Homeಮುಖಪುಟಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ವರ್ಷ ಕಾಶ್ಮೀರಕ್ಕೆ ಭೇಟಿ ನೀಡಿದಾಗ ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದನ್ನು ಪ್ರಶ್ನಿಸಿ  ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಉತ್ತರ ಪ್ರದೇಶದ ಪ್ರಯಾಗ್‌ರಾಜ್ (ಅಲಹಾಬಾದ್) ಜಿಲ್ಲಾ ನ್ಯಾಯಾಲಯವು ಪ್ರಧಾನಿ ಕಚೇರಿ (PMO) ಗೆ ನೋಟಿಸ್ ಜಾರಿ ಮಾಡಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಮಾರ್ಚ್ 2 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ವಕೀಲ ರಾಕೇಶ್ ನಾಥ್ ಪಾಂಡೆ ಅವರು ಸಲ್ಲಿಸಿದ ಮೇಲ್ವಿಚಾರಣಾ ಅರ್ಜಿಯ ಕುರಿತು ವಕೀಲರ ವಾದವನ್ನು ಆಲಿಸಿದ ನಂತರ ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿ ಆದೇಶ ನೀಡಿದ್ದಾರೆ.

ಕಾಶ್ಮೀರದ ನೌಶೇರಾದಲ್ಲಿ ಪ್ರಧಾನಿ ಸೇನಾ ಸಮವಸ್ತ್ರ ಧರಿಸಿದ್ದನ್ನು ಪ್ರಶ್ನಿಸಿ ವಕೀಲ ರಾಕೇಶ್ ನಾಥ್ ಪಾಂಡೆ ಅವರು ಪ್ರಧಾನಿ ಮೋದಿ ವಿರುದ್ಧ ಸೆಕ್ಷನ್ 153 (3) ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಧಾನಿ ವಿರುದ್ಧ ಮೊಕದ್ದಮೆ ದಾಖಲು ಮಾಡುವಂತೆ ಆದೇಶಿಸುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ನವೆಂಬರ್ 4, 2021 ರಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಪ್ರಧಾನಿ ಭಾರತೀಯ ಸೇನೆಯ ಸಮವಸ್ತ್ರವನ್ನು ಧರಿಸಿದ್ದರು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 140 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ.  ಈ ಸೆಕ್ಷನ್, ನಾಗರಿಕರು ಸೈನಿಕ, ನೌಕಾದಳ, ವಾಯುದಳದ ಸಮವಸ್ತ್ರವನ್ನು ಧರಿಸುವುದನ್ನು ತಡೆಯುತ್ತದೆ. ಹೀಗಾಗಿ ಪ್ರಧಾನಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಲಾಗಿದೆ.

ಇದಕ್ಕೂ ಮೊದಲು ಡಿಸೆಂಬರ್ 21, 2021 ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹರೇಂದ್ರ ನಾಥ್ ಅವರು ಅರ್ಜಿಯನ್ನು ಆಲಿಸಿದರು. ಆಗ ನ್ಯಾಯಾಲಯವು ಈ ಘಟನೆ ನ್ಯಾಯಾಲಯದ ವ್ಯಾಪ್ತಿಯಲ್ಲಿ ನಡೆದಿಲ್ಲ ಎಂದು ಹೇಳಿತ್ತು. ಸ್ಥಳೀಯ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಮ್ಯಾಜಿಸ್ಟ್ರೇಟ್ ಅವರು ಈ ವಿಷಯವನ್ನು ಆಲಿಸಬಹುದು ಎಂದು ಸಿಜೆಎಂ ಹರೇಂದ್ರ ನಾಥ್ ಅವರು ನಿರ್ವಹಣೆಯ ಆಧಾರದ ಮೇಲೆ ಅರ್ಜಿಯನ್ನು ತಿರಸ್ಕರಿಸಿದ್ದರು.

ಈ ತಿರಸ್ಕೃತ ಆದೇಶವನ್ನು ಪ್ರಶ್ನಿಸಿ ವಕೀಲ ರಾಕೇಶ್ ನಾಥ್ ಪಾಂಡೆ ಜಿಲ್ಲಾ ನ್ಯಾಯಾಧೀಶರ ಮುಂದೆ ಮೇಲ್ವಿಚಾರಣಾ ಅರ್ಜಿಯನ್ನು ಸಲ್ಲಿಸಿದ್ದರು. ಮೇಲ್ವಿಚಾರಣಾ ಅರ್ಜಿಯನ್ನು ಆಲಿಸಿದ ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...