಜೆಪಿಯ ಕೋಮುವಾದಿ ಏಜೆಂಟ್” ಎಂದು ಕೊರೊನಾಗಿಂತ ಅಪಾಯಕಾರಿ ಎಂದು ಬರೆದಿರುವ ತೇಜಸ್ವಿ ಸೂರ್ಯ ಚಿತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...