Homeಮುಖಪುಟ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

#spinelessmodi ಮತ್ತು #DiaperSuryaExposed ಹ್ಯಾಶ್‌‌ಟ್ಯಾಗ್‌ಗಳ ಜೊತೆಗೆ #TejasviSuryaExposed, #ArrestBJPMLASatish , #BBMP_MustApologise ಮುಂತಾದ ಹ್ಯಾಶ್‌ಟ್ಯಾಗ್‌ಗಳೂ ಟ್ರೆಂಡ್ ಆಗಿದೆ.

- Advertisement -
- Advertisement -

ದೇಶದಲ್ಲಿರುವ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಅತೀ ದೊಡ್ಡ ಐಟಿಸೆಲ್ ನೆಟ್‌ವರ್ಕ್ ಬಿಜೆಪಿಗಿದೆ. ಇದಾಗಿಯೂ ಕಳೆದೊಂದು ದಿನದಿಂದ ನೆಟ್ಟಿಗರು ಬಿಜೆಪಿ ವಿರುದ್ದ ಮುಗಿಬಿದ್ದಿದ್ದಾರೆ. #spinelessmodi , #TejasviSuryaExposed , #DiaperSuryaExposed , #ArrestBJPMLASatish , #BBMP_MustApologise ಎಂಬ ಹ್ಯಾಶ್ ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆ ಸರಿಯಾದ ಆರೋಗ್ಯ ಸೌಲಭ್ಯ ಸಿಗದೆ ಜನರು ಬೀದಿ ಬೀದಿಗಳಲ್ಲಿ ನರಳಾಡುತ್ತಿರುವುದು ವರದಿಯಾಗಿದೆ. ಆಡಳಿತ ಪಕ್ಷವಾದ ಬಿಜೆಪಿಯು ಸೋಂಕನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದ್ದಿದ್ದು ಸಾಮಾನ್ಯ ಜನರ ನಡುವೆ ಅಸಹನೆ ಹಚ್ಚುತ್ತಿದೆ. ಇದರಿಂದಾಗಿ ಜನರು ತಮ್ಮ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಜನರು ತಮ್ಮ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿರುವುದರಿಂದ ಮುಜುಗರಕ್ಕೀಡಾಗಿದ್ದ ಯುಪಿ ಸರ್ಕಾರವು, ಸಮಸ್ಯೆ ಬರೆದ ಯುವಕನ ಮೇಲೆ ಎಫ್‌ಐಆರ್‌ ದಾಖಲು ಮಾಡಿ ಎಚ್ಚರಿಕೆ ಕೂಡಾ ರವಾನಿಸಿತ್ತು. ಆದರೆ ಸುಪ್ರೀಂಕೋರ್ಟ್ ಅದರ ವಿರುದ್ದ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದು, ಸಮಸ್ಯೆ ಬರೆಯುವವರಿಗೆ ತೊಂದರೆ ಮಾಡದಂತೆ ಹೇಳಿತ್ತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ಕೊರೊನಾ ಎರಡನೆ ಅಲೆ ಬರಲಿದೆ ಎಂದು ಹಲವಾರು ತಜ್ಞರು ಈ ಮೊದಲೆ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮುಳುಗಿತ್ತು. ಇದೀಗ ದೇಶದಾದ್ಯಂತ ಜನರು ತೀವ್ರ ಸಂಕಷ್ಟದಲ್ಲಿದ್ದು ಪ್ರಧಾನಿ ಮೋದಿಯ ನಿಷ್ಕ್ರೀಯತೆಯನ್ನು ಪ್ರಶ್ನಿಸಿದ್ದು, ‘ಬೆನ್ನೆಲುಬಿಲ್ಲದ ಮೋದಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾರಮ್ ರಾಜು ಅವರು, “ಮೋದಿಗೆ ಯಾಕೆ ‘ಬೆನ್ನೆಲುಬಿಲ್ಲ’ ಎಂದರೆ, ಕೊರೊನಾವನ್ನು ಅವರು ಸರಿಯಾಗಿ ನಿರ್ವಹಣೆ ಮಾಡದೆ ಸಾವಿರಾರು ಜನರು ಆಮ್ಲಜನಕ, ಔಷಧಿ ಮತ್ತು ಇತರ ಆರೋಗ್ಯ ಸೌಲಭ್ಯದ ಕೊರತೆಯಿಂದಾಗಿ ಸಾಯುತ್ತಿದ್ದಾರೆ. ಆದರೆ ಅವರು ತಮ್ಮ ಹೊಸ ಮನೆ, ಸೆಂಟ್ರಲ್ ವಿಸ್ಟಾಕ್ಕಾಗಿ ಸಾವಿರಾರು ಕೋಟಿಗಳನ್ನು ಖರ್ಚು ಮಾಡುತ್ತಿದ್ದಾರೆ. ಶೇಮ್‌’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಸಯಿದ್ ಜಿಬ್ರಾನ್ ಅವರು, “ನಾನು ಮೋದಿಗೆ ಬೆಂಬಲಿಸುತ್ತೇನೆ, ಯಾಕೆಂದರೆ ಅವರು ಅವರದೇ ಜನರನ್ನು ಕೊಲ್ಲುತ್ತಿದ್ದಾರೆ. ಒಂದು ಕ್ಷಣ ಯುಪಿಯಲ್ಲಿ ಮೃತಪಟ್ಟ ಜನರನ್ನು ನೋಡಿ. ಹಾಗೆ ಹೋಗುತ್ತಿರಿ ಮೋದಿ” ಎಂದು ಕಾರ್ಟೂನ್ ಒಂದರ ಚಿತ್ರವನ್ನು ಟ್ವೀಟ್ ಮಾಡಿ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬೆಂಗಳೂರು ‘ಬೆಡ್‌ಬ್ಲಾಕ್‌’ ಪ್ರಕರಣದಲ್ಲಿ ಅನಾವಶ್ಯಕವಾಗಿ ಮುಸ್ಲಿಮರ ಹೆಸರನ್ನು ಮುನ್ನಲೆಗೆ ತಂದು ಕೋಮುವಾದಿಕರಣ ಮಾಡುವ ಪ್ರಯತ್ನಪಟ್ಟ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರ ರಾಜೀನಾಮೆ ಕೇಳಿ #TejasviSuryaExposed, #DiaperSuryaExposed, ಕೂಡಾ ಟ್ರೆಂಡ್ ಆಗುತ್ತಿದೆ.

ಅವರು ಸ್ವತಃ ಬೆಡ್‌ಬ್ಲಾಕ್‌ ದಂಧೆಯ ಪ್ರಮುಖ ಆರೋಪಿಯೆಂದು ‘ವಿಜಯ ಕರ್ನಾಟಕ’ ವರದಿಯಲ್ಲಿ ಹೇಳಲಾಗಿರುವ ಆರೋಪಿ ಶಾಸಕ ಸತೀಶ್ ರೆಡ್ಡಿ ಅವರೊಂದಿಗೆ ಬೆಂಗಳೂರಿನ ವಾರ್‌ರೂಂ ಒಂದಕ್ಕೆ ದಾಳಿ ಮಾಡಿದ್ದರು. ಅಲ್ಲಿ ಅವರು ಹಗರಣದ ದಾರಿ ತಪ್ಪಿಸಲು ಬೇಕಾಗಿ ಹಗರಣಕ್ಕೆ ಕೋಮು ಬಣ್ಣ ಹಚ್ಚಿದ್ದರು. ಇದರಿಂದಾಗಿ ಬಿಬಿಎಂಪಿ 17 ಜನ ಸಿಬ್ಬಂದಿಯನ್ನು ‘ಮುಸ್ಲಿಂ’ ಎಂಬ ಕಾರಣಕ್ಕೆ ಕೆಲಸದಿಂದ ವಜಾ ಮಾಡಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಇದರ ವಿರುದ್ದ ಕೂಡಾ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಬಿಬಿಎಂಪಿ ಈ ಪ್ರಕರಣದಲ್ಲಿ ಕ್ಷಮೆ ಕೇಳಬೇಕು ಎಂದು #BBMP_MustApologise ಆಗ್ರಹಿಸಿದ್ದಾರೆ. ಜೊತೆಗೆ ಬೆಡ್‌ಬ್ಲಾಕ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಶಾಸಕ ಸತೀಶ್ ರೆಡ್ಡಿಯನ್ನು ಬಂಧಿಸಬೇಕು #ArrestBJPMLASatish ಎಂದು ಕೂಡಾ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಡಾ. ರಿಹಾನ ಅವರು, “ತೇಜಸ್ವಿ ಸೂರ್ಯ ನಿಮ್ಮ ಆಪ್ತ ಸತೀಶ್ ರೆಡ್ಡಿ ಈ ಇಡೀ ಬೆಡ್‌ಸ್ಕ್ಯಾಮ್‌ನ ಹಿಂದೆ ಇದ್ದಾರೆ. ಅಮಾಯಕರನ್ನು ದೂಷಿಸಿರುವ ನೀವು, ಆದ ಪ್ರಮಾದಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಬಿಬಿಎಂಪಿ ಕೂಡಾ ಬಿಜೆಪಿ ಗೂಂಡಾಗಳ ಅಣತಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು” ಎಂದು ಆಕ್ರಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ‘ಸರಕಾರಾತ್ಮಕ’ ಆಗಿಯಲ್ಲ

ಇಮ್ರಾನ್‌ ಖಾನ್ ಅವರು, “ತೇಜಸ್ವಿ ಸೂರ್ಯ ಅವರು ಕೋಮುವಾದಿ ಭಯೋತ್ಪಾದಕ. ಬಿಬಿಎಂಪಿ ಕಮಿಷನರ್‌ ಅವರನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಯಶ್ವಂತ್ ನೇತಾಜಿ ಅವರು, “ತೇಜಸ್ವಿ ಸೂರ್ಯ ಬಿಜೆಪಿಯ ಕೋಮುವಾದಿ ಏಜೆಂಟ್” ಎಂದು ಕೊರೊನಾಗಿಂತ ಅಪಾಯಕಾರಿ ಎಂದು ಬರೆದಿರುವ ತೇಜಸ್ವಿ ಸೂರ್ಯ ಚಿತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...