Homeಮುಖಪುಟಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ವರ್ಷ ಕಾಶ್ಮೀರಕ್ಕೆ ಭೇಟಿ ನೀಡಿದಾಗ ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದನ್ನು ಪ್ರಶ್ನಿಸಿ  ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಉತ್ತರ ಪ್ರದೇಶದ ಪ್ರಯಾಗ್‌ರಾಜ್ (ಅಲಹಾಬಾದ್) ಜಿಲ್ಲಾ ನ್ಯಾಯಾಲಯವು ಪ್ರಧಾನಿ ಕಚೇರಿ (PMO) ಗೆ ನೋಟಿಸ್ ಜಾರಿ ಮಾಡಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಮಾರ್ಚ್ 2 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ವಕೀಲ ರಾಕೇಶ್ ನಾಥ್ ಪಾಂಡೆ ಅವರು ಸಲ್ಲಿಸಿದ ಮೇಲ್ವಿಚಾರಣಾ ಅರ್ಜಿಯ ಕುರಿತು ವಕೀಲರ ವಾದವನ್ನು ಆಲಿಸಿದ ನಂತರ ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿ ಆದೇಶ ನೀಡಿದ್ದಾರೆ.

ಕಾಶ್ಮೀರದ ನೌಶೇರಾದಲ್ಲಿ ಪ್ರಧಾನಿ ಸೇನಾ ಸಮವಸ್ತ್ರ ಧರಿಸಿದ್ದನ್ನು ಪ್ರಶ್ನಿಸಿ ವಕೀಲ ರಾಕೇಶ್ ನಾಥ್ ಪಾಂಡೆ ಅವರು ಪ್ರಧಾನಿ ಮೋದಿ ವಿರುದ್ಧ ಸೆಕ್ಷನ್ 153 (3) ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಧಾನಿ ವಿರುದ್ಧ ಮೊಕದ್ದಮೆ ದಾಖಲು ಮಾಡುವಂತೆ ಆದೇಶಿಸುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ನವೆಂಬರ್ 4, 2021 ರಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಪ್ರಧಾನಿ ಭಾರತೀಯ ಸೇನೆಯ ಸಮವಸ್ತ್ರವನ್ನು ಧರಿಸಿದ್ದರು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 140 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ.  ಈ ಸೆಕ್ಷನ್, ನಾಗರಿಕರು ಸೈನಿಕ, ನೌಕಾದಳ, ವಾಯುದಳದ ಸಮವಸ್ತ್ರವನ್ನು ಧರಿಸುವುದನ್ನು ತಡೆಯುತ್ತದೆ. ಹೀಗಾಗಿ ಪ್ರಧಾನಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಲಾಗಿದೆ.

ಇದಕ್ಕೂ ಮೊದಲು ಡಿಸೆಂಬರ್ 21, 2021 ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹರೇಂದ್ರ ನಾಥ್ ಅವರು ಅರ್ಜಿಯನ್ನು ಆಲಿಸಿದರು. ಆಗ ನ್ಯಾಯಾಲಯವು ಈ ಘಟನೆ ನ್ಯಾಯಾಲಯದ ವ್ಯಾಪ್ತಿಯಲ್ಲಿ ನಡೆದಿಲ್ಲ ಎಂದು ಹೇಳಿತ್ತು. ಸ್ಥಳೀಯ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಮ್ಯಾಜಿಸ್ಟ್ರೇಟ್ ಅವರು ಈ ವಿಷಯವನ್ನು ಆಲಿಸಬಹುದು ಎಂದು ಸಿಜೆಎಂ ಹರೇಂದ್ರ ನಾಥ್ ಅವರು ನಿರ್ವಹಣೆಯ ಆಧಾರದ ಮೇಲೆ ಅರ್ಜಿಯನ್ನು ತಿರಸ್ಕರಿಸಿದ್ದರು.

ಈ ತಿರಸ್ಕೃತ ಆದೇಶವನ್ನು ಪ್ರಶ್ನಿಸಿ ವಕೀಲ ರಾಕೇಶ್ ನಾಥ್ ಪಾಂಡೆ ಜಿಲ್ಲಾ ನ್ಯಾಯಾಧೀಶರ ಮುಂದೆ ಮೇಲ್ವಿಚಾರಣಾ ಅರ್ಜಿಯನ್ನು ಸಲ್ಲಿಸಿದ್ದರು. ಮೇಲ್ವಿಚಾರಣಾ ಅರ್ಜಿಯನ್ನು ಆಲಿಸಿದ ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...