Homeಮುಖಪುಟ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

#spinelessmodi ಮತ್ತು #DiaperSuryaExposed ಹ್ಯಾಶ್‌‌ಟ್ಯಾಗ್‌ಗಳ ಜೊತೆಗೆ #TejasviSuryaExposed, #ArrestBJPMLASatish , #BBMP_MustApologise ಮುಂತಾದ ಹ್ಯಾಶ್‌ಟ್ಯಾಗ್‌ಗಳೂ ಟ್ರೆಂಡ್ ಆಗಿದೆ.

- Advertisement -
- Advertisement -

ದೇಶದಲ್ಲಿರುವ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಅತೀ ದೊಡ್ಡ ಐಟಿಸೆಲ್ ನೆಟ್‌ವರ್ಕ್ ಬಿಜೆಪಿಗಿದೆ. ಇದಾಗಿಯೂ ಕಳೆದೊಂದು ದಿನದಿಂದ ನೆಟ್ಟಿಗರು ಬಿಜೆಪಿ ವಿರುದ್ದ ಮುಗಿಬಿದ್ದಿದ್ದಾರೆ. #spinelessmodi , #TejasviSuryaExposed , #DiaperSuryaExposed , #ArrestBJPMLASatish , #BBMP_MustApologise ಎಂಬ ಹ್ಯಾಶ್ ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆ ಸರಿಯಾದ ಆರೋಗ್ಯ ಸೌಲಭ್ಯ ಸಿಗದೆ ಜನರು ಬೀದಿ ಬೀದಿಗಳಲ್ಲಿ ನರಳಾಡುತ್ತಿರುವುದು ವರದಿಯಾಗಿದೆ. ಆಡಳಿತ ಪಕ್ಷವಾದ ಬಿಜೆಪಿಯು ಸೋಂಕನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದ್ದಿದ್ದು ಸಾಮಾನ್ಯ ಜನರ ನಡುವೆ ಅಸಹನೆ ಹಚ್ಚುತ್ತಿದೆ. ಇದರಿಂದಾಗಿ ಜನರು ತಮ್ಮ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಜನರು ತಮ್ಮ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿರುವುದರಿಂದ ಮುಜುಗರಕ್ಕೀಡಾಗಿದ್ದ ಯುಪಿ ಸರ್ಕಾರವು, ಸಮಸ್ಯೆ ಬರೆದ ಯುವಕನ ಮೇಲೆ ಎಫ್‌ಐಆರ್‌ ದಾಖಲು ಮಾಡಿ ಎಚ್ಚರಿಕೆ ಕೂಡಾ ರವಾನಿಸಿತ್ತು. ಆದರೆ ಸುಪ್ರೀಂಕೋರ್ಟ್ ಅದರ ವಿರುದ್ದ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದು, ಸಮಸ್ಯೆ ಬರೆಯುವವರಿಗೆ ತೊಂದರೆ ಮಾಡದಂತೆ ಹೇಳಿತ್ತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ಕೊರೊನಾ ಎರಡನೆ ಅಲೆ ಬರಲಿದೆ ಎಂದು ಹಲವಾರು ತಜ್ಞರು ಈ ಮೊದಲೆ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮುಳುಗಿತ್ತು. ಇದೀಗ ದೇಶದಾದ್ಯಂತ ಜನರು ತೀವ್ರ ಸಂಕಷ್ಟದಲ್ಲಿದ್ದು ಪ್ರಧಾನಿ ಮೋದಿಯ ನಿಷ್ಕ್ರೀಯತೆಯನ್ನು ಪ್ರಶ್ನಿಸಿದ್ದು, ‘ಬೆನ್ನೆಲುಬಿಲ್ಲದ ಮೋದಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾರಮ್ ರಾಜು ಅವರು, “ಮೋದಿಗೆ ಯಾಕೆ ‘ಬೆನ್ನೆಲುಬಿಲ್ಲ’ ಎಂದರೆ, ಕೊರೊನಾವನ್ನು ಅವರು ಸರಿಯಾಗಿ ನಿರ್ವಹಣೆ ಮಾಡದೆ ಸಾವಿರಾರು ಜನರು ಆಮ್ಲಜನಕ, ಔಷಧಿ ಮತ್ತು ಇತರ ಆರೋಗ್ಯ ಸೌಲಭ್ಯದ ಕೊರತೆಯಿಂದಾಗಿ ಸಾಯುತ್ತಿದ್ದಾರೆ. ಆದರೆ ಅವರು ತಮ್ಮ ಹೊಸ ಮನೆ, ಸೆಂಟ್ರಲ್ ವಿಸ್ಟಾಕ್ಕಾಗಿ ಸಾವಿರಾರು ಕೋಟಿಗಳನ್ನು ಖರ್ಚು ಮಾಡುತ್ತಿದ್ದಾರೆ. ಶೇಮ್‌’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಸಯಿದ್ ಜಿಬ್ರಾನ್ ಅವರು, “ನಾನು ಮೋದಿಗೆ ಬೆಂಬಲಿಸುತ್ತೇನೆ, ಯಾಕೆಂದರೆ ಅವರು ಅವರದೇ ಜನರನ್ನು ಕೊಲ್ಲುತ್ತಿದ್ದಾರೆ. ಒಂದು ಕ್ಷಣ ಯುಪಿಯಲ್ಲಿ ಮೃತಪಟ್ಟ ಜನರನ್ನು ನೋಡಿ. ಹಾಗೆ ಹೋಗುತ್ತಿರಿ ಮೋದಿ” ಎಂದು ಕಾರ್ಟೂನ್ ಒಂದರ ಚಿತ್ರವನ್ನು ಟ್ವೀಟ್ ಮಾಡಿ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬೆಂಗಳೂರು ‘ಬೆಡ್‌ಬ್ಲಾಕ್‌’ ಪ್ರಕರಣದಲ್ಲಿ ಅನಾವಶ್ಯಕವಾಗಿ ಮುಸ್ಲಿಮರ ಹೆಸರನ್ನು ಮುನ್ನಲೆಗೆ ತಂದು ಕೋಮುವಾದಿಕರಣ ಮಾಡುವ ಪ್ರಯತ್ನಪಟ್ಟ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರ ರಾಜೀನಾಮೆ ಕೇಳಿ #TejasviSuryaExposed, #DiaperSuryaExposed, ಕೂಡಾ ಟ್ರೆಂಡ್ ಆಗುತ್ತಿದೆ.

ಅವರು ಸ್ವತಃ ಬೆಡ್‌ಬ್ಲಾಕ್‌ ದಂಧೆಯ ಪ್ರಮುಖ ಆರೋಪಿಯೆಂದು ‘ವಿಜಯ ಕರ್ನಾಟಕ’ ವರದಿಯಲ್ಲಿ ಹೇಳಲಾಗಿರುವ ಆರೋಪಿ ಶಾಸಕ ಸತೀಶ್ ರೆಡ್ಡಿ ಅವರೊಂದಿಗೆ ಬೆಂಗಳೂರಿನ ವಾರ್‌ರೂಂ ಒಂದಕ್ಕೆ ದಾಳಿ ಮಾಡಿದ್ದರು. ಅಲ್ಲಿ ಅವರು ಹಗರಣದ ದಾರಿ ತಪ್ಪಿಸಲು ಬೇಕಾಗಿ ಹಗರಣಕ್ಕೆ ಕೋಮು ಬಣ್ಣ ಹಚ್ಚಿದ್ದರು. ಇದರಿಂದಾಗಿ ಬಿಬಿಎಂಪಿ 17 ಜನ ಸಿಬ್ಬಂದಿಯನ್ನು ‘ಮುಸ್ಲಿಂ’ ಎಂಬ ಕಾರಣಕ್ಕೆ ಕೆಲಸದಿಂದ ವಜಾ ಮಾಡಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಇದರ ವಿರುದ್ದ ಕೂಡಾ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಬಿಬಿಎಂಪಿ ಈ ಪ್ರಕರಣದಲ್ಲಿ ಕ್ಷಮೆ ಕೇಳಬೇಕು ಎಂದು #BBMP_MustApologise ಆಗ್ರಹಿಸಿದ್ದಾರೆ. ಜೊತೆಗೆ ಬೆಡ್‌ಬ್ಲಾಕ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಶಾಸಕ ಸತೀಶ್ ರೆಡ್ಡಿಯನ್ನು ಬಂಧಿಸಬೇಕು #ArrestBJPMLASatish ಎಂದು ಕೂಡಾ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಡಾ. ರಿಹಾನ ಅವರು, “ತೇಜಸ್ವಿ ಸೂರ್ಯ ನಿಮ್ಮ ಆಪ್ತ ಸತೀಶ್ ರೆಡ್ಡಿ ಈ ಇಡೀ ಬೆಡ್‌ಸ್ಕ್ಯಾಮ್‌ನ ಹಿಂದೆ ಇದ್ದಾರೆ. ಅಮಾಯಕರನ್ನು ದೂಷಿಸಿರುವ ನೀವು, ಆದ ಪ್ರಮಾದಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಬಿಬಿಎಂಪಿ ಕೂಡಾ ಬಿಜೆಪಿ ಗೂಂಡಾಗಳ ಅಣತಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು” ಎಂದು ಆಕ್ರಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ‘ಸರಕಾರಾತ್ಮಕ’ ಆಗಿಯಲ್ಲ

ಇಮ್ರಾನ್‌ ಖಾನ್ ಅವರು, “ತೇಜಸ್ವಿ ಸೂರ್ಯ ಅವರು ಕೋಮುವಾದಿ ಭಯೋತ್ಪಾದಕ. ಬಿಬಿಎಂಪಿ ಕಮಿಷನರ್‌ ಅವರನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಯಶ್ವಂತ್ ನೇತಾಜಿ ಅವರು, “ತೇಜಸ್ವಿ ಸೂರ್ಯ ಬಿಜೆಪಿಯ ಕೋಮುವಾದಿ ಏಜೆಂಟ್” ಎಂದು ಕೊರೊನಾಗಿಂತ ಅಪಾಯಕಾರಿ ಎಂದು ಬರೆದಿರುವ ತೇಜಸ್ವಿ ಸೂರ್ಯ ಚಿತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...